ಸುವರ್ಣ ಸೌಧದಲ್ಲಿ ಕನ್ನಡ ಡಿಂಡಿಮ

ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನೇ ಬಳಸುವ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

Team Udayavani, Oct 29, 2021, 7:28 PM IST

ಸುವರ್ಣ ಸೌಧದಲ್ಲಿ ಕನ್ನಡ ಡಿಂಡಿಮ

ಬೆಳಗಾವಿ: ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ, ವಿವಿಧ ಸಂಘಟನೆಗಳ ಪ್ರತಿಭಟನೆ ಮಾತ್ರ ಕೇಳುತ್ತಿದ್ದ ಸುವರ್ಣ ವಿಧಾನಸೌಧದ ಆವರಣದಲ್ಲಿ ಗುರುವಾರ ಕನ್ನಡದ ಕಂಪು ಮಾರ್ದನಿಸಿತು. ಸಾವಿರಾರು ಕನ್ನಡ ಅಭಿಮಾನಿಗಳು ಒಂದೇ ಸ್ವರದಲ್ಲಿ ಕನ್ನಡ ಹಾಡುಗಳನ್ನು ಹಾಡುವ ಮೂಲಕ ಗಡಿ ಜಿಲ್ಲೆಯಲ್ಲಿ ಕನ್ನಡದ ಕಂಪು ಪಸರಿಸಿದರು. ಸಾವಿರಾರು ಕಂಠದಲ್ಲಿ ಮೊಳಗಿದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ ಗಾಯನ ಅಲೆ ಅಲೆಯಾಗಿ ತೇಲಿದವು. ಈ ವಿಶಿಷ್ಟ ಕಾರ್ಯಕ್ರಮ ಗಡಿ ಭಾಗದಲ್ಲಿ ಕನ್ನಡದ ಬೇರುಗಳು ಮತ್ತಷ್ಟು ಗಟ್ಟಿಗೊಳ್ಳುವಂತೆ ಮಾಡಿತು.

ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಲಕ್ಷ ಕಂಠ ಕನ್ನಡ ಗೀತಗಾಯನ ಕಾರ್ಯಕ್ರಮದ ಅಂಗವಾಗಿ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಲಕ್ಷ ಕಂಠ ಗೀತಗಾಯನ ನಡೆಯಿತು. ಸಾವಿರಾರು ವಿದ್ಯಾರ್ಥಿಗಳು, ಅಧಿಕಾರಿಗಳು ಗಾಯನವನ್ನು ಪ್ರಸ್ತುತಪಡಿಸಿದರು.

ರಾಷ್ಟ್ರಕವಿ ಕುವೆಂಪು ವಿರಚಿತ ಬಾರಿಸು ಕನ್ನಡ ಡಿಂಡಿಮವ, ನಿಸಾರ್‌ ಅಹಮದ್‌ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಸಾವಿರಾರು ವಿದ್ಯಾರ್ಥಿಗಳು ಸುಮಧುರವಾಗಿ ಹಾಡುವ ಮೂಲಕ ಕನ್ನಡ ನಾಡು-ನುಡಿಯ ಪ್ರೇಮವನ್ನು ಅನಾವರಣಗೊಳಿಸಿದರು.

ಸಂಗೀತ ಶಿಕ್ಷಕರಾದ ವಿನಾಯಕ ಮೋರೆ ನೇತೃತ್ವದಲ್ಲಿ ಬೆಳಗಾವಿಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಗೀತಗಾಯನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿ ಎಲ್ಲರ ಗಮನಸೆಳೆದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸುವರ್ಣ ಸೌಧದಲ್ಲಿ ಕನ್ನಡ ಡಿಂಡಿಮ

ಆಡಳಿತ, ಪತ್ರವ್ಯವಹಾರ ಸೇರಿದಂತೆ ಪ್ರತಿ ಸಂದರ್ಭದಲ್ಲೂ ಕನ್ನಡವನ್ನೇ ಬಳಸುವುದರ ಜೊತೆಗೆ ಕನ್ನಡ ನಾಡಿನಲ್ಲಿ ವಾಸಿಸುವ ಕನ್ನಡೇತರ ಭಾಷಿಕರಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವುದಾಗಿ ಎಲ್ಲರೂ ಪ್ರತಿಜ್ಞೆ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಬೆಳಗಾವಿ ಸಂಸದರಾದ ಮಂಗಲಾ ಅಂಗಡಿ ಅವರು, ಕನ್ನಡದ ಶ್ರೇಷ್ಠತೆಯನ್ನು ಸಾರುವುದು ಈ ಅಭಿಯಾನದ ವಿಶೇಷತೆಯಾಗಿದೆ. ಕನ್ನಡ ಗೀತಗಾಯನ ಅದ್ಭುತ ಕಾರ್ಯಕ್ರಮವಾಗಿದ್ದು, ಮಕ್ಕಳು ಸೇರಿದಂತೆ ಎಲ್ಲರೂ ಕನ್ನಡ ಪ್ರೇಮ ಮೆರೆಯಲು ಈ ಅಭಿಯಾನ ಉತ್ತಮ ಅವಕಾಶವಾಗಿದೆ ಎಂದು ಹೇಳಿದರು.

ಈ ವಿನೂತನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಬಿ.ಪುಂಡಲೀಕ ಮೊದಲಾದವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಸ್ವಾಗತಿಸಿದರು. ಗೀತ ಗಾಯನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.