ಬೆಳಗಾವಿ ನಗರದಲ್ಲಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ಆತಂಕ
Team Udayavani, Jul 1, 2021, 11:58 AM IST
ಬೆಳಗಾವಿ: ಇಲ್ಲಿಯ ಹನುಮಾನ್ ನಗರ ಸಮೀಪದ ಹೊಂದಿಕೊಂಡಿರುವ ಗಾಲ್ಫ್ ಗ್ರೌಂಡ್ ನಲ್ಲಿ ಗುರುವಾರ ಬೆಳಗ್ಗೆ ಚಿರತೆ ಕಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಚಿರತೆ ಹುಡುಕಾಟ ಆರಂಭವಾಗಿದೆ.
ಗುರುವಾರ ಬೆಳಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಜನರಿಗೆ ಚಿರತೆ ಕಂಡು ಬಂದಿದೆ. ಗಾಲ್ಫ್ ಮೈದಾನದಲ್ಲಿ ಸುತ್ತಲಿನ ಮಿಲಿಟರಿಯವರು ಹಾಗೂ ಜನರು ವಾಯು ವಿಹಾರಕ್ಕೆ ಬಂದಿದ್ದರು. ಆ ವೇಳೆ ಸುತ್ತಲೂ ಇರುವ ಗಿಡದ ಪಕ್ಕದಲ್ಲಿ ಚಿರತೆ ಅಡ್ಡಾಡುತ್ತಿರುವುದು ಜನರ ಕಣ್ಣಿಗೆ ಬಿದ್ದಿದೆ.
ಇದನ್ನೂ ಓದಿ:ಚೆಸ್ ಇತಿಹಾಸದ ಅತೀ ಕಿರಿಯ ಗ್ರ್ಯಾಂಡ್ ಮಾಸ್ಟರ್ ಆದ 12 ವರ್ಷದ ಅಭಿಮನ್ಯು ಮಿಶ್ರಾ
ಅರಣ್ಯ ಇಲಾಖೆಯವರು ಅಲ್ಲಿಗೆ ಧಾವಿಸಿದ್ದು, ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಹುಡುಕಾಟಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಗಾಲ್ಫ್ ಗ್ರೌಂಡಕ್ಕೆ ಆಗಮಿಸಿದ್ದಾರೆ. ಚಿರತೆಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಜನರು ಚಿರತೆ ಕಂಡು ಹೆದರಿದ ಅವರು ತಕ್ಷಣ ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಬೆಳಗಾವಿಯ ಗಾಲ್ಫ್ ಗ್ರೌಂಡ್ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ