ಶ್ರೀರಾಮುಲು ವಿರುದ್ಧ ಕೆಆರ್ಪಿಪಿ ಅಭ್ಯರ್ಥಿ ಸ್ಪರ್ಧೆ ಖಚಿತ: ಜನಾರ್ದನ ರೆಡ್ಡಿ
Team Udayavani, Apr 5, 2023, 6:23 AM IST
ಜಮಖಂಡಿ: ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಯಾವ ಕ್ಷೇತ್ರದಿಂದ ಸ್ಪಧಿ ìಸುತ್ತಾರೋ ಆ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನರೆಡ್ಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಮತಕ್ಷೇತ್ರದಲ್ಲಿ ಎಲ್ಲ ಸ್ಥಾನಗಳಲ್ಲಿ ನಮ್ಮ ಪಕ್ಷ ಗೆಲುವು ದಾಖಲಿಸಲಿದೆ. ರಾಜ್ಯದಲ್ಲಿ 30ಕ್ಕೂ ಹೆಚ್ಚು ಸ್ಥಾನ ಪಡೆಯಲು ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿ ತಮ್ಮನ್ನು ಈ ರೀತಿ ನಡೆಸಿಕೊಂಡಿರುವ ಬಗ್ಗೆ ಯಾವುದೇ ದ್ವೇಷವಿಲ್ಲ. ನಾನು ತಾಳ್ಮೆಯಿಂದ ರಾಜಕೀಯದಲ್ಲಿ ಧುಮುಕುತ್ತಿದ್ದೇನೆ. ನನ್ನ ಸಹೋದರ ಕರುಣಾಕರರೆಡ್ಡಿ, ಸೋಮಶೇಖರ ರೆಡ್ಡಿ, ಸ್ನೇಹಿತ ಶ್ರೀರಾಮುಲು ನಮ್ಮ ಪಕ್ಷಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಷಯ. ರಾಜಕೀಯದಲ್ಲಿ ಸ್ನೇಹ-ಸಂಬಂಧಗಳಿಗಿಂತ ಜನಸೇವೆ ಮುಖ್ಯ. ರಾಜಕೀಯಕ್ಕಾಗಿ ಸ್ನೇಹ ಮತ್ತು ಸಂಬಂಧ ದುರುಪಯೋಗ ಮಾಡಿಕೊಳ್ಳಲ್ಲ. ಫಲಿತಾಂಶ ನಂತರ ನನ್ನ ಪ್ರಣಾಳಿಕೆಗೆ ಯಾರು ಸ್ಪಂದಿಸುತ್ತಾರೋ ಅವರಿಗೆ ಬೆಂಬಲ ನೀಡುವ ಚಿಂತನೆ ಇದೆ. ಸ್ಟಾರ್ ಪ್ರಚಾರಕರನ್ನು ಕರೆಸಿಕೊಳ್ಳಬೇಕೆಂಬ ವಿಚಾರ ನಡೆಯುತ್ತಿದೆ. ನನ್ನನ್ನು ಶತಾಯಗತಾಯ ಸೋಲಿಸಬೇಕೆಂದು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಅವರ ಜಿದ್ದಿಗಿಂತ ನನ್ನ ಜಿದ್ದು ಹೆಚ್ಚಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…