ಚಂದ್ರಶೇಖರ ಶ್ರೀಗೆ ಕನ್ನಡ ದೀಪ ಪ್ರಶಸ್ತಿ


Team Udayavani, Apr 23, 2019, 1:00 PM IST

bel-3

ಬೆಟಗೇರಿ: ಭಾಗೋಜಿಕೊಪ್ಪದ ಮಣ್ಣಿಗೆ ಒಂದು ದಿವ್ಯ ಶಕ್ತಿಯಿದ್ದು, ಇಂತಹ ಪುಣ್ಯ ನೆಲದ ‘ಕನ್ನಡ ದೀಪ’ ಪ್ರಶಸ್ತಿ ನನಗೆ ದೊರೆತಿರುವುದು ನನ್ನ ಭಾಗ್ಯ ಎಂದು ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಮೀಪದ ಭಾಗೋಜಿಕೊಪ್ಪದ ಶಿವಯೋಗೀಶ್ವರ ಹಿರೇಮಠದಲ್ಲಿ ನಡೆದ ‘ಕನ್ನಡ ದೀಪ’ ಪ್ರಶಸ್ತಿ ಪ್ರದಾನ, ಗುರುಲಿಂಗ ಸ್ವಾಮಿಗಳ ಪುಣ್ಯಾರಾಧನೆ ಹಾಗೂ ಶಿವಯೋಗೀಶ್ವರ ಹಿರೇಮಠದ ಜಾತ್ರಾ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ 2018-19ನೇ ಸಾಲಿನ ‘ಕನ್ನಡ ದೀಪ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಸಾಹಿತ್ಯ ದಿಗ್ಗಜ ಡಿ.ಎಸ್‌. ಕರ್ಕಿ, ಸಿ.ಕೆ. ಬಾಗೋಜಿ, ಅಥಣಿ ಶಿವಯೋಗಿಗಳು, ನಾಗನೂರ ಡಾ| ಶಿವಬಸವ ಮಹಾಸ್ವಾಮಿಜಿ ಹಾಗೂ ರಾಜಕಾರಣಿ ಎ.ಎಲ್.ಪಂಚಗಾಂವಿ ಸೇರಿದಂತೆ ಹಲವಾರು ಮಹನೀಯರನ್ನು ಈ ನಾಡಿಗೆ ನೀಡಿದ ಕೊಡುಗೆ ಭಾಗೋಜಿಕೊಪ್ಪ ಗ್ರಾಮಕ್ಕೆ ಸಲ್ಲುತ್ತದೆ ಎಂದರು.

ವೀರಭದ್ರ ಶಿವಯೋಗಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಅವರು ಮಾತನಾಡಿ, ಅಥಣಿಯ ಶಿವಯೋಗಿಗಳು ಕನ್ನಡ ನಾಡು ಕಂಡ ಓರ್ವ ಸರ್ವಶ್ರೇಷ್ಠ ಸಂತರು, ಪವಾಡ ಪುರುಷರು, ಬಡವರ ಕಾಮಧೇನು ಆಗಿದ್ದರು. ಅವರ ಜೀವನ ಆದರ್ಶ ತತ್ವಗಳನ್ನು ಭಕ್ತರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಭಾಗೋಜಿಕೊಪ್ಪ ಶಿವಯೋಗೀಶ್ವರ ಹಿರೇಮಠದ ಪೀಠಾಧ್ಯಕ್ಷ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕಿರುತೆರೆ ನಟಿ ದೀಪಿಕಾ ಅವರನ್ನು ಶ್ರೀಮಠದ ವತಿಯಿಂದ ಸತ್ಕರಿಸಲಾಯಿತು.

ಈ ವೇಳೆ ಸತ್ತಿಗೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬಿಸಗುಪ್ಪಿಯ ರೇಣುಕಾ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಚಿಪ್ಪಲಕಟ್ಟಿಯ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕಪರಟ್ಟಿ ಬಸವರಾಜ ಹಿರೇಮಠ, ನಾಗನೂರಿನ ಕಾವ್ಯ ಅಮ್ಮನವರು, ಹೊಸೂರಿನ ಅನ್ನಪೂರ್ಣ ಮಾತೋಶ್ರೀ, ಉಮೇಶ ಕೊಳವಿ, ಮಹಾದೇವಗೌಡ ಪಾಟೀಲ, ಮಲ್ಲಿಕಾರ್ಜುನ ಗಾಣಗಿ ಇತರರು ಇದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.