ಪ್ರಾಧಿಕಾರ ರಚನೆಯ ಮರಾಠಿ ಕೃತಜ್ಞತಾ ನಾಮಫಲಕಕ್ಕೆ ಮಸಿ ಬಳಿದ ಕನ್ನಡಪರ ಕಾರ್ಯಕರ್ತರು
Team Udayavani, Nov 20, 2020, 6:04 PM IST
ಬೆಳಗಾವಿ: ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದಕ್ಕೆ, ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಮರಾಠಾ ಸಮುದಾಯದವರು ಅಳವಡಿಸಿದ್ದ ಮರಾಠಿ ಭಾಷೆಯ ಕೃತಜ್ಞತಾ ನಾಮಫಲಕಕ್ಕೆ ಕನ್ನಡ ಸಂಘಟನೆಯವರು ಕಪ್ಪು ಮಸಿ ಬಳಿದಿದ್ದಾರೆ.
ಕನ್ನಡ ಸಂಘಟನೆಯ ಇಬ್ಬರು ಕಾರ್ಯಕರ್ತರು ಕೈಯಲ್ಲಿ ಮಸಿ ಹಿಡಿದುಕೊಂಡು ಬಂದು ನಗರದ ಖಾನಾಪುರ ರಸ್ತೆಯ ಅನಗೋಳ ಕ್ರಾಸ್ನಲ್ಲಿ ಅಳವಡಿಸಿದ್ದ ನಾಮ ಫಲಕಕ್ಕೆ ಮಸಿ ಬಳಿದಿದ್ದಾರೆ. ಮರಾಠಿ ಭಾಷೆಯಲ್ಲಿದ್ದ ಈ ಫಲಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕ ಅಭಯ ಪಾಟೀಲ, ಮರಾಠಾ ಸಮುದಾಯದ ಮುಖಂಡರ ಭಾವಚಿತ್ರಗಳಿವೆ. ಇದಕ್ಕೆ ಮಸಿ ಬಳಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕನ್ನಡ ಸಂಘಟನೆಯ ಕಾರ್ಯಕರ್ತರಿಬ್ಬರು ಹೆಗಲಿಗೆ ಕೆಂಪು-ಹಳದಿ ಶಲ್ಯಾ ಹಾಕಿಕೊಂಡು, ಕೈಯಲ್ಲಿ ಕಪ್ಪು ಮಸಿ ಹಿಡಿದುಕೊಂಡು ನಾಮಫಲಕದತ್ತ ನುಗ್ಗಿದ್ದಾರೆ. ನಂತರ ಫಲಕದ ಮೇಲೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಸಿ ಬಳಿಯುವುದನ್ನು ಇನ್ನೊಬ್ಬ ಕಾರ್ಯಕರ್ತ ಮೊಬೈಲ್ನಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಜೈಶ್ ಉಗ್ರರ 26/11 ಮಾದರಿ ದಾಳಿ ಸಂಚು ವಿಫಲ: ನಗ್ರೋಟಾ ಎನ್ ಕೌಂಟರ್ ಬಗ್ಗೆ ಮೋದಿ
ಮರಾಠಾ ಸಮುದಾಯದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಇದಕ್ಕೆ 50 ಕೋಟಿ ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಕನ್ನಡ ಸಂಘಟನೆಯವರು ವಿರೋಧ ವ್ಯಕ್ತಪಡಿಸುತ್ತಿದ್ದು, ಸದ್ಯ ಮರಾಠಿ ಫಲಕಕ್ಕೆ ಮಸಿ ಬಳಿದು ಈ ಮೂಲಕ ವಿರೋಧಿಸಿದ್ದಾರೆ.
ಇದೀಗ ಪೊಲೀಸರು ಈ ವಿಡಿಯೋವನ್ನು ಯಾವಾಗ ಚಿತ್ರಿಕರಿಸಲಾಗಿದೆ ಹಾಗೂ ಮಸಿ ಬಳಿದವರಾರು ಎಂಬುದರ ಕುರಿತಾಗಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಮತ್ತೆ ಏರಿಕೆ: ಪೆಟ್ರೋಲ್, ಡಿಸೇಲ್ ದರ ಹೆಚ್ಚಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ