Kannada; ಗೋಕಾಕ್ ಮಾದರಿ ಕನ್ನಡ ನಾಮಫಲಕ ಚಳವಳಿ: ಕರವೇ ನಾರಾಯಣಗೌಡ

ನೂರು ಬಾರಿ ಜೈಲಿಗಟ್ಟಿದ್ರೂ ಹೋರಾಟ ನಿಲ್ಲದು.... ಹೊಸ ಪ್ರಾದೇಶಿಕ ಪಕ್ಷ ಉದಯ

Team Udayavani, Apr 13, 2024, 7:10 PM IST

1-adsadasd

ಬೀದರ್ : ಗೋಕಾಕ್ ಚಳವಳಿ ಮಾದರಿಯಲ್ಲಿ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ಅಳವಡಿಕೆ ಚಳವಳಿ ನಡೆಸಲಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಶನಿವಾರ ಹೇಳಿದರು.

ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಕರವೇ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರುಗಳ ಸಭೆ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರವೇ ಹೋರಾಟದ ಫಲದಿಂದಲೇ ಇಂದು ರಾಜ್ಯದಾದ್ಯಂತ ಕಣ್ಣು ಕುಕ್ಕುವಂತೆ ಕನ್ನಡ ನಾಮಫಲಕಗಳು ರಾರಾಜಿಸುತ್ತಿವೆ. ಕನ್ನಡದ ನೆಲದಲ್ಲಿ ಹೋರಾಟದ ಕಿಚ್ಚಿದೆ. ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಕಾರ್ಯಕರ್ತರು ಗಟ್ಟಿಯಾಗಿ ನಿಲ್ಲುವ ಅವಶ್ಯಕತೆ ಇದೆ ಎಂದು ಕರೆ ನೀಡಿದರು.

ಡಿ. 27ರ ನಂತರ ನನಗೆ 14 ದಿನಗಳ ಜೈಲುವಾಸ ಆಯಿತು. ನಾನು ಮೂರು ತಿಂಗಳು ಹೊರಗೆ ಬರದಂತೆ ನೋಡಿಕೊಳ್ಳುವಂತೆ ಸಿಎಂ ಸೂಚಿಸಿದ್ದರು. ಮೂರು ತಿಂಗಳಲ್ಲ, ಮೂರು ವರ್ಷ ನನಗೆ ಜೈಲಿಗೆ ಹಾಕಿದರೂ ನನ್ನಲ್ಲಿರುವ ಕನ್ನಡದ ಕಿಚ್ಚು, ಛಲ ಕಡಿಮೆಯಾಗಲ್ಲ. ಇಂತಹ ನೂರು ಸಿದ್ದರಾಮಯ್ಯ ಮತ್ತು ಡಿಕೆಶಿ ಬಂದರೂ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ. ರಾಜಕಾಣಿಗಳು ರಾಜ್ಯದ ಆಸ್ತಿ ಲೂಟಿ ಮಾಟಿ ಜೈಲಿಗೆ ಹೋದರೆ, ನಾನು ಈ ನಾಡಿನ ನೆಲ ಜಲ ಭಾಷೆಗಾಗಿ ಹೋರಾಡಿ ಜೈಲಿಗೆ ಹೋಗುತ್ತಿದ್ದೇನೆ. ಕಾರ್ಯಕರ್ತರು ನನ್ನೊಂದಿಗಿರುವಾಗ ನಾನು ಯಾವುದಕ್ಕೂ ಜಗ್ಗಲ್ಲ, ಬಗ್ಗಲ್ಲ ಎಂದು ಗುಡುಗಿದರು.

ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳಕರ್ ಮಾತನಾಡಿ, ಜಿಲ್ಲೆಯಲ್ಲಿ ನಾಡು ನುಡಿಗಾಗಿ ಹಾಗೂ ಕನ್ನಡ ನಾಮಫಲಕ ಅಳವಡಿಕೆಗಾಗಿ ಹೋರಾಟ ಮಾಡಿದಾಗ ಹಲವು ತೊಂದರೆಗಳನ್ನು ನಾನು ಅನುಭವಿಸಬೇಕಾಯಿತು. ನನ್ನ ಮೇಲೆ ದೂರು ದಾಖಲಿಸಿದರೂ ನಾನು ಯಾವುದಕ್ಕೂ ಹೆದರದೆ ಹೋರಾಟ ಮುಂದುವರೆಸಿದೆ. ನಮಗೆ ನಾರಾಯಣಗೌಡರೇ ಸಿಎಂ ಆಗಿದ್ದಾರೆ. ಜಿಲ್ಲಾಧ್ಯಕ್ಷರು ಒಬ್ಬೊಬ್ಬ ಸಂಸದರಂತೆ ಕೆಲಸ ಮಾಡಿದಾಗ ಮಾತ್ರ ರಾಜ್ಯದಲ್ಲಿ ಕನ್ನಡವನ್ನು ಪ್ರಬಲವಾಗಿ ಉಳಿಸಿ ಬೆಳೆಸಬಹುದು ಎಂದು ಹೇಳಿದರು.

ವಿಶ್ವನಾಥ ಗೌಡ ಸ್ವಾಗತಿಸಿದರೆ ಗೋಪಾಲ ಕುಲಕರ್ಣಿ ನಿರೂಪಿಸಿ ಸೋಮಶೇಖರ ಸಜ್ಜನ್ ವಂದಿಸಿದರು. ಕಾರ್ಯಕ್ರಮದಲ್ಲಿ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಖಾದರ ಪಾಶಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಸಣ್ಣೀರಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿನೋದ ಅಬ್ಬಿಗೆರೆ, ಪ್ರಮುಖರಾದ ಸಚಿನ ಗಾಣಿಗೇರ್, ಸಹನಾ ಶೇಖರ, ಹೇಮಲತಾ, ಮಮತಾ ಗೌಡ, ವಿನೋದರೆಡ್ಡಿ, ಭೀಮು ನಾಯಕ, ಹಣಮಂತಪ್ಪ ಅಬ್ಬಿಗೆರೆ, ಗಿರಿಶಾನಂದ, ಕುಮಾರ್, ಮಹೇಶ ಕಾಶಿ, ಅನಿಲ ಹೆಡೆ, ಸುಭಾಷ ಗಾಯಕವಾಡ, ಸಚಿನ ಜಟಗೊಂಡ, ಸಚಿನ ತಿಬಶೆಟ್ಟಿ ಮತ್ತಿತರರಿದ್ದರು.

‘ಹೊಸ ಪ್ರಾದೇಶಿಕ ಪಕ್ಷ ಉದಯ’

ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರುಗಳ ಬ್ಲಡ್ ಗ್ರೂಪ್ ಒಂದೇ. ಹೀಗಾಗಿ ಯಾವ ಪಕ್ಷಗಳಿಗೂ ನಾನು ನಂಬಲ್ಲ. ರಾಜ್ಯಕ್ಕೆ ಒಂದು ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದೆ. ಶೀಘ್ರದಲ್ಲಿಯೇ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉದಯವಾಗಲಿದೆ. ಈಗಾಗಲೇ ಪ್ರತಿ ಜಿಲ್ಲೆಯಲ್ಲಿ ನೂರು ಸ್ವಯಂಸೇವಕರನ್ನು ಸಜ್ಜುಗೊಳಿಸಲಾಗುತ್ತಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಅಂತ್ಯಗೊಂಡಿದೆ. ಹಲ್ಲು ಕಿತ್ತ ಹಾವಿನಂತಾಗಿದೆ ಎಂದು ನಾರಾಯಣಗೌಡ ಗುಡುಗಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.