ವಿದ್ಯಾರ್ಥಿಗಳು ಸಂಶೋಧನೆಯತ್ತ ಒಲವು ತೋರಲಿ
ಈ ಪ್ರಗತಿಗೆ ಉಪನ್ಯಾಸಕ ಬಳಗ, ಕಾಲೇಜು ಅಭಿವೃದ್ಧಿ ಸಮಿತಿ ಪಾತ್ರ ಹಿರಿದಾಗಿದೆ ಎಂದರು.
Team Udayavani, Feb 12, 2022, 3:20 PM IST
ಬೈಲಹೊಂಗಲ: ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳು ಇಂದಿನ ವೈಜ್ಞಾನಿಕ ಯುಗದಲ್ಲಿ ಕಷ್ಟಪಟ್ಟು ಅಧ್ಯಯನ ಮಾಡುತ್ತ ವಿಜ್ಞಾನದತ್ತ
ಒಲವು ತೋರಿ ಸಂಶೋಧನೆಯಲ್ಲಿ ತೊಡಗಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.
ಪಟ್ಟಣದ ಡಾ| ಬಿ.ಆರ್. ಅಂಬೇಡ್ಕರ್ ಉದ್ಯಾನವನ ಹತ್ತಿರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಶೈಕ್ಷಣಿಕವಾಗಿ ಪ್ರತಿ ವರ್ಷ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದ್ದು, ಸಮರ್ಪಕವಾಗಿ
ಸದ್ಬಳಕೆ ಮಾಡಿಕೊಂಡು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಆಧುನಿಕ ತಂತ್ರಜ್ಞಾನದಲ್ಲಿ ಪಠ್ಯಪುಸ್ತಕಗಳಲ್ಲಿ ಹೊಸ ಹೊಸ ಆವಿಷ್ಕಾರಗಳು
ಬರುತ್ತಿದ್ದು ವಿದ್ಯಾರ್ಥಿಗಳು ಇವುಗಳನ್ನು ಮನದಟ್ಟು ಮಾಡಿಕೊಂಡು ಅಧ್ಯಯನ ಮಾಡಬೇಕು ಎಂದರು.
ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು ಶಿಕ್ಷಣದೊಂದಿಗೆ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಕಳಕಳಿ ಹೊಂದಿ ಸಮಾಜಮುಖೀಯಾಗಿ ಕೆಲಸ ನಿರ್ವಹಿಸಬೇಕು. ಯುವ ಜನಾಂಗ ರಾಷ್ಟ್ರದ ಸಂಪತ್ತು. ದುಶ್ಚಟಗಳಿಗೆ ದಾಸರಾಗದೇ ಸದೃಢ ಆರೋಗ್ಯ ಕಾಪಾಡಿಕೊಂಡು ರಾಷ್ಟ್ರಪ್ರೇಮ ಮೈಗೊಡಿಸಿಕೊಳ್ಳಬೇಕು. ಸರ್ಕಾರಿ ಕಾಲೇಜಿನಲ್ಲಿ ಸುಸಜ್ಜಿತ ಪ್ರಯೋಗಾಲಯ ಸ್ಥಾಪಿಸಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಂಡು ನಾಡಿಗೆ ಕೀರ್ತಿ ತರಬೇಕು. ಕಾಲೇಜು ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾರಣ ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಈ ಪ್ರಗತಿಗೆ ಉಪನ್ಯಾಸಕ ಬಳಗ, ಕಾಲೇಜು ಅಭಿವೃದ್ಧಿ ಸಮಿತಿ ಪಾತ್ರ ಹಿರಿದಾಗಿದೆ ಎಂದರು.
ಈ ವೇಳೆ ಉಪ ವಿಭಾಗಾಧಿಕಾರಿ ಡಾ| ಶಶಿಧರ ಬಗಲಿ, ತಹಶೀಲ್ದಾರ್ ಬಸವರಾಜ ನಾಗರಾಳ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ
ಅಶೋಕ ವಾಲಿ, ಸದಸ್ಯರಾದ ಶ್ರೀಶೈಲ ಮೊರಬದ, ವೀರಣ್ಣ ಜವಳಿ, ಈರಣ್ಣ ಬೆಟಗೇರಿ, ಅಂಬಿಕಾ ಕೊಟಬಾಗಿ, ಆರ್.ಕೆ. ಪಾಟೀಲ ಇದ್ದರು.
ಉಪನ್ಯಾಸಕ ಬಸವರಾಜ ಪುರಾಣಿಕಮಠ ಮಾತನಾಡಿದರು. ಪ್ರಾಚಾರ್ಯ ಪುಂಡಲೀಕ ಕಾಂಬಳೆ ಸ್ವಾಗತಿಸಿದರು. ಬಸವರಾಜ ಅಡಿಕೆ ನಿರೂಪಿಸಿದರು. ಮುಕ್ತಾ ಹುಡೇದ ಪ್ರಾರ್ಥಿಸಿದರು. ಉಪನ್ಯಾಸಕ ಬಿ.ಎಂ. ಕೊಳವಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ