ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ: ಮತ್ತಿಬ್ಬರು ಆರೋಪಿಗಳ ಬಂಧನ
Team Udayavani, Sep 5, 2022, 10:30 PM IST
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಮತ್ತಿಬ್ಬರು ಆರೋಪಿಗಳನ್ನು ಗೋಕಾಕ ಪೊಲೀಸರು ಬಂಧಿಸಿದ್ದಾರೆ.
ಹನಗಂಡಿ ಗ್ರಾಮದ ಬೀರಪ್ಪ ಲಕ್ಷ್ಮಣ ಹನಗಂಡಿ (24) ಹಾಗೂ ಅರಭಾಂವಿಯ ಶಿವಾನಂದ ದುಂಡಪ್ಪ ಹಳ್ಳೂರ (23) ಬಂಧಿತರಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹುಕ್ಕೇರಿ ತಾಲೂಕಿನ ಬಿ.ಕೆ.ಶಿರಹಟ್ಟಿ ಗ್ರಾಮದಲ್ಲಿ ಪ್ರಶ್ನೆಗಳನ್ನು ಪ್ರಿಂಟ್ ತೆಗೆಯಲು ಬೀರಪ್ಪ ಲ್ಯಾಪ್ಟಾಪ್ ಹಾಗೂ ಸ್ಮಾರ್ಟ್ ವಾಚ್ ತಂದು ಕೊಟ್ಟಿದ್ದ. ಈತನಿಂದ ಮೊಬೈಲ್ ಹಾಗೂ ಲ್ಯಾಪ್ಟಾಪ್ ವಶಪಡಿಸಿಕೊಳ್ಳಲಾಗಿದೆ.
ಶಿವಾನಂದ ಹಳ್ಳೂರ ಎಂಬಾತ ಎಲೆಕ್ಟ್ರಾನಿಕ್ಸ್ ಡಿವೈಸ್ ತೆಗೆದುಕೊಂಡು ಪರೀಕ್ಷೆ ಬರೆಯಲು ಹೋಗಿದ್ದ. ಈತನಿಂದ 5 ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಡಿವೈಸ್ ವಶಪಡಿಸಿಕೊಳ್ಳಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಕೆಲವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ