ಕಾಂಗ್ರೆಸ್ನಲ್ಲಿ ಜೆಡಿಎಸ್ ವಿಲೀನ ಮಾಡಲಿ: ಅಂಗಡಿ
Team Udayavani, Jun 4, 2018, 6:00 AM IST
ಬೆಳಗಾವಿ: ಕಾಂಗ್ರೆಸ್ ನಾಯಕರಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷವನ್ನು ಕಾಂಗ್ರೆಸ್ನಲ್ಲಿ ವಿಲೀನ ಮಾಡುವುದು ಒಳ್ಳೆಯದು ಎಂದು ಸಂಸದ ಸುರೇಶ ಅಂಗಡಿ ಸಲಹೆ ನೀಡಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಧಿಕಾರಕ್ಕೆ ಬಂದ ಕೂಡಲೇ ರೈತರ ಸಾಲಮನ್ನಾ
ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ ಅಧಿಕಾರ ಸ್ವೀಕಾರ ಮಾಡಿ ಒಂದು ವಾರ ಕಳೆದರೂ ಸಾಲ ಮನ್ನಾ ಮಾಡುವ ಮಾತೇ ಇಲ್ಲ. ಸುಳ್ಳು ಹೇಳುವುದು ಕಾಂಗ್ರೆಸ್ ಸಂಸ್ಕೃತಿ. ಅದಕ್ಕೆ ಕುಮಾರಸ್ವಾಮಿ ಒಗ್ಗಿಕೊಂಡಿದ್ದಾರೆ. ಕಾಂಗ್ರೆಸ್ ವ್ಯವಸ್ಥೆ ಇಡೀ ದೇಶದ ಜನರಿಗೆ ಗೊತ್ತಿದೆ. ಬ್ರಿಟಿಷ್ ಕಂಪನಿಯನ್ನು ನಂಬಬಹುದು. ಆದರೆ ಕಾಂಗ್ರೆಸ್ನ್ನು ನಂಬಲು ಸಾಧ್ಯವಿಲ್ಲ ಎಂದರು.