Kittur: ಕಿತ್ತೂರು ಉತ್ಸವಕ್ಕೆ ಬರೆ ಎಳೆದ ಬರ; ಈ ಬಾರಿ ಸಂಭ್ರಮ ಡೌಟ್‌?

ಉತ್ಸವದ ಬಗ್ಗೆ ಅಧಿಕಾರಿಗಳು, ಶಾಸಕರು ಉತ್ಸಾಹವನ್ನೇ ತೋರಿಸುತ್ತಿಲ್ಲ

Team Udayavani, Sep 25, 2023, 5:53 PM IST

Kittur: ಕಿತ್ತೂರು ಉತ್ಸವಕ್ಕೆ ಬರೆ ಎಳೆದ ಬರ; ಈ ಬಾರಿ ಸಂಭ್ರಮ ಡೌಟ್‌?

ಚನ್ನಮ್ಮನ ಕಿತ್ತೂರು: ಬರದ ಹಿನ್ನೆಲೆಯಲ್ಲಿ ಐತಿಹಾಸಿಕ ಚನ್ನಮ್ಮನ ಕಿತ್ತೂರು ಉತ್ಸವ ಆಚರಣೆ ಈ ಬಾರಿ ಅನುಮಾನ! ಪ್ರತಿವರ್ಷವೂ ಈ ಹೊತ್ತಿಗಾಗಲೇ ಕನಿಷ್ಠ ಒಂದೆರಡಾದರೂ ಪೂರ್ವಭಾವಿ ಸಭೆಗಳು ಜರುಗಿ, ಉತ್ಸವದ ಆಚರಣೆಗೆ ಅಗತ್ಯವಿರುವ ಸಿದ್ಧತೆಗಳು ಚಾಲ್ತಿಯಲ್ಲಿರುತ್ತಿದ್ದವು. ಆದರೆ ಉತ್ಸವದ ದಿನಾಂಕ ಕೆಲವೇ ದಿನಗಳ ಅಂತರದಲ್ಲಿದ್ದರೂ ಉತ್ಸವದ ಬಗ್ಗೆ ಅಧಿಕಾರಿಗಳು, ಶಾಸಕರು ಉತ್ಸಾಹವನ್ನೇ ತೋರಿಸುತ್ತಿಲ್ಲ. ಒಂದೂ ಸಭೆ ನಡೆದಿಲ್ಲ. ಪೂರ್ವ ಸಿದ್ಧತೆಯೂ ಚುರುಕಾಗಿಲ್ಲ.
ಹೀಗಾಗಿ ಉತ್ತರ ಕರ್ನಾಟಕದ ದಸರಾ ಎಂದೇ ಹೆಸರಾಗಿರುವ ಕಿತ್ತೂರು ಉತ್ಸವದ ಆಚರಣೆ ಈ ಬಾರಿ ಅನುಮಾನ ಎನ್ನುವ
ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಕಳೆದ ಬಾರಿ ಮಾಜಿ ಶಾಸಕ ಮಹಾಂತೇಶ ದೊಡಗೌಡರ, ನಿಕಟಪೂರ್ವ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಸ್ಥಳೀಯ
ಮಠಾಧೀಶರು, ಚೆನ್ನಮ್ಮಳ ಅಭಿಮಾನಿಗಳು ಒಟ್ಟುಗೂಡಿ ರಾಜ್ಯ ಮಟ್ಟದ ಉತ್ಸವ ಆಚರಣೆಗೆ ಶ್ರಮಿಸಿದ್ದರು. ಮುಖ್ಯ ವೇದಿಕೆಯೊಂದಿಗೆ ಸಮಾನಾಂತರ ಮೂರು ಭವ್ಯ ವೇದಿಕೆಗಳನ್ನು ನಿರ್ಮಿಸಿ ‘ಸ್ವಾತಂತ್ರ್ಯದ ಬೆಳ್ಳಿಚುಕ್ಕಿ’ಯ ಸಾಹಸಗಾಥೆಯನ್ನು ಸ್ಮರಿಸಿಕೊಳ್ಳಲಾಗಿತ್ತು. ಆದರೆ ಈ ಬಾರಿ ಬರದ ಹಿನ್ನೆಲೆಯಲ್ಲಿ ಸರಳ ಉತ್ಸವ ಆಗುವುದೂ ಅನುಮಾನವೇ ಎನ್ನುವಂತಾಗಿದೆ.

ಬೈಲಹೊಂಗಲ ಉಪ ವಿಭಾಗಾಧಿಕಾರಿ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪ್ರಭಾವತಿ ಫಕೀರಪುರ ಈ ಕುರಿತು
ಮಾತನಾಡಿ, ಈಗಾಗಲೇ ಹಂಪಿ ಉತ್ಸವವನ್ನು ತಡೆಹಿಡಿಯಲಾಗಿದೆ. ಸದ್ಯಕ್ಕೆ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ, ಇನ್ನಿತರ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಯಾವುದೇ ಮುನ್ಸೂಚನೆ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ಆದರೂ ಕೋಟೆ ಆವರಣದಲ್ಲಿ ಸಹಜ ಸ್ವಚ್ಛತೆ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ಸೆ. 26 ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಆಡಳಿತ ಯಾವ ತೀರ್ಮಾನಕ್ಕೆ ಬರುತ್ತದೆ ಎಂದು ಈ ಭಾಗದ ಸಾರ್ವಜನಿಕರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೆ. 26 ರಂದು ಕಿತ್ತೂರು ಉತ್ಸವ ಆಚರಣೆ ಕುರಿತು ಚರ್ಚಿಸಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಉತ್ಸವದ ಆಚರಣೆ ಕುರಿತು, ಯಾವಾಗ ಪೂರ್ವಭಾವಿ ಸಭೆ ಕರೆಯಬೇಕು ಮತ್ತು ಎಲ್ಲಿ ಕರೆಯಬೇಕು ಎಂಬುದರ ಕುರಿತು ಚರ್ಚೆಗಳಾಗುತ್ತವೆ.
ಪ್ರಭಾವತಿ ಫಕೀರಪುರ, ಉಪ ವಿಭಾಗಾಧಿಕಾರಿ ಮತ್ತು ಆಯುಕ್ತರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ.

*ಬಸವರಾಜ ಚಿನಗುಡಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.