ನೆರೆ ಪೀಡಿತ ಊರಲ್ಲಿ ನೀರಿಗೆ ಬರ!


Team Udayavani, Dec 2, 2019, 1:26 PM IST

bg-tdy-1

ಚಿಕ್ಕೋಡಿ: ತಾಲೂಕಿನ ನಾಗರಮುನ್ನೋಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಭೀಕರ ಪ್ರವಾಹಕ್ಕೆ ಸಿಕ್ಕು ಹಾನಿಗೊಳಗಾದ ಮೂರು ತಿಂಗಳು ಗತಿಸಿವೆ. ಆದರೆ ದುರಸ್ತಿ ಕಾರ್ಯಕೈಗೊಳ್ಳಲು ಸರ್ಕಾರ ಮೀನಾಮೇಷ ಎನಿಸುತ್ತಿದ್ದು, ಇದರಿಂದ ನಾಗರಮುನ್ನೋಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವ್ಯಾಪ್ತಿಯ ಸುಮಾರು 10ಕ್ಕೂ ಹೆಚ್ಚಿನ ಹಳ್ಳಿಯ ಜನರು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ.

ಕಳೆದ ಆಗಸ್ಟ್‌ ತಿಂಗಳಲ್ಲಿ ಕಂಡು ಕೇಳರಿಯದ ಭೀಕರ ಪ್ರವಾಹ ಬಂದು ನದಿ ಭಾಗದ ಜನರಿಗೆತೀವ್ರ ಸಾಕಷ್ಟು ತೊಂದರೆ ಉಂಟು ಮಾಡಿತ್ತು.ಬಹುಗ್ರಾಮ ಕುಡಿಯುವ ನೀರಿನ ಯೋಜನೆಮೇಲೆ ಅವಲಂಬಿತವಾದ ಹತ್ತಾರು ಹಳ್ಳಿಗಳ ಜನರು ಸಮಸ್ಯೆ ಎದುರಿಸುವಂತಾಗಿದೆ. ಯೋಜನೆ ಸ್ಥಗಿತಗೊಂಡಿದ್ದರಿಂದ ಮಡ್ಡಿ ಭಾಗದ ಜನರಿಗೂ ಪ್ರವಾಹ ಬೀಸಿ ತಟ್ಟಿದೆ. ಕಳೆದ ಎರಡು ತಿಂಗಳಿಂದಸುಮಾರು 10ಕ್ಕೂ ಹೆಚ್ಚಿನ ಹಳ್ಳಿಯ ಜನರು ಸಮರ್ಪಕ ಕುಡಿಯುವ ನೀರು ಇಲ್ಲದೆ ಮೈಲು ಗಟ್ಟಲ್ಲೇ ನೀರುತಂದು ಕುಡಿಯವ ಪ್ರಸಂಗ ಎದುರಾಗಿದೆ.

ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆವ್ಯಾಪ್ತಿಗೆ ಒಳಪಡುವ ನಾಗರಮುನ್ನೋಳ್ಳಿ, ಬೆಳಕೂಡ,ಬಂಬಲವಾಡ, ಉಮರಾಣಿ, ಬೆಣ್ಣಿಹಳ್ಳಿ, ಇಟ್ನಾಳ, ಡೋನವಾಡ, ಕರಗಾಂವ, ಕುಂಗಟ್ಟೋಳ್ಳಿ ಸೇರಿದಂತೆಮುಂತಾದ ಹಳ್ಳಿಗಳು ಕಳೆದ ನಾಲ್ಕೆ ದು ವರ್ಷಗಳಿಂದ ಸತತ ಬರಗಾಲಕ್ಕೆ ತುತ್ತಾಗುತ್ತಾ ಬಂದಿವೆ. ಈ ಹಳ್ಳಿಗಳಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗುತ್ತಿತ್ತು.

ವರ್ಷ ಉತ್ತಮ ಮಳೆ ಆಗಿದ್ದರಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಸಮರ್ಪಕ ನೀರು ಬರುತ್ತದೆ ಎಂದು ಜನರು ನಿರೀಕ್ಷೆ ಮಾಡಿದ್ದುಹುಸಿಯಾಗಿದೆ. ಆದರೆ ಪ್ರವಾಹದಲ್ಲಿ ಯೋಜನೆಯೇ ಹಾಳಾಗಿ ಹೋಗಿದೆ. ಈ ಯೋಜನೆ ದುರಸ್ತಿ ಮಾಡಿಜನರಿಗೆ ನೀರು ಕೊಡಲು ಅಧಿಕಾರಿಗಳು ಮಾತ್ರಮನಸ್ಸು ಮಾಡುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಪ್ರವಾಹದಲ್ಲಿ ಕಿತ್ತು ಹೋದ ಪಂಪ್‌ಸೆಟ್‌ಗಳು: ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ಅಬ್ಬರಿಸಿದ ಮಳೆಯಿಂದ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದ ಹತ್ತಿರ ಹಿರಣ್ಯಕೇಶಿ ನದಿ ತೀರದಲ್ಲಿಪಂಪ್‌ಹೌಸ್‌ ಹಾಗೂ ಫ್ಲೋಟಿಂಗ್‌ ಫ್ಲಾಟ್‌ಫರ್ಮಾ ಅಳವಡಿಸಿದ್ದು, ಅತಿವೃಷ್ಟಿಯಿಂದ ಟ್ರಾನ್ಸ್‌ಫಾರ್ಮರ್‌, ಕ್ಯುಬಿಕಲ್‌ ಮೀಟರ್‌, ಪಿನಲ್‌ ಬೋರ್ಡ್‌, ಫ್ಲೋಟಿಂಗ್‌ ಫ್ಲಾಟ್‌ಫಾರ್ಮಾ ಹಾಗೂ ಪಂಪ್‌ಹೌಸದಿಂದಫ್ಲೋಟಿಂಗ್‌ ಫ್ಲಾಟ್‌ಫರ್ಮಾವರೆಗಿನ ಎಂಎಸ್‌ ಪೈಪ್‌ ಗಳು, ಎಸ್‌ಎಸ್‌ ಪ್ಲೇಕ್ಸಿಬಲ್‌ ಪೈಪ್‌ಗ್ಳು, ಪಂಪ್‌ಹೌಸಿನ ಶೆಲ್ಟರ್‌, ಫುಟ್‌ಬ್ರುಡ್ಜ್, ರೇಲಿಂಗ್‌ ಕಾಲಂನಪೈಪ್‌ಗ್ಳು ಸೇರಿದಂತೆ ಮುಂತಾದ ಸಲಕರಣೆ ಕಿತ್ತುಕೊಂಡು ಹೋಗಿ ಅಂದಾಜು ಸುಮಾರು 39 ಲಕ್ಷ ರೂ ಹಾನಿಯಾಗಿದೆ. ಈಗಾಗಲೇ ಸರ್ಕಾರಅನುದಾನ ಕೂಡಾ ಮಂಜೂರು ನೀಡಿದೆ. ಆದರೆ ದುರಸ್ತಿ ಕಾರ್ಯ ಮಾತ್ರ ತ್ವರಿತವಾಗಿ ನಡೆಯುತ್ತಿಲ್ಲ ಎಂಬುದು ಜನರ ಅಳಲು.

ಕಳೆದ 2013-14ರಲ್ಲಿ ನಾಗರಮುನ್ನೋಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅಡಿಗಲ್ಲು ಹಾಕಿ ಸುಮಾರು 14.19 ಕೋಟಿರೂ ವೆಚ್ಚದಲ್ಲಿ ಕಾಮಗಾರಿ ಆರಂಭಿಸಿ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯ ಕೊಟಬಾಗಿ ಹತ್ತಿರ ನೀರು ತಂದು ಚಿಕ್ಕೋಡಿ ತಾಲೂಕಿನ ಜನರಿಗೆ ನೀರು ಒದಗಿಸುವ ಯೋಜನೆ ಇದ್ದು, ಆದರೆ ಕಳೆದ ಎರಡುತಿಂಗಳಿಂದ ಯೋಜನೆ ಸ್ಥಗಿತಗೊಂಡು ಮಡ್ಡಿ ಭಾಗದ ಜನರಿಗೆ ಭಾರಿ ಸಮಸ್ಯೆಯುಂಟು ಮಾಡಿದೆ.

ಕಳಪೆ ಕಾಮಗಾರಿ: ಬರಗಾಲ ಪೀಡಿತ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸುವ ನಿಟ್ಟಿನಲ್ಲಿ ರಾಯಬಾಗ ಶಾಸಕದುರ್ಯೋಧನ ಐಹೋಳೆ ಸತತ ಪ್ರಯತ್ನದಿಂದಮಡ್ಡಿ ಭಾಗದ ಜನರಿಗೆ ಬಹುಗ್ರಾಮ ಕುಡಿಯುವನೀರಿನ ಯೋಜನೆ ಮಂಜೂರು ಮಾಡಿಸಿದ್ದಾರೆ. ಆದರೆ ಯೋಜನೆ ಕಾಮಗಾರಿ ಕಳಪೆ ಮಟ್ಟದಿಂದಕೂಡಿದೆ ಎಂಬುದು ಸ್ಥಳೀಯರ ಆರೋಪ.ಯೋಜನೆ ಪ್ರಾರಂಭವಿದ್ದಾಗ ಕೆಲವೊಂದುಗ್ರಾಮಗಳಿಗೆ ಸಮರ್ಪಕ ನೀರು ಬರುತ್ತಿಲ್ಲ. ಒಂದು ಕಡೆ ನೀರು ಬಿಟ್ಟರೇ ಮತ್ತೂಂದು ಕಡೆ ಪೈಪ್‌ಲೈನ್‌ಒಡೆದು ಹೋಗುತ್ತವೆ. ಹೀಗಾಗಿ ಈ ಯೋಜನೆ ಕಳಪೆ ಮಟ್ಟದಿಂದ ಕೂಡಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

 

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.