ಕೆಪಿಟಿಸಿಎಲ್ ಪ್ರಶ್ನೆ ಪತ್ರಿಕೆ ಸೋರಿಕೆ; ಮತ್ತೊಬ್ಬ ಸೆರೆ
Team Udayavani, Dec 14, 2022, 10:50 PM IST
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆಯನ್ನು ವಾಟ್ಸ್ಆ್ಯಪ್ ಮೂಲಕ ಸೋರಿಕೆ ಮಾಡಿ ಹಾಗೂ ಇನ್ನುಳಿದವರಿಗೆ ಎಲೆಕ್ಟ್ರಾನಿಕ್ ಡಿವೈಸ್ ತಲುಪಿಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಬಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ಸೋಮನಗೌಡ ಶಂಕರಗೌಡ ಪಾಟೀಲ(36) ಬಂಧಿತನಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಇನ್ನುಳಿದ ಆರೋಪಿಗಳಿಂದ ಪಡೆದಿದ್ದ 4.50 ಲಕ್ಷ ರೂ. ಹಣವನ್ನು ಗದಗ ಮುನ್ಸಿಪಲ್ ಪಿಯು ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋಣವಾನೆ, ಈತನ ಮಗ ಸಮೀತಕುಮಾರ್ ಸೋಣವಾನೆ ಅವರಿಗೆ ನೀಡಿದ್ದ. ಜತೆಗೆ ಪ್ರಶ್ನೆಪತ್ರಿಕೆಯನ್ನು ವಾಟ್ಸ್ಆ್ಯಪ್ ಮೂಲಕ ಸೋರಿಕೆ ಮಾಡಿದ್ದ.
ಅಲ್ಲದೇ ಇನ್ನುಳಿದ ಆರೋಪಿತರಿಗೆ ಇಲೆಕ್ಟ್ರಾನಿಕ್ ಡಿವೈಸ್ ಕೊಟ್ಟು ಕಳುಹಿಸಿದ್ದ ತಂಡದ ಪ್ರಮುಖ ಆರೋಪಿಯಾಗಿದ್ದ ಈತ ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದ. ಡಿಸಿಆರ್ಬಿ ಡಿವೈಎಸ್ಪಿ ಆಗಿರುವ ತನಿಖಾಧಿಕಾರಿ ವೀರೇಶ ದೊಡಮನಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ