ಭಕ್ತರ ಸಲುಹಲು ಬಂದಳು ಮಹಾಲಕ್ಷ್ಮೀ 


Team Udayavani, Feb 20, 2019, 11:16 AM IST

20-february-14.jpg

ಖಾನಾಪುರ: ಪಶ್ಚಿಮ ಘಟ್ಟದ ನಿತ್ಯ ಹರಿದ್ವರ್ಣದ ಅರಣ್ಯ ಪ್ರದೇಶದಲ್ಲಿ ಭಕ್ತರನ್ನು ಸಲಹುತ್ತಿರುವ ಲಕ್ಷ್ಮೀ ದೇವಿಯ ಜಾತ್ರೆಯನ್ನು 12 ವರ್ಷಗಳ ನಂತರ ಫೆ.20 ರಿಂದ 28ರವರೆಗೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ತಾಲೂಕು ಹಾಗೂ ಪಟ್ಟಣದ ಸಮಸ್ತ ಭಕ್ತವೃಂದ ಜಾತ್ರೆಯನ್ನು ಸಂಭ್ರಮದಿಂದ ಆಚರಿಸಲು ಉತ್ಸಾಹಿತರಾಗಿದ್ದಾರೆ. ಈ ಹಿಂದೆ 2007ರಲ್ಲಿ ಜಾತ್ರೆಯನ್ನು ಆಚರಿಸಲಾಗಿತ್ತು. ಪಟ್ಟಣದ ಮಹಾಲಕ್ಷ್ಮೀ ಮಂದಿರದಲ್ಲಿ ಜಾತ್ರೆಯ ನಿಮಿತ್ತ ಹೊಸ ಮಹಾಲಕ್ಷ್ಮೀ ವಿಗ್ರಹವನ್ನು ಸ್ಥಾಪಿಸಲಾಗಿದೆ. ಈಗಾಗಲೆ ಮಂದಿರಕ್ಕೆ ಸುಣ್ಣ-ಬಣ್ಣ ಹಚ್ಚಿ ದೀಪಗಳಿಂದ ಅಲಂಕೃತಗೊಳಿಸಲಾಗಿದೆ.

ಜಾತ್ರೆ ಫೆ. 20 ರಿಂದ ಪಾರಂಭವಾಗಿ 9 ದಿನಗಳ ಕಾಲ ನಿರಂತರವಾಗಿ ನಡೆಯಲಿದೆ. ಮಂಗಳವಾರ ಬೆಳಗ್ಗೆ ಮಣ್ಣಿನಿಂದ ತಯಾರಿಸಿದ ಗ್ರಾಮದೇವಿಯ ಮೂರ್ತಿಯನ್ನು ವಿಧಿ ವಿಧಾನಗಳ ಮೂಲಕ ಪೂಜಿಸಿ ವಿವಾಹ ನೆರವೇರಿಸಿದ ನಂತರ ಲಕ್ಷ್ಮೀದೇವಿಯ ಮೂರ್ತಿಗೆ ಉಡಿ ತುಂಬುವ ಕಾರ್ಯ ನೆರವೇರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೂರ್ತಿ ಮೆರವಣಿಗೆಯನ್ನು ಹೊನ್ನಾಟದ ಮೂಲಕ ಕೈಗೊಳ್ಳಲಾಗುವುದು. ಅನಂತರ ದೇವಿಯ ಮೂರ್ತಿಯನ್ನು ಬಾಜಾರಪೇಟೆಯಲ್ಲಿ ಪ್ರತಿಷ್ಠಾನಗೊಳಿಸಲಾಗುವುದು. 9ದಿನಗಳ ಕಾಲ ದೇವಿ ಅದೇ ಸ್ಥಳದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾಳೆ.

ಪಟ್ಟಣದ ಜಾತ್ರೆಗೆ ತನ್ನದೇ ಆದ ಇತಿಹಾಸವಿದೆ. ಎಲ್ಲ ಪಂಗಡದ ಸಮಸ್ತ ಭಕ್ತರು ಭಕ್ತಿ ಪೂರ್ವಕವಾಗಿ ಜಾತ್ರೆಯನ್ನು ಆಚರಿಸುತ್ತಾರೆ. ತಾಲೂಕಿನಿಂದ ಮಹಾರಾಷ್ಟ್ರ, ಗೋವಾ, ಇತರ ರಾಜ್ಯಗಳಿಗೆ ಉದ್ಯೋಗ ಅರಿಸಿ ಹೋದ ಜನರು ತಂಡೋಪ ತಂಡವಾಗಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ. ಪಟ್ಟಣದಲ್ಲಿರುವ ಎಲ್ಲ ಜನರು ತಮ್ಮ ಮನೆಗಳಿಗೆ ಸುಣ್ಣ ಬಣ್ಣದಿಂದ ಅಲಂಕರಿಸಿ ದೀಪಗಳಿಂದ ಅಲಂಕಾರಗೊಳಿಸಿದ್ದಾರೆ. ಪಟ್ಟಣವು ಜಾತ್ರೆಯ ಸಲುವಾಗಿ ನವ ವಧುವಿನಂತೆ ಶೃಂಗಾರಗೊಂಡಿದೆ. ಪಟ್ಟಣದಲ್ಲಿ ಹೂಸ ಉಡುಗೆ ತೊಡುಗೆಗಳ ಖರೀದಿ ಕೂಡ ಜೋರಾಗಿ ನಡೆದಿದೆ.

ಸಮಸ್ತ ಭಕ್ತ ಮಂಡಳಿ ಈಗಾಗಲೆ ತಮ್ಮ ಸಂಬಂಧಿಕರಿಗೆ ಆಮಂತ್ರಣ ಪತ್ರ ನೀಡಿ ಜಾತ್ರೆಗೆ ಆಮಂತ್ರಿಸಿದ್ದಾರೆ. ಜಾತ್ರೆಗೆ ಅಪಾರ ಸಂಖ್ಯೆಯಲ್ಲಿ ಸುತ್ತಮುತ್ತಲಿನ ಸಂಬಂಧಿಕರು ಕೂಡ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಜಾತ್ರಾ ಕಮಿಟಿ ಕೂಡ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಫೆ. 28
ರಂದು ಜಾತ್ರೆ ಮುಕ್ತಾಯಗೊಳ್ಳಲಿದೆ. 

12 ವರ್ಷಗಳ ನಂತರ ಖಾನಾಪುರ ಪಟ್ಟಣದ ಮಹಾಲಕ್ಷ್ಮೀ ಜಾತ್ರೆಯನ್ನು ಆಚರಿಸಲಾಗುತ್ತಿದೆ. ಜಾತ್ರೆ ಆಚರಣೆಯಿಂದ ನಮ್ಮ ಸಾಂಸ್ಕೃತಿಯ ಪರಂಪರೆ ಸಂರಕ್ಷಣೆಯಾಗುತ್ತದೆ. 
ವಿಠ್ಠಲ್‌ ಹಲಗೆಕರ ಸಂಸ್ಥಾಪಕರು
ಮಹಾಲಕ್ಷ್ಮೀ ಗ್ರೂಪ್‌ ತೋಪಿನಕಟ್ಟಿ ಬಿಜೆಪಿ ಮುಂಖಡರು.

ಮಹಾಲಕ್ಷ್ಮೀ ದೇವಿಯು ಎಲ್ಲ ಸದ್ಭಕ್ತರ ಇಚ್ಛೆಗಳನ್ನು ಪೂರೈಸಲಿ.
ಶರದ್‌ ಕೇಶ ಕಾಮತ ಸಂಸ್ಥಾಪಕರು,
ಕೇಶ ಕಾಮತ ಫೌಂಡೇಶನ್‌ ನರೇಂದ್ರ ಮೋದಿ ವಿಚಾರ ವೇದಿಕೆ.

ತಿಮ್ಮಪ್ಪ ಗಿರಿಯಪ್ಪನವರ

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.