ಕೆಎಲ್ಇ ಕೋವಿಡ್ ಪರೀಕ್ಷಾ ಲ್ಯಾಬ್ಗ ಚಾಲನೆ
ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ, ಅಮೆರಿಕದ ಆಹಾರ - ಔಷಧ ಸಂಸ್ಥೆ ಮಾನ್ಯತೆ
Team Udayavani, May 14, 2020, 1:46 PM IST
ಬೆಳಗಾವಿ: ನಗರದ ಕೆ ಎಲ್ ಇ ಆಸ್ಪತ್ರೆಯಲ್ಲಿ ಆರಂಭಿಸಲಾಗಿರುವ ಕೋವಿಡ್ -19 ಪರೀಕ್ಷಾ ಪ್ರಯೋಗಾಲಯವನ್ನು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬುಧವಾರ ಜನರ ಸೇವೆಗೆ ಅರ್ಪಿಸಿದರು.
ಬೆಳಗಾವಿ: ಕೆಎಲ್ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ನೂತನ ಕೆಎಲ್ಇ ಕೋವಿಡ್ ಪರೀಕ್ಷಾ ಲ್ಯಾಬ್ಗ ಚಾಲನೆ ವೈರಸ್ ಕೋವಿಡ್ -19 ಪರೀಕ್ಷಾ ಪ್ರಯೋಗಾಲಯವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬುಧವಾರ ಜನರ ಸೇವೆಗೆ ಸಮರ್ಪಿಸಿದರು. ಈ ಪ್ರಯೋಗಾಲಯವು ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ, ಅಮೇರಿಕದ ಆಹಾರ ಮತ್ತು ಔಷಧ ಸಂಸ್ಥೆ ಮಾನ್ಯತೆ ಪಡೆದಿದ್ದು, ಅತ್ಯಾಧುನಿಕ ವೈದ್ಯಕೀಯ ಪ್ರಯೋಗಾಲಯ ಸಾಮಗ್ರಿಗಳನ್ನು ಹೊಂದಿದೆ.
ಇದರಲ್ಲಿ, ಟಿಬಿ, ಹೆಚ್1ಎನ್1, ಹೆಪಟೈಟಿಸ್ (ಬಿಳಿಕಾಮಾಲೆ) ವೈರಸ್ ಪರೀಕ್ಷಿಸಬಹುದಾಗಿದೆ. ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಸುರೇಶ ಅಂಗಡಿ ಅವರು, ದೇಶವಷ್ಟೇ ಅಲ್ಲ, ಇಡೀ ವಿಶ್ವವೇ ಇಂದು ಕೊರೊನಾ ವೈರಸ್ ಕೋವಿಡ್ -19ಗೆ ತಲೆಬಾಗಿ ನಿಂತಿದೆ. ಅದನ್ನು ಹಿಮ್ಮೆಟ್ಟಿಸಲು ಕೇಂದ್ರ ಸರಕಾರವು ಸಕಲ ಕಾರ್ಯ ಹಾಗೂ ಮುಂಜಾಗ್ರತಾ
ಕ್ರಮಗಳನ್ನು ಕೈಕೊಂಡಿದೆ. ಆರೋಗ್ಯವನ್ನು ಕಾಪಾಡಲು ಅಗತ್ಯ ಸೇವಾ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದರು.
ಲಾಕ್ಡೌನ್ ಪರಿಸ್ಥಿತಿಯಲ್ಲಿ ಯಾರಿಗೂ ತೊಂದರೆಯಾಗದಂತೆ ಸಾಮಾಜಿಕ, ಆರ್ಥಿಕ ಹಾಗೂ ವೈದ್ಯಕೀಯ ಸೌಲತ್ತುಗಳನ್ನು ಸರಕಾರವೇ ಭರಿಸುತ್ತಿದೆ. ವೈದ್ಯಕೀಯ ಸಿಬ್ಬಂದಿಗಳು ಸಾರ್ವಜನಿಕರ ಆರೋಗ್ಯ ಕಾಪಾಡಲು ಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೊರೊನಾ ಸೈನಿಕರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜ್ಯೂಕೇಶನ್ ಆ್ಯಂಡ್ ರಿಸರ್ಚನ ಕುಲಾಧಿಪತಿ ಡಾ| ಪ್ರಭಾಕರ ಕೋರೆ ಮಾತನಾಡಿ, ಕೊರೊನಾ ವೈರಸ್ ಕಂಡು ಬಂದ ತಕ್ಷಣ ಕೆಎಲ್ಇ ಸಂಸ್ಥೆಯು ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿತು. ಕೊವಿಡ್ ಅಲ್ಲದ ರೋಗಿಗಳ ಚಿಕಿತ್ಸೆಗೆ ತೊಂದರೆಯಾಗದಂತೆ ಎಚ್ಚರಿಕೆ ಕ್ರಮ ಕೈಕೊಂಡು ನಿರಂತರವಾಗಿ ರೋಗಿಗಳ ಆರೈಕೆಯಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಫ್ಲ್ಯೂ ಕ್ಲೀನಿಕ್, ಉಚಿತ ಆಂಬ್ಯುಲೆನ್ಸ್, ಪರಿಹಾರ ನಿಧಿಗೆ 2 ಕೋಟಿ ದೇಣಿಗೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳನ್ನು ಸಂಸ್ಥೆಯು ಮಾಡುತ್ತಿದೆ. ಜಿಲ್ಲಾಡಳಿತ ಹಾಗೂ ಸರಕಾರದ ಕಾರ್ಯಕ್ಕೆ ಕೆಎಲ್ಇ ಸಂಸ್ಥೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ. ಕೊರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತ ಸದಾ ಮಾಸ್ಕ್ ಧರಿಸಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಡಾ| ವಿ.ಎಸ್ ಸಾಧುನವರ, ಕಾಹೆರನ ಕುಲಪತಿ ಡಾ| ವಿವೇಕ ಸಾವೋಜಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಎಂ ವಿ ಜಾಲಿ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್.ಎಸ್ ಮಹಾಂತಶೆಟ್ಟಿ, ಕಾಹೆರನ ಕುಲಸಚಿವ ಡಾ| ವಿ.ಎ ಕೋಠಿವಾಲೆ, ಡಾ| ವಿ ಡಿ ಪಾಟೀಲ, ಡಾ|ಎಚ್
ಬಿ ರಾಜಶೇಖರ, ಡಾ| ಪ್ರೀತಿ ಮಾಸ್ತೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ