ಉಗಾರ ಖುರ್ದ್‍ ನಲ್ಲಿ ಕೋವಿಡ್‌ ಸೆಂಟರ್‌

30 ಬೆಡ್‌ ವ್ಯವಸ್ಥೆ-15ಕ್ಕೆ ಆಕ್ಸಿಜನ್‌ ಸೌಲಭ್ಯ |ಸೆಂಟರ್‌ಗೆ ಸಕ್ಕರೆ ಕಾರ್ಖಾನೆ ಸಭಾಭವನ ಬಳಕೆ

Team Udayavani, Apr 30, 2021, 7:26 PM IST

ghjgjyuy

ಕಾಗವಾಡ: ತಾಲೂಕಿನ ಉಗಾರ ಖುರ್ದ ಸಕ್ಕರೆ ಕಾರ್ಖಾನೆಯ ವಿಹಾರ ಸಭಾ ಭವನದಲ್ಲಿ 30 ಬೆಡ್‌ಗಳ ಕೋವಿಡ್‌ ಸೆಂಟರ್‌ ಪ್ರಾರಂಭಿಸಲಾಗಿದ್ದು, ಗುರುವಾರ ಚಿಕ್ಕೋಡಿ ಉಪವಿಭಾಗಾಧಿಕಾರಿ ಯುಕೇಶ ಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಚಿಕ್ಕೋಡಿ ಎಸಿ ಅವರೊಂದಿಗೆ ಸಕ್ಕರೆ ಕಾರ್ಖಾನೆ ಎಂ.ಡಿ ಚಂದನ ಶಿರಗಾಂವಕರ, ಆರೋಗ್ಯಾ ಧಿಕಾರಿ ಡಾ. ಬಸಗೌಡ ಕಾಗೆ, ತಹಶೀಲ್ದಾರ್‌ ಪ್ರಮೀಳಾ ದೇಶಪಾಂಡೆ ಸೆಂಟರ್‌ ವೀಕ್ಷಿಸಿ, ಇಲ್ಲಿಗೆ ಅವಶ್ಯಕತೆಯಿರುವ ಆಕ್ಸಿಜನ್‌, ನೀರು, ಊಟದ ವ್ಯವಸ್ಥೆ ಬಗ್ಗೆ ಸೂಚನೆ ನೀಡಿದರು. ಈಗಾಗಲೇ ಕಾಗವಾಡದಲ್ಲಿಯೂ ಕೋವಿಡ್‌ ಸೆಂಟರ್‌ ಪ್ರಾರಂಭಿಸಿದ್ದು ರೋಗಿಗಳ ಸಂಖ್ಯೆ ಹೆಚ್ಚಾದರೆ ಉಗಾರ ಸೆಂಟರ್‌ಗೆ ಸ್ಥಳಾಂತರಿಸುವುದಾಗಿ ತಿಳಿಸಿದರು.

15 ಆಕ್ಸಿಜನ್‌ ಸಹಿತ ಬೆಡ್‌: ತಾಲೂಕಾ ವೈದ್ಯಾಧಿಕಾರಿ ಡಾ| ಬಸಗೌಡ ಕಾಗೆ ಮಾತನಾಡಿ, ಕಾಗವಾಡ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೊಂದು ಚಿಂತೆಯ ವಿಷಯವಾಗಿದೆ. ಉಗಾರ ಸಕ್ಕರೆ ಕಾರ್ಖಾನೆಯ ಸಹಾಯದಿಂದ 30 ಬೆಡ್‌ ಗಳ ಕೋವಿಡ್‌ ಸೆಂಟರ್‌ ಪ್ರಾರಂಭಿಸಿದ್ದೇವೆ. ಇದರಲ್ಲಿ 15 ಆಕ್ಸಿಜನ್‌ ಸಹಿತ ಬೆಡ್‌ಗಳಿವೆ. ಎಲ್ಲ ರೀತಿಯ ಉಪಚಾರ ವ್ಯವಸ್ಥೆ ಇಲ್ಲಿಗೆ ನೀಡಲು ನಾವು ಸಿದ್ಧರಿದ್ದೇವೆ. ಎಲ್ಲ ಇಲಾಖೆ ಅ ಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ. ಉಗಾರ ಖುರ್ದ, ಉಗಾರ ಬುದ್ರುಕ ಮತ್ತು ಶೇಡಬಾಳ ಗ್ರಾಮಗಳಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಈವರೆಗೆ ಉಗಾರ ಖುರ್ದ್‍ನಲ್ಲಿ ಮೂರು ಸಾವು: ಕಾಗವಾಡ ತಾಲ್ಲೂಕಿನಲ್ಲಿ ಮಾರ್ಚ್‌ ಹಾಗೂ ಏಪ್ರಿಲ್‌ ತಿಂಗಳಿನಲ್ಲಿ ಒಟ್ಟು 140 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಲ್ಲಿ 58 ಜನ ಉಗಾರ ಖುರ್ದ ಗ್ರಾಮದವರು. ಅವರಲ್ಲಿ 3 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈಗ 33 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ ಉಗಾರ ಬುದ್ರುಕ 23, ಮೋಳೆ 15, ಕಾಗವಾಡ 13, ಐನಾಪುರ, ಕುಸನಾಳ, ಮಂಗಾವತಿ ತಲಾ 4, ಶೇಡಬಾಳ 7, ಶಿರಗುಪ್ಪಿ, ಮಂಗಸೂಳಿ ತಲಾ 3, ಕೌಲಗುಡ್ಡ 1 ಹೀಗೆ ಕೊರೋನಾ ಸೋಂಕಿತರಿದ್ದಾರೆ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ.

ಸಿಡಿಪಿಓ ಸಂಜೀವಕುಮಾರ ಸದಲಗೆ, ತಾಪಂ ಇಒ ವೀರಣಗೌಡ ಎಗಣಗೌಡರ, ಪಿಎಸ್‌ಐ ಹನುಮಂತ ಧರ್ಮಟ್ಟಿ, ಬಸವರಾಜ ಬೋರಗಲ್ಲ, ಉಗಾರ ವೈದ್ಯಾಧಿಕಾರಿ ಡಾ| ವೀಣಾ ಲೋಕುರ, ಸಕ್ಕರೆ ಕಾರ್ಖಾನೆ ಅಧಿ ಕಾರಿಗಳಾದ ಜಯಂತ ಸಾಟೆ, ಎ.ಎ.ಪೆಂಡ್ಸೆ, ಉಗಾರ ಪುರಸಭೆ ಮುಖ್ಯಾ ಧಿಕಾರಿ ಕಮಲವ್ವಾ ಭಾಗೋಜಿ, ಇತರರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.