ಜನಪ್ರತಿನಿಧಿಗಳು ಪ್ರಗತಿ ಕನಸು ಕಾಣಲಿ
Team Udayavani, Mar 23, 2020, 7:53 PM IST
ಪಾಲಭಾವಿ: ಸರ್ಕಾರದ ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು. ಚುನಾಯಿತ ಜನಪ್ರತಿನಿಧಿಗಳು ಗ್ರಾಮದ ಅಭಿವೃದ್ಧಿಯ ಕನಸು ಕಾಣಬೇಕು ಎಂದು ರಾಯಬಾಗ ತಾಪಂ ಅಧ್ಯಕ್ಷೆ ಸುಜಾತಾ ಪಾಟೀಲ ಹೇಳಿದರು.
ಪಾಲಭಾವಿ ಗ್ರಾಪಂ ಕಾರ್ಯಾಲಯದ ಹತ್ತಿರ ನರೇಗಾ ಯೋಜನೆಯಡಿ 14 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಮೂಲಭೂತ ಅವಶ್ಯಕತೆಗಳಾದ ಗಟಾರು, ಶೌಚಾಲಯ, ರಸ್ತೆಗಳು, ಕುಡಿಯುವ ನೀರು, ವಿದ್ಯುತ್, ಶಿಕ್ಷಣ ಸೌಲಭ್ಯಕ್ಕೆ ಹೆಚ್ಚು ಮಹತ್ವ ನೀಡಬೇಕು. ಸರ್ಕಾರದ ಅನುದಾನ ಸದ್ವಿನಿಯೋಗ ಮಾಡಿಕೊಂಡು ಗ್ರಾಮವನ್ನು ನಂದನವನವನ್ನಾಗಿ ಮಾಡಬೇಕು ಎಂದರು.
ಅಥಣಿ ತಾಪಂ ಎಡಿ ಅರುಣ ಮಾಚಕನೂರ, ನಿವೃತ್ತ ಶಿಕ್ಷಕ ಚಂದ್ರಯ್ಯ ಹಿರೇಮಠ, ಮಲ್ಲಿಕಾರ್ಜುನ ತೇಲಿ ಮಾತನಾಡಿದರು. ಪಾಲಭಾವಿ ಸಿದ್ಧಾರೂಢ ಮಠದ ಪೀಠಾಧಿಪತಿ ಲೀಲಾವಧೂತ ಶಿವಾನಂದ ಸ್ವಾಮೀಜಿ, ಇಂಚಗೇರಿ ಮಠದ ಪ್ರದೀಪಕುಮಾರ ಘಂಟಿ ಮಹಾರಾಜರು ಸಾನ್ನಿಧ್ಯ, ಗ್ರಾಪಂ ಅಧ್ಯಕ್ಷೆ ಅರುಣಾ ಕರೋಶಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯ ಗಂಗಪ್ಪ ಕುರನಿಂಗ, ಗ್ರಾಪಂ ಉಪಾಧ್ಯಕ್ಷ ಸದಾಶಿವ ಭಂಡಾರಿ, ಭೂದಾನಿ ಅಣ್ಣಾಸಾಬಗೌಡ ಪಾಟೀಲ, ಗ್ರಾಪಂ ಸದಸ್ಯ ಪರಪ್ಪ ಗೊಡಿ, ಫಾರೂಕ್ ಮಿರ್ಜಿ, ಚನ್ನಪ್ಪ ಬಳಗಾರ, ಶಿರಿಯಾಳ ಮಾದರ, ದಾವಲ ಮೂಡಲಗಿ, ಶಿವಾನಂದ ಕಾಡಶೆಟ್ಟಿ, ಮಹಾಲಿಂಗಯ್ಯ ಮಠಪತಿ, ಗೋಮಟೇಶ ಪಾಟೀಲ, ಸಂಗಪ್ಪ ತುಪ್ಪದ, ಉಮೇಶ ನಿಂಗನೂರ, ಎಸ್.ಬಿ. ನಂದಗಾವಿ, ಶಿವಾಜಿ ಮೇತ್ರಿ, ವಿಠಲ ಕಲಾಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!