ಅಕಾಲಿಕ ಮಳೆಗೆ ನೆಲಕಚ್ಚಿದ ದ್ರಾಕ್ಷಿ

ಸುಮಾರು 950 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿ | ಒಣದ್ರಾಕ್ಷಿ ತಯಾರಿಕೆಗೆ ಹಿನ್ನಡೆ

Team Udayavani, Apr 7, 2020, 2:42 PM IST

07-April-15

ಕೋಹಳ್ಳಿ: ಅಥಣಿ ತಾಲೂಕಿನಲ್ಲಿ ರವಿವಾರ ಸಂಜೆ ಸುರಿದ ಅಕಾಲಿಕ ಮಳೆಗೆ ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳು ನೆಲಕ್ಕಚ್ಚಿದ್ದು, ಗೋವಿನ ಜೋಳ ಹಾನಿಗಿಡಾಗಿದೆ. ಇದರಿಂದಾಗಿ ರೈತರು ವರ್ಷದಿಂದ ಬೆಳೆದ ಬೆಳೆಯೂ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಅಥಣಿ ತಾಲೂಕಿನಲ್ಲಿ ಸುಮಾರು 2,500 ಹೆಕ್ಟೇರ್‌ ಪ್ರದೇಶದಲ್ಲಿ ದ್ರಾಕ್ಷಿ ಬೆಳೆ ಬೆಳೆಯಲಾಗುತ್ತಿದೆ. ಅದರಲ್ಲಿ ತಾಲೂಕಿನ ಪೂರ್ವ ಭಾಗದ ಯಕ್ಕಂಚಿ, ಯಲಿಹಡಲಗಿ, ಅಡಹಳ್ಳಿ, ಕೋಹಳ್ಳಿ, ಐಗಳಿ, ಕಕಮರಿ, ರಾಮತೀರ್ಥ, ಕೊಟ್ಟಲಗಿ ಗ್ರಾಮಗಳಲ್ಲಿ ರವಿವಾರ ಸಂಜೆ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ದ್ರಾಕ್ಷಿ, ದಾಳಿಂಬೆ, ಗೋವಿನ ಜೋಳ ಬೆಳೆಗಳು ಹಾನಿಗೊಂಡಿವೆ. ಈ ಎಲ್ಲ ಗ್ರಾಮಗಳ ಸುಮಾರು 950 ಹೆಕ್ಟೇರ್‌ ಪ್ರದೇಶ ದ್ರಾಕ್ಷಿ ಹಾಗೂ ದಾಳಿಂಬೆ ನಾಶವಾಗಿದ್ದು, ಕೋಟ್ಯಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಈ ಭಾಗದ ಅನೇಕ ರೈತರು ದ್ರಾಕ್ಷಿಯನ್ನು ಮಾರುಕಟ್ಟೆಯಲ್ಲಿಯೂ ಮಾರುತ್ತಾರೆ. ಜತೆಗೆ ಒಣದ್ರಾಕ್ಷಿ (ಮನುಕ) ತಯಾರಿಸುತ್ತಾರೆ. ಹಣ್ಣಾದ ದ್ರಾಕ್ಷಿಯನ್ನು ಕಟಾವು ಮಾಡಿ ಶೆಡ್‌ನ‌ಲ್ಲಿ ಒಣಗಿಸುತ್ತಾರೆ. ರವಿವಾರ ಸಂಜೆ ಆಕಸ್ಮಿಕವಾಗಿ ಸುರಿದ ಮಳೆಗೆ ಕೋಟ್ಯಂತರ ಮೌಲ್ಯದ ದ್ರಾಕ್ಷಿ ಮತ್ತು ದಾಳಿಂಬೆ ಹಣ್ಣು ಹಾನಿಗೊಂಡಿದೆ. ಕೋಹಳ್ಳಿಯ ಕಲ್ಯಾಣ ನಗರದಲ್ಲಿ ಒಣದ್ರಾಕ್ಷಿ (ಮನುಕ) ಮಳೆಗೆ ತೊಯ್ದು ಹಾಳಾಗಿದೆ. ಅಥಣಿ ತಾಲೂಕಿನ ಪೂರ್ವ ಭಾಗದ ರೈತರಾದ ಕೋಹಳ್ಳಿಯ ಉಮ್ಮಯ್ಯ ಪೂಜಾರಿ, ಮೈನುದ್ದೀನ್‌ ಡೊಂಗರಗಾಂವ, ನೂರಅಹ್ಮದ್‌ ಡೊಂಗರಗಾಂವ, ಕೊಟ್ಟಲಗಿಯ ಗುರಬಸು ಬಂಡಗೊಟ್ಟಿ ಸೇರಿದಂತೆ ವಿವಿಧ ಹಳ್ಳಿಗಳ ಅನೇಕ ರೈತರ ಒಣ ದ್ರಾಕ್ಷಿ (ಬೆದಾಣಿ) ಹಾಗೂ ದ್ರಾಕ್ಷಿ ಹಣ್ಣು ಹಾಳಾಗಿದೆ.

ಬೆಲೆ ಕುಸಿತ: ರೈತ ಬೆಳೆದ ಒಣ ದ್ರಾಕ್ಷಿಯೂ ಹವಾಮಾನ ಆಧಾರಿತವಾಗಿ ತಯಾರಾಗುತ್ತದೆ. ಇದರ ಗುಣಮಟ್ಟದಿಂದ ಮಾರುಕಟ್ಟೆಯಲ್ಲಿ ಬೆಲೆಯೂ
ನಿರ್ಧಾರವಾಗುತ್ತದೆ. ಗುಣಮಟ್ಟವಿದ್ದರೆ ಮಾತ್ರ ರೈತರಿಗೆ ಹೆಚ್ಚಿನ ದರ ಸಿಗುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಒಣದ್ರಾಕ್ಷಿ ಬೆದಾಣಿಯೂ ಕೆಜಿಗೆ 150 ರಿಂದ 200 ರೂ. ವರೆಗೆ ಮಾರಾಟವಾಗುತ್ತಿದೆ. ಆದರೆ ಶನಿವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಒಣದ್ರಾಕ್ಷಿಯ ಗುಣಮಟ್ಟ ಹಾಳಾಗಿದೆ. ಇದರಿಂದ ಇದರ ಬೆಲೆ ಮಾರುಕಟ್ಟೆಯಲ್ಲಿ 80 ರಿಂದ 100 ರೂ. ವರೆಗೆ ಮಾತ್ರ ಮಾರಾಟವಾಗುತ್ತದೆ. ಒಂದು ಎಕರೆ ದ್ರಾಕ್ಷಿ ಬೆಳೆಯಲೂ ಸುಮಾರು 2 ಲಕ್ಷದವರೆಗೂ
ಖರ್ಚವಾಗುತ್ತದೆ. ಆದರೆ ಅಕಾಲಿಕ ಮಳೆಯಿಂದ ಬೆಳೆಯೂ ಹಾಳಾಗಿದ್ದು, ಮುಂದೆ ದರ ಕುಸಿತದಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.