ಮೇ 20ರೊಳಗೆ ತಾಲೂಕು ಕಚೇರಿಗಳು ಬರಲಿ
ಮೂಡಲಗಿ ತಾಲೂಕು ಹೋರಾಟ ಸಮಿತಿ ಆಗ್ರಹ
Team Udayavani, Apr 25, 2022, 1:12 PM IST
ಮೂಡಲಗಿ: ಮೇ. 20ರೊಳಗೆ ತಾಲೂಕು ಮಟ್ಟದ ಕಚೇರಿಗಳು ಬರಬೇಕಲ್ಲದೇ ಅಧಿಕಾರಿಗಳ ನೇಮಕವಾಗಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತಾಲೂಕಾ ಸಮಿತಿಯಿಂದ ಸತ್ಯಾಗ್ರಹ ಮಾಡಲಾವುದು ಎಂದು ರಮೇಶ ಉಟಗಿ ಎಚ್ಚರಿಕೆ ನೀಡಿದರು.
ರವಿವಾರ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ತಾಲೂಕಾ ಹೋರಾಟ ಸಮಿತಿ ಸದಸ್ಯರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಮೂಡಲಗಿ ತಾಲೂಕು ಕೇಂದ್ರವೇನೋ ಆಗಿದೆ. ಆದರೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ. ಕೋರ್ಟ್, ತಹಶೀಲ್ದಾರ, ತಾಲೂಕು ಪಂಚಾಯತ ಇಓ, ಸಿಟಿಪಿಓ ಇಲಾಖೆ ತಾಲೂಕು ಮಟ್ಟದ ಅ ಧಿಕಾರಿಗಳನ್ನು ಹೊರತು ಪಡಿಸಿದರೆ ಇತರೆ ಯಾವುದೇ ಇಲಾಖೆಯ ತಾಲೂಕು ಕಚೇರಿಗಳು ಇಲ್ಲ ಎಂದು ಅಸಮಾಧನ ವ್ಯಕ್ತಪಡಿಸಿದರು.
ತಾಲೂಕು ರಚನೆಯಾಗಿ ಸುಮಾರು 4 ವರ್ಷಗಳು ಕಳೆದರೂ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಅಬಕಾರಿ ನಿರೀಕ್ಷಕರ ಕಚೇರಿ, ಜಿಪಂ ಉಪವಿಭಾಗ, ಉಪನೋಂದಣಿ ಕಚೇರಿ, ಅಗ್ನಿಶಾಮಕ ಠಾಣೆ ಸೇರಿದಂತೆ ಅನೇಕ ಕಚೇರಿಗಳು ಬಂದಿಲ್ಲ. ಇದರಿಂದ ಗ್ರಾಮಗಳ ಜನರು ಸಣ್ಣ ಪುಟ್ಟ ದಾಖಲೆಗಳಿಂದ ಹಿಡಿದು ಎಲ್ಲ ಕೆಲಸಗಳಿಗೂ ಈಗಲೂ ಗೋಕಾಕಗೆ ಅಲೆದಾಡುವುದು ತಪ್ಪಿಲ್ಲ ಎಂದರು.
ಲಕ್ಕಣ್ಣ ಸವಸುದ್ದಿ ಮಾತನಾಡಿ, ತಾಲೂಕು ಕೇಂದ್ರವಾಗಿ ಘೋಷಣೆಯಾಗಿ ವರ್ಷಗಳೇ ಗತಿಸಿದರೂ ಅಂದುಕೊಂಡಷ್ಟು ಕಾಯಕಲ್ಪ ಸಿಕ್ಕಿಲ್ಲ. ತಾಲೂಕಿನಲ್ಲಿ ಕೃಷಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ರೈತರಿಗೆ ಬೇಕಾಗುವ ಕೃಷಿ ಇಲಾಖೆ, ಉಪನೋಂದಣಿ ಕಚೇರಿ ತ್ವರಿತವಾಗಿ ಆಗಬೇಕು. ಇತರೆ ನೂತನ ತಾಲೂಕುಗಳು ಈಗಾಗಲೇ ಅಭಿವೃದ್ಧಿಯಾಗಿದ್ದು, ತಾಲೂಕು ಕೇಂದ್ರವಾಗಿರುವ ಮೂಡಲಗಿ ಪಟ್ಟಣದ ಅಭಿವೃದ್ಧಿಯಾಗದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಅಭಿವೃದ್ದಿ ಕಾರ್ಯಗಳು ಮಾಧ್ಯಮಗಳಲ್ಲಿ ಮಾತ್ರ ಆಗಿದೆ ಹೊರತು ಇಲ್ಲಿ ಆಗಿಲ್ಲ ಎಂದು ಶಾಸಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.
ಭೀಮಪ್ಪ ಹಂದಿಗುಂದ ಹಾಗೂ ಎಮ್ ಎಸ್ ಪಾಟೀಲ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿಯವರು ತಾಲೂಕಿಗೆ ಬರಬೇಕಾದ ಇಲಾಖೆಗಳನ್ನು ಮೇ 20ರ ಒಳಗೆ ಪ್ರಾರಂಭಿಸಿ ಜನತೆಗೆ ಅನುಕೂಲ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗುರುನಾಥ ಗಂಗನ್ನವರ, ಲಿಂಗರಾಜ ಅಂಗಡಿ, ದುಂಡಪ್ಪ ಜಾಡರ, ಅವ್ವಪ್ಪ ತುಪಳೆ ಹಾಗೂ ಅನೇಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ