ಕೆಶಿಪ್ ಸ್ಥಳಾಂತರ: ಕೋನರೆಡ್ಡಿ ಸಮರ್ಥನೆ
Team Udayavani, Aug 12, 2018, 7:00 AM IST
ಬೆಳಗಾವಿ: ಬೆಳಗಾವಿಯಿಂದ ಕೆಶಿಪ್ ಕಚೇರಿಗಳನ್ನು ಹುದ್ದೆ ಸಮೇತ ಹಾಸನಕ್ಕೆ ಸ್ಥಳಾಂತರ ಮಾಡಿರುವ ಸಚಿವ ಎಚ್.ಡಿ. ರೇವಣ್ಣ ಅವರ ನಿರ್ಧಾರವನ್ನು ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಮರ್ಥಿಸಿಕೊಂಡರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿದ್ದ ಕೆಶಿಪ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಯೋಜನೆಗಳು ಪೂರ್ಣಗೊಂಡಿವೆ. ಇದನ್ನು ಅಧಿಕಾರಿಗಳೇ ಹೇಳಿದ್ದಾರೆ. ಹೀಗಿರುವಾಗ ಈ ಕಚೇರಿ ಇಲ್ಲಿ ಇದ್ದು ಏನು ಪ್ರಯೋಜನ. ಹೊಸ ಕಾಮಗಾರಿ ನಡೆಯುವ ಸ್ಥಳಗಳಿಗೆ ಕಚೇರಿಗಳು ಹೋಗಲೇಬೇಕು ಎಂದರು.
ನಾಳೆ ಹುಬ್ಬಳ್ಳಿ-ಧಾರವಾಡದಲ್ಲಿರುವ ಬಿಆರ್ಟಿಎಸ್ ಕಾಮಗಾರಿಗಳು ಪೂರ್ಣವಾದ ಮೇಲೆ ಅಲ್ಲಿರುವ ಕಚೇರಿ ಬೇರೆ ಕಡೆ ಕೆಲಸ ಆರಂಭವಾದರೆ ಅಲ್ಲಿಗೆ ಸ್ಥಳಾಂತರವಾಗಲೇ ಬೇಕು. ಅದೇ ರೀತಿ ಮೆಟ್ರೋ ಕೆಲಸ ಮುಗಿದ ಮೇಲೆ ಬೆಂಗಳೂರಿನಲ್ಲಿರುವ ಕಚೇರಿಗಳು ಬೇರೆ ಕಡೆ ಹೋಗಬೇಕು. ಅದೇ ರೀತಿ ಈಗ ಕೆಶಿಪ್ ಕಚೇರಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಸಚಿವರ ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡರು.
ಉತ್ತರ ಕರ್ನಾಟಕದ ಬಗ್ಗೆ ಸಮ್ಮಿಶ್ರ ಸರಕಾರ ಮಲತಾಯಿ ಧೊರಣೆ ತಾಳಿಲ್ಲ. ಇದು ಬಿಜೆಪಿಯವರ ಕೆಲಸ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್