ಹೆಲಿಕಾಪ್ಟರ್ ಬಾರದ್ದರಿಂದ ಲಕ್ಷ್ಮಣ ಸವದಿ ಮೇಲೆ ಸಿಡಿಮಿಡಿಗೊಂಡ ಬಿಎಸ್ ವೈ
Team Udayavani, Oct 16, 2019, 11:47 AM IST
ಬೆಳಗಾವಿ: ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕೆ ತೆರಳಲು ಹೆಲಿಕಾಪ್ಟರ್ ಬಾರದ ಕಾರಣ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಅಧಿಕಾರಿಗಳ ಮೇಲೆ ಸಿಡಿಮಿಡಿಗೊಂಡ ಪ್ರಸಂಗ ಬುಧವಾರ ಬೆಳಗಾವಿಯಲ್ಲಿ ನಡೆಯಿತು.
ಪೂರ್ವ ನಿಗದಿಯಂತೆ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಿಗ್ಗೆ 8.50 ಕ್ಕೆ ಮಹಾರಾಷ್ಟ್ರದ ಜತ್ ಗರ ಚುನಾವಣಾ ಪ್ರಚಾರಕ್ಕೆ ತೆರಳಬೇಕಿತ್ತು. ಆದರೆ ಮಹಾರಾಷ್ಟ್ರ ದಿಂದ ಬರಬೇಕಿದ್ದ ಹೆಲಿಕಾಪ್ಟರ್ 11 ಗಂಟೆಯಾದರೂ ಬರಲಿಲ್ಲ. ಇದರಿಂದ ಅಸಮಾಧಾನ ಗೊಂಡ ಮುಖ್ಯಮಂತ್ರಿಗಳು ಲಕ್ಷ್ಮಣ ಸವದಿ ಗೆ ದೂರವಾಣಿ ಕರೆ ಮಾಡಿ ನಯವಾಗಿ ತರಾಟೆಗೆ ತೆಗೆದುಕೊಂಡರು. ಈಗಾಗಲೇ ಬಹಳ ತಡವಾಯಿತು. ಅಲ್ಲಿಗೆ ಬಂದು ಏನು ಮಾಡಲಿ. ಬೆಂಗಳೂರಿಗೆ ಮರಳಿ ಹೋಗುತ್ತೇನೆ ಎಂದು ಹೇಳಿದರು. ಇದರಿಂದ ಗೊಂದಲಕ್ಕೊಳಗಾದ ಸವದಿ ದಯವಿಟ್ಟು ಕ್ಷಮಿಸಿ. ಇನ್ನು ಸ್ವಲ್ಪ ಹೊತ್ತಿನಲ್ಲಿ ಹೆಲಿಕಾಪ್ಟರ್ ಬರಲಿದೆ ಎಂದು ಸಮಜಾಯಿಷಿ ನೀಡಿದರು.
ಇದರಿಂದ ಬೇಸರಗೊಂಡ ಸಿ ಎಂ ನನಗೆ ಮೊದಲೇ ಆರೋಗ್ಯ ಸಮಸ್ಯೆ ಇದೆ. ಬಹಳ ತಡವಾದರೆ ಅಲ್ಲಿ ಬಂದು ಏನು ಮಾಡಲಿ ಎಂದು ಹೇಳಿ ಮತ್ತೆ ಪ್ರವಾಸಿ ಮಂದಿರದೊಳಗೆ ವಿಶ್ರಾಂತಿಗೆ ತೆರಳಿದರು. ಇದರಿಂದ ಅಲ್ಲಿ ಸೇರಿದ್ದ ಬಿಜೆಪಿ ಮುಖಂಡರು ಹಾಗೂ ಅಧಿಕಾರಿಗಳು ಮುಜುಗುರ ಅನುಭವಿಸಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ