ಮಹಿಳೆ ಆರ್ಥಿಕ ಸ್ವಾವಲಂಬಿಯಾಗಲಿ


Team Udayavani, Oct 16, 2020, 4:23 PM IST

ಮಹಿಳೆ ಆರ್ಥಿಕ ಸ್ವಾವಲಂಬಿಯಾಗಲಿ

ಚಿಕ್ಕೋಡಿ: ರೈತ ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಕೃಷಿ ಚಟುವಟಿಕೆಗಳ ಜೊತೆಗೆ ಸರ್ಕಾರದ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಕಿರು ಉದ್ದಿಮೆಗಳನ್ನು ಪ್ರಾರಂಭಿಸಿ ಆರ್ಥಿಕ ಸ್ವಾವಲಂಬನೆ ಹೊಂದಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಲೋಕೋಪಯೋಗಿ ಇಲಾಖೆ ಸಭಾಭವನದಲ್ಲಿ ಕೃಷಿ ಇಲಾಖೆ 2020-21 ನೇ ಸಾಲಿನ ಆತ್ಮ ಯೋಜನೆಯಡಿ ರೈತ ಮಹಿಳಾ ದಿನಾಚರಣೆಯ ಅಂಗವಾಗಿಹಮ್ಮಿಕೊಂಡ ಕಿಸಾನ್‌ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಉತ್ಪನ್ನಗಳ ಆದಾಯದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರವಿಶೇಷ ಯೋಜನೆಯೊಂದನ್ನು ರೂಪಿಸುತ್ತಿದ್ದು, 2022ರ ಒಳಗಾಗಿಅದರ ಲಾಭ ಕೃಷಿಕರಿಗೆ ದೊರಕಲಿದೆ. ಕೃಷಿಕ ಮಹಿಳೆಯರು ಕಿರುಉದ್ದಿಮೆಗಳನ್ನು ಪ್ರಾರಂಭಿಸಲು ವಿವಿಧಇಲಾಖೆಗಳು ಸಬ್ಸಿಡಿಯೊಂದಿಗೆ ಸಾಲಸೌಲಭ್ಯ ನೀಡುತ್ತಿದ್ದು, ಅದರ ಸದ್ಬಳಕೆ ಮಾಡಿಕೊಳ್ಳಬೇಕು. ಕೃಷಿಕ ಮಹಿಳೆಯರು ಲಘು ಉದ್ದಿಮೆಗಳಲ್ಲಿ ಉತ್ಪಾದಿಸಿದ ಹಪ್ಪಳ,ಶ್ಯಾಂಡಿಗೆ, ಶ್ಯಾವಿಗೆ, ಉಪ್ಪಿನಕಾಯಿ,ಚಟ್ನಿ ಮೊದಲಾದವುಗಳನ್ನು ಜ್ಯೋತಿಬಜಾರ್‌ ಮೂಲಕ ಮಾರಾಟದ ವ್ಯವಸ್ಥೆ ಮಾಡಲಾಗುವುದು ಎಂದರು.

ಬ್ರಹ್ಮಕುಮಾರಿ ಶಾಂತಕ್ಕ ಮಾತನಾಡಿ, ನಾವು ದುಡಿಯುವ ಕ್ಷೇತ್ರದಲ್ಲಿ ಶ್ರದ್ಧೆ ಮತ್ತು ಪರಿಶ್ರಮ ಇರಬೇಕು. ಹೊಸತನಅಳವಡಿಸಿಕೊಳ್ಳಬೇಕು. ಕೃಷಿಕನಿಗೆ ಮಾತ್ರ ಅನ್ನದಾತ ಎಂಬ ಗೌರವ ಪ್ರಾಪ್ತವಾಗಿದೆ.ಯೋಗಿ ಜೀವನ ಕೃಷಿಕರಿಂದ ಮಾತ್ರ ಸಾಧ್ಯ ಎಂದರು. ಕೃಷಿಯಲ್ಲಿ ವೈಜ್ಞಾನಿಕತೆ ಬೇಕು. ಆದರೆ, ಭೂಮಿ ಮತ್ತು ಮನುಷ್ಯನ ಆರೋಗ್ಯಕ್ಕೆ ಪೂರಕವಾದ ಕೃಷಿಪದ್ಧತಿ ಅಳವಡಿಸಿಕೊಳ್ಳಬೇಕು. ನಮಗೆ ಬೇಕಾಗುವ ತರಕಾರಿ, ಹಣ್ಣು, ದ್ವಿದಳ ಧಾನ್ಯ, ಆಹಾರ ಧಾನ್ಯಗಳನ್ನು ನಾವೇ ಸಾವಯವ ಪದ್ಧತಿಯಲ್ಲಿ ಉತ್ಪಾದಿಸಿಕೊಳ್ಳುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಕೃಷಿ ಇಲಾಖೆ ಡಿಡಿ ಎಲ್‌.ಐ.ರೂಡಗಿ, ಎಡಿ ಮಂಜುನಾಥ ಜನಮಟ್ಟಿ, ಮಾದರಿ ಕೃಷಿಕ ಮಹಿಳೆ ಲಲಿತಾ ಕಮತೆ ಮಾತನಾಡಿದರು. ಬ್ರಹ್ಮಕುಮಾರಿ ಸುಶೀಲಾ ಅಕ್ಕನವರು, ಮಾದರಿ ಕೃಷಿಕ ಮಹಿಳೆ ಅಶ್ವಿ‌ನಿಖೋತ್‌, ಮಹಾದೇವಿ, ಕೃಷಿ ಅಧಿ ಕಾರಿಜಾತಗಾರ ಸೇರಿದಂತೆ ನೂರಾರು ಕೃಷಿಕ ಮಹಿಳೆಯರು ಪಾಲ್ಗೊಂಡಿದ್ದರು.

ಕೃಷಿಯಲ್ಲಿ ಮಹಿಳೆ ಪಾತ್ರ ಅನನ್ಯ: ಕೊಳೇಕರ

ಬೈಲಹೊಂಗಲ: ಕೃಷಿಯಲ್ಲಿ ಪುರುಷರಿಗೆ ಸಿಗುವ ಆದ್ಯತೆ ಮಹಿಳೆಯರಿಗೆ ಸಿಗುತ್ತಿಲ್ಲ. ಮಹಿಳೆಯರು ಜಮೀನಿನ ಎಲ್ಲ ಕೆಲಸಗಳನ್ನುಮಾಡುತ್ತಾರೆ. ಪುರುಷರಿಗೆ ಸಮನಾಗಿದುಡಿಯುವ ಎಷ್ಟೋ ಮಹಿಳೆಯರು ಇದ್ದಾರೆ. ಆದರೆ ಅವರು ಬೆಳಕಿಗೆ

ಬರುತ್ತಿರುವುದು ಕಡಿಮೆ. ಒಟ್ಟಾರೆ ಕೃಷಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾಗಿದೆ ಎಂದು ಬೆಳಗಾವಿ ಉಪ ಕೃಷಿ ನಿರ್ದೇಶಕ ಎಚ್‌. ಡಿ. ಕೊಳೇಕರ ಹೇಳಿದರು.

ಗುರುವಾರ ತಾಲೂಕಿನ ಮತ್ತಿಕೊಪ್ಪಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ, ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ರೈತ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ತ್ರೀ-ಪುರುಷ ಶ್ರಮದಲ್ಲಿ ವ್ಯತ್ಯಾಸವಿಲ್ಲದಿದ್ದರೂ ಸಂಬಳದಲ್ಲಿ

ವ್ಯತ್ಯಾಸವಿದೆ. ಒಂದು ಅಧ್ಯಯನದ ಪ್ರಕಾರ ಹಳ್ಳಿಗಳಲ್ಲಿ ಶ್ರಮ ಶಕ್ತಿಯು ಶೇ. 65 ಕ್ಕಿಂತ ಹೆಚ್ಚಿನ ಭಾಗವನ್ನು ಹೆಣ್ಣು ಮಕ್ಕಳೇ ಪೂರೈಸುತ್ತಾರೆ. ರೈತ ಮಹಿಳೆಯರು 24 ತಾಸುಗಳಲ್ಲಿ 10 ರಿಂದ 12 ತಾಸು ಕೆಲಸ ನಿರ್ವಹಿಸುತ್ತಾರೆ. ಮಹಿಳೆಯರುಯಾವುದೇ ಕೆಲಸ ಕೊಟ್ಟರೂ ನೈಪುಣ್ಯ, ಶ್ರದ್ಧೆಯಿಂದ ನಿರ್ವಹಿಸುತ್ತಾರೆಂದರು.

ಅಧ್ಯಕ್ಷತೆ ವಹಿಸಿದ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥೆ ಶ್ರೀದೇವಿ ಅಂಗಡಿ ಮಾತನಾಡಿ, ಮಹಿಳೆಯರು ತಾವು ಬೆಳೆದಫಸಲನ್ನು ನೇರವಾಗಿ ಮಾರಾಟ ಮಾಡದೇ ಅವುಗಳ ಮೌಲ್ಯವರ್ಧನೆ ಮಾಡಿ ಹೆಚ್ಚಿನ ಆದಾಯಗಳಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು.

ಕೃಷಿಯಲ್ಲಿ ಸಾಧನೆಗೈದ ರೈತ ಮಹಿಳೆಯರಾದ ಮಹಾದೇವಿ ಪಾಟೀಲ, ಅಕ್ಕತಂಗೇರಹಾಳ ಮತ್ತು ಶಾಂತಾ ಕಮ್ಮಾರ, ಕಿಟದಾಳ ಅವರನ್ನು ಸನ್ಮಾನಿಸಲಾಯಿತು.

ರೈತ ಮಹಿಳೆಯರಿಗೆ ರಂಗೋಲಿ,ಪೌಷ್ಟಿಕ ಆಹಾರ ತಯಾರಿಕೆ ಸ್ಪರ್ಧೆ ಏರ್ಪಡಿಸಲಾಗಿತ್ತು. 30 ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.ಬಿ.ಎಂ. ಕಂಕಣವಾಡಿಆಯುರ್ವೇದ ಮಹಾ ವಿದ್ಯಾಲಯದ ಡಾ| ಅಶೋಕ ಪಾಟೀಲ, ಸಹ ಪ್ರಾಧ್ಯಾಪಕ ಡಾ. ಸಂಜಯ ಟೊಣ್ಣಿ, ಉದ್ಯಮಿ ಭಾಗ್ಯಶ್ರೀ ಅಕ್ಕಿ ಮಾತನಾಡಿದರು.ತಾಲೂಕ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಬಸವರಾಜ ಬೀರುಕಲ್‌ ನಿರೂಪಿಸಿದರು. ಉಮೇಶ ಯರಗಟ್ಟಿ ವಂದಿಸಿದರು

 

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

belagavBelagavi: ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

Belagavi: ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.