ಯಲ್ಲಮ್ಮನ ನಾಡಿನಲ್ಲಿ ಶುದ್ಧ ನೀರಿನ ಕೊರತೆ


Team Udayavani, Mar 18, 2020, 12:27 PM IST

ಯಲ್ಲಮ್ಮನ ನಾಡಿನಲ್ಲಿ ಶುದ್ಧ ನೀರಿನ ಕೊರತೆ

ಸಾಂದರ್ಭಿಕ ಚಿತ್ರ

ಸವದತ್ತಿ: ತಾಲೂಕಿನ ಗ್ರಾಮೀಣ ಭಾಗಗಳ ಶುದ್ಧ ನೀರಿನ ಘಟಕಗಳು ನಿರ್ವಹಣೆಯಿಲ್ಲದೇ ಯೋಜನೆ ವ್ಯರ್ಥವಾಗುತ್ತಿವೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಗ್ರಾಮೀಣ ಭಾಗಗಳಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳ ದುರ್ಬಳಕೆಯೇ ಹೆಚ್ಚಾಗಿ ನಡೆಯುತ್ತಿವೆ. ಒಟ್ಟಾರೆ ತಾಲೂಕಿನಲ್ಲಿ 130 ಘಟಕಗಳಿದ್ದು, ಅದರಲ್ಲಿ ಬಹುತೇಕ ಘಟಕಗಳಲ್ಲಿ ನಿರ್ವಹಣೆಯ ಕೊರತೆಯಿಂದಾಗಿ ಸ್ಥಗತಗೊಂಡಿದ್ದವು. ಆದರೆ ಇತ್ತೀಚೆಗೆ ಸರಿಪಡಿಸಿ ಜನರ ಬಳಕೆಗೆ ನೀಡಲಾಗುತ್ತಿದೆ.

ಘಟಕಗಳು ನಿರ್ಮಾಣಗೊಂಡ ಹಲವು ವರ್ಷಗಳಲ್ಲಿ ನಿರ್ವಹಣೆ ಕುರಿತಂತೆ ದೂರುಗಳ ಸರಮಾಲೆಗಳೇ ಹರಿದು ಬಂದಿವೆ. ಇದರಿಂದ ವಿಳಂಬವಾದರೂ ಎಚ್ಚೆತ್ತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಘಟಕಗಳ ನಿರ್ವಹಣೆಯನ್ನು ಇದೀಗ ಖಾಸಗಿ ಏಜೆನ್ಸಿಗಳಿಗೆ ವಹಿಸಿ, ಜನತೆಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆ. ಆರ್‌.ಒ. ಪ್ಲಾಂಟ್‌ಗಳ ಬದಲು ನೇರವಾಗಿ ಕೊಳವೆಬಾವಿ ನೀರು ಬಳಕೆ ಮಾಡಿಕೊಳ್ಳುತ್ತಿರುವರಿಗೆ ನೀರಿನ ಶುದ್ಧತೆಯ ಪ್ರಮಾಣ ಹಾಗೂ ಅದರ ಸಂರಕ್ಷಣೆ ಕುರಿತು ಸರ್ಕಾರ ಜಾಗೃತಿ ಅಭಿಯಾನಗಳನ್ನು ಮಾಡದೇ ಇರದಿರುವುದು ಸಹ ಒಂದು ಕಾರಣವಾಗಿದೆ.

ಹಂದಿ-ನಾಯಿಗಳ ಉಪಟಳ: ಶುದ್ಧ ಕುಡಿಯುವ ನೀರಿನ ಘಟಕಗಳ ಸುತ್ತಮುತ್ತ ಸ್ವತ್ಛತೆಯೇ ಇಲ್ಲ. ಸುತ್ತಲೂ ಗಡಗಂಟಿ, ಹಂದಿ, ನಾಯಿಗಳ ಓಡಾಟ. ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಗಳ ಮತ್ತು ಕುಡುಕರ  ಉಪಟಳ ಎದ್ದು ಕಾಣುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸರ್ಕಾರ ಟೆಂಡರ್‌ ಪ್ರಕ್ರಿಯೆ ಮೂಲಕ ಯಾರಿಗೆ ಏಜೆನ್ಸಿ ನೀಡಿದರೂ ಅದರ ಸುತ್ತಮುತ್ತಲಿನ ವಾತಾವರಣ ಸ್ವಚ್ಛ ವಾಗಿಟ್ಟುಕೊಳ್ಳದಿದ್ದರೆ ಅದರ ಪ್ರಯೋಜನ ಜನರಿಗೆ ಸಿಗುವುದು ಅಸಾಧ್ಯ. ಮಹಿಳೆಯರು-ಮಕ್ಕಳು ಇಂತಹ ವಾತಾವರಣದಲ್ಲಿ ನೀರಿಗಾಗಿ ನಿಲ್ಲುವುದಾದರೂ ಹೇಗೆ? ಅದಕ್ಕಾಗಿ ಅಧಿಕಾರಿಗಳು ಕೂಡಲೇ ಈ ಘಟಕಗಳ ನಿರ್ವಹಣೆಯ ಜತೆಗೆ ಸ್ವತ್ಛತೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಈ ಯೋಜನೆಯನ್ನು ಕಟ್ಟಕಡೆ ವ್ಯಕ್ತಿಗೂ ಸಿಗುವಂತೆ ಕ್ರಮ ಜರುಗಿಸಬೇಕಿದೆ ಎಂಬುವುದು ಪ್ರಜ್ಞಾವಂತರ ಒತ್ತಾಯವಾಗಿದೆ.

ಜನತೆಗೆ ಉಪಯೋಗವಾಗಲು ಶುದ್ಧ ನೀರಿನ ಘಟಕಗಳ ನಿರ್ವಹಣೆ ಅವಶ್ಯಕವಾಗಿದ್ದು, ಎಲ್ಲ ಘಟಕಗಳ ನಿರ್ವಹಣೆ ಮತ್ತು ಸ್ವತ್ಛತೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುವುದು.-ಎಂ.ಎಸ್‌. ಹೀರೆಕುಂಬಿ, ಹೂಲಿ ಜಿಪಂ ಸದಸ್ಯರು

ಉಗರಗೋಳ ಜಿಪಂ ವ್ಯಾಪ್ತಿಯ ಶುದ್ಧ ನೀರಿನ ಘಟಕಗಳ ನಿರ್ವಹಣೆ ಕೊರತೆ ಇರುವುದು ನಿಜ. ಆದರೆ ಖಾಸಗಿ ಸಂಸ್ಥೆಗಳಿಂದ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಸದ್ಯ ಅವಶ್ಯವಿರುವ ಘಟಕಗಳಿಗೆ ಮೊದಲ ಹಂತದಲ್ಲಿ ಚಾಲನೆ ನೀಡಿದ್ದೇವೆ. ಮುಂಬರುವ ದಿನಗಳಲ್ಲಿ ಉಳಿದೆಲ್ಲವನ್ನು ಅಭಿವೃದ್ಧಿ ಪಡಿಸಲಾಗುವುದು.- ಗುರುನಾಥ ಗಂಗಲ, ಜಿಪಂ ಸದಸ್ಯರು

 

-ಡಿ.ಎಸ್‌. ಕೊಪ್ಪದ

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.