ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕಕರ
ಕೋವಿಡ್ ಕೇರ್ ಕೇಂದ್ರಗಳಿಗೆ ಲಕ್ಷ್ಮೀ ಹೆಬ್ಬಾಳ್ಕಕರ ಭೇಟಿ|ಕಿಟ್ ವಿತರಣೆ
Team Udayavani, Jun 4, 2021, 8:47 PM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಕೋವಿಡ್ ಕೇರ್ ಸೆಂಟರ್ ಹಾಗೂ ಸ್ವಾಬ್ ಟೆಸ್ಟಿಂಗ್ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಸೋಂಕಿತರಿಗೆ ಧೆ„ರ್ಯ ತುಂಬಿ, ಹೋಂ ಐಸೋಲೇಷನ್ ಕಿಟ್ ವಿತರಿಸಿದರು.
ಮೊದಗಾ ಗ್ರಾಮದ ನಿರ್ಮಲ ನಗರದಲ್ಲಿರುವ ಕಾರ್ಡಿನಲ್ ಗ್ರೇಸಿಯಸ್ ಆಸ್ಪತ್ರೆಯ ಕೋವಿಡ್ ಸೋಂಕಿತರ ಕೇಂದ್ರಕ್ಕೆ ಭೆಟ್ಟಿ ನೀಡಿದ ಅವರು ಸೋಂಕಿತರ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರಲ್ಲದೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಮಾವಿನಕಟ್ಟಿ ಗ್ರಾಮದ ಗಂಟಲು ದ್ರವಗಳ (ಸ್ವಾಬ್ ಟೆಸ್ಟಿಂಗ್) ಮಾದರಿ ಸಂಗ್ರಹಿಸುವ ಕೇಂದ್ರಕ್ಕೆ ಭೇಟಿ ನೀಡಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಕೋವಿಡ್ ಹೋಮ್ ಐಸೋಲೇಷನ್ ಕಿಟ್ ವಿತರಿಸಿದರು. ಇದೇ ಸಮಯದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಆರೋಗ್ಯದ ಬಗ್ಗೆ ವಿಚಾರಿಸಿದ ಶಾಸಕರು ಸರ್ಕಾರದಿಂದ ಸಿಗುವ ಎಲ್ಲ ಸೌಲಭಗಳನ್ನು ದೊರಕಿಸಿಕೊಡುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು