ಮೈತ್ರಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ: ಸತೀಶ
Team Udayavani, Sep 17, 2018, 6:00 AM IST
ಬೆಳಗಾವಿ: ಕಾಂಗ್ರೆಸ್ನ ಬೇರೆ ಶಾಸಕರಿಂದ ಸಮ್ಮಿಶ್ರ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ. ಅದಕ್ಕೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಸತೀಶ ಜಾರಕಿಹೊಳಿ ಮೈತ್ರಿ ಸರ್ಕಾರ ಅಪಾಯದಲ್ಲಿದೆ ಎಂಬ ಸುಳಿವು ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ನಮ್ಮಿಂದ ಸರ್ಕಾರಕ್ಕೆ ಅಪಾಯವೂ ಇಲ್ಲ. ಇನ್ನೂ 24 ಗಂಟೆಗಳು ಬಾಕಿಯಿವೆ. ಆಗ ಏನು ಬೇಕಾದರೂ ಆಗಬಹುದು. ಬಿಜೆಪಿಯವರು ಆಪರೇಷನ್ ಕಮಲ ನಡೆಸಿರಬಹುದು. ಕೆಲವು ಶಾಸಕರು ಕಾಂಗ್ರೆಸ್ನಿಂದ ಆ ಪಕ್ಷಕ್ಕೆ ಹೋಗುತ್ತಿರಬಹುದು. ಹಣ ಕೊಟ್ಟು ಶಾಸಕರನ್ನು ಖರೀದಿಸುತ್ತಿದ್ದಾರೆಂಬ ಆರೋಪಗಳೂ ಕೇಳಿ ಬಂದಿವೆ. ಆದರೆ ಇದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಕಾಂಗ್ರೆಸ್ ತೊರೆದು ಬಿಜೆಪಿಗೆ ಕೆಲ ಶಾಸಕರು ಹೋಗುವ ನಿರ್ಧಾರ ಮಾಡಿದ್ದರೆ ನಾವು ಏನೂ ಮಾಡಲು ಆಗುವುದಿಲ್ಲ. ಅದು ಅವರ ವೈಯಕ್ತಿಕ ವಿಷಯ. ಹೀಗಾಗಿ ಪಕ್ಷ ಬಿಟ್ಟು ಹೋಗುವವರ ಬಗ್ಗೆ ನಮಗೆ ಹೇಳಲಿಕ್ಕೆ ಆಗುವುದಿಲ್ಲ. ಈ ಎಲ್ಲ ಬೆಳವಣಿಗೆಯ ನಡುವೆಯೂ ಸರ್ಕಾರ ಸುಭದ್ರವಾಗಿರಲಿದೆ ಎಂಬ ವಿಶ್ವಾಸವಿದೆ ಎಂದರು.
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬಳಿ ಚರ್ಚಿಸಲು ಯಾವುದೇ ವಿಷಯವಿಲ್ಲ. ಸೋಮವಾರ ಬೆಂಗಳೂರಿಗೆ ಹೋಗುತ್ತಿದ್ದೇನೆ. ಒಂದು ವೇಳೆ ಅವರು ಮಾತುಕತೆಗೆ ಕರೆದರೆ ಹೋಗುತ್ತೇನೆ ಎಂದರು.
ಸಚಿವ ರಮೇಶ ಜಾರಕಿಹೊಳಿ ಎಲ್ಲಿಯೂ ಹೋಗಿಲ್ಲ, ಗೋಕಾಕದಲ್ಲಿದ್ದಾರೆ. ನಾನೂ ಸಹ ಸಚಿವನಾಗಿದ್ದಾಗ ಖಾಸಗಿ ಕಾರನ್ನೇ ಬಳಸುತ್ತಿದ್ದೆ. ಅವರೂ ಸಹ ಈಗ ಖಾಸಗಿ ಕಾರನ್ನು ಬಳಕೆ ಮಾಡುತ್ತಿದ್ದಾರೆ. ಅದರಲ್ಲೇನೂ ವಿಶೇಷವಿಲ್ಲ. ನಮ್ಮಿಂದ ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ. ಸಿದ್ದರಾಮಯ್ಯ ಅವರ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಸಭೆ ನಡೆಸಿರುವುದು ರಾಜಕೀಯದಲ್ಲಿ ಸಹಜ. ಸಿದ್ದರಾಮಯ್ಯ ಒಬ್ಬ ಉಸ್ತುವಾರಿ. ಹೀಗಾಗಿ ಸಿಎಂ ಸೇರಿದಂತೆ ಪ್ರತಿಯೊಬ್ಬರೂ ಅವರ ಜತೆ ಚರ್ಚೆ ಮಾಡಲೇಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?