ಮಠಗಳ ಮಧ್ಯೆ ಸಾಮರಸ್ಯ ಮೂಡಲಿ; ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಭಗವದ್ಗೀತೆ ಅಭಿಯಾನಕ್ಕೆ ವೀರಶೈವ ಮಠಗಳಿಂದ ಉತ್ತಮ ಸಹಕಾರ ಸಿಗುತ್ತಿದೆ.

Team Udayavani, Dec 20, 2023, 6:14 PM IST

Belagavi

ಬೆಳಗಾವಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ. ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ
ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು.

ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಿಂದ ಸ್ವರ್ಣವಲ್ಲೀ ಶ್ರೀಗಳನ್ನು ಸತ್ಕರಿಸಿ,
ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಲಾಯಿತು.

ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಗದ್ಗುರು ಶ್ರೀ ರೇಣುಕಾಚಾರ್ಯರು ಮತ್ತು ಜಗದ್ಗುರು ಶಂಕರಾಚಾರ್ಯರು ಹಿಂದೆ ಒಟ್ಟಾಗಿ ಕೆಲಸ ಮಾಡಿದ್ದರೇನೋ ಎನ್ನುವ ಭಾವನೆ ನಮಗೆ ಬರುತ್ತಿದೆ. ಜಾತಿ ಮೀರಿ ಎರಡೂ ಮಠಗಳು ಕೆಲಸ ಮಾಡುತ್ತಿವೆ. ಮಠಗಳ ಮಧ್ಯೆ ಸಾಮರಸ್ಯ ಮೂಡಬೇಕು ಎನ್ನುವುದು ನಮ್ಮ ಭಾವನೆ. ಸ್ವರ್ಣವಲ್ಲೀ ಮಠ ಪೂರ್ಣ ಸುಖ ನೀಡುವ ಮಠವಾಗಿದೆ ಎಂದರು.

ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಮಠದ ಮಠಾ ಧೀಶ ಶ್ರೀಮದ್‌ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್‌
ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ಭಗವದ್ಗೀತೆಯ ಅಭಿಯಾನವನ್ನು ಕರ್ನಾಟಕದೆಲ್ಲೆಡೆ ಮಾಡುವ ಮೂಲಕ ಮನೆ ಮಾತಾಗಿದ್ದಾರೆ. ಶ್ರೀಗಳು ನಮ್ಮ  ಸನಾತನ ಧರ್ಮದ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ
ಎಂದು ಹೇಳಿದರು.

2007ರಿಂದಲೂ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಹಿಂದೂ ಧರ್ಮದಲ್ಲಿರುವ ಎಲ್ಲ ಸಂಪ್ರದಾಯದ ಮಠ, ಮಾನ್ಯಗಳು ಒಂದಾಗಿ ಸನಾತನ ಸಂಸ್ಕೃತಿ ಎತ್ತಿ ಹಿಡಿದಾಗ ಮಾತ್ರ ಭಾರತಕ್ಕೆ ಭವಿಷ್ಯ ಇದೆ. ಈ ನಿಟ್ಟಿನಲ್ಲಿ ನಮ್ಮದು ವೀರಶೈವ ಮಠ, ರೇಣುಕಾಚಾರ್ಯರ ಪರಂಪರೆಯ ಮಠ, ಸ್ವರ್ಣವಲ್ಲಿ ಜಗದ್ಗುರುಗಳದ್ದು ಶಂಕರಾಚಾರ್ಯರ ಪಂರಪರೆಯ ಮಠವಾಗಿದೆ. ಇತಿಹಾಸದಲ್ಲಿ ಜಗದ್ಗುರು ರೇಣುಕಾಚಾರ್ಯರು ಮತ್ತು ಶಂಕರಾಚಾರ್ಯರು ಒಂದಾಗಿದ್ದರು ಎನ್ನುವ ಮಾತು ಇದೆ ಎಂದರು.

ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, ಎಲ್ಲ ಸಂಪ್ರದಾಯದ ಮಠಗಳೂ ಒಂದಾಗಬೇಕು. ಅದೇ ಸಮನ್ವಯ. ಧರ್ಮಗಳು, ಆಧ್ಯಾತ್ಮಿಕ ಚಿಂತನೆಗಳು ಭಾರತದಲ್ಲಿ ಹುಟ್ಟಿದಷ್ಟು ಬೇರೆಲ್ಲೂ ಹುಟ್ಟಿಲ್ಲ. ಭಾರತ ಅಖಂಡವಾಗಬೇಕಾದರೆ, ಇಲ್ಲಿನ ಸಮಸ್ಯೆಗಳು ನಿವಾರಣೆಯಾಗಬೇಕಾದರೆ ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾಗಬೇಕು ಎಂದರು.

ಭಗವದ್ಗೀತೆ ಅಭಿಯಾನಕ್ಕೆ ವೀರಶೈವ ಮಠಗಳಿಂದ ಉತ್ತಮ ಸಹಕಾರ ಸಿಗುತ್ತಿದೆ. ಅದರಲ್ಲೂ ಹುಕ್ಕೇರಿ ಮಠದಿಂದ ಪರಮೋಚ್ಚ
ಸಹಕಾರ ಇದೆ. ಇಲ್ಲಿ ಒಂದು ಮಠದಿಂದ ಇನ್ನೊಂದು ಮಠದ ಸ್ವಾಮಿಗಳನ್ನು ಸತ್ಕರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಿದೆ. ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಾಮಾಜಿಕ, ಧಾರ್ಮಿಕ ಕಾರ್ಯದಲ್ಲಿ ಇತಿಹಾಸವನ್ನೆ ಸೃಷ್ಟಿಸಿದ್ದಾರೆ. ಬೆಲ್ಲದಂತೆ ತಾನಾಗಿಯೇ ಉಕ್ಕೇರುವ ಸಿಹಿ ಹುಕ್ಕೇರಿ ಶ್ರೀಗಳು. ಅವರು ನೀಡಿರುವ ಗೀತಾಭಿಯಾನಾರ್ಣವ ಪ್ರಶಸ್ತಿ ಶಂಕರಾಚಾರ್ಯರಿಗೆ ಸಲ್ಲಬೇಕು ಎಂದು ಸ್ವರ್ಣವಲ್ಲೀ ಶ್ರೀಗಳು ಹೇಳಿದರು.

ಭಗವದ್ಗೀತೆಯನ್ನು ಜನರ ಬಾಯಿಯಿಂದ ಹೇಳಿಸಬೇಕು. ಅವರಿಗೆ ತಿಳಿಸಬೇಕು ಎನ್ನುವುದೇ ಭಗವದ್ಗೀತೆ ಅಭಿಯಾ ನದ
ಉದ್ದೇಶವಾಗಿದೆ. ಡಿ. 23ರಂದು ಬೆಳಗಾವಿಯಲ್ಲಿ ನಡೆಯಲಿರುವ ಭಗವದ್ಗೀತೆ  ಅಭಿಯಾನದ ಮಹಾಸಮರ್ಪಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸ್ವರ್ಣವಲ್ಲೀ ಶ್ರೀಗಳು ಕರೆ ನೀಡಿದರು.

ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠ ಗುರುಕುಲದ ಸುಮಾರು 150 ವೇದ ವಟುಗಳು ಹಾಗೂ 50 ಜನ ಮಹಿಳೆಯರು ಒಟ್ಟಿಗೆ ಭಗವದ್ಗೀತೆ ಪಠಣ ಮಾಡಿದರು. ಸುಬ್ರಹ್ಮಣ್ಯ ಭಟ್‌ ನಿರೂಪಿಸಿದರು. ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ, ಕಾರ್ಯದರ್ಶಿ ಎಂ.ಕೆ. ಹೆಗಡೆ, ಗಣೇಶ ಹೆಗಡೆ, ವೆಂಕಟ್ರಮಣ ಹೆಗಡೆ ಇತರರು ಇದ್ದರು.

ಕಾರ್ಯಕ್ರಮಕ್ಕೆ ಸಂದೇಶ ನೀಡಿರುವ ತುಮಕೂರಿನ ಡಾ| ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶ್ರೀಮದ್‌ ಗಂಗಾಧರೇಂದ್ರ
ಸರಸ್ವತಿ ಸ್ವಾಮಿಗಳು ಭಗವದ್ಗೀತೆಯನ್ನು ಮನೆ ಮನೆಗೆ ತಲುಪಿಸುವ ಮತ್ತು ಮನ ಮನಕ್ಕೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಗೀತಾ ಅಭಿಯಾನದ ಸಮುದ್ರದಂತಿರುವ ಶ್ರೀಗಳಿಗೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಗೀತಾಭಿಯಾನಾರ್ಣವ ಅಭಿನಂದನಾ ಗೌರವ ಸಲ್ಲಿಸಿದ್ದು ನಿಜಕ್ಕೂ ಸೂಕ್ತ ಮತ್ತು ಸಮಯೋಚಿತ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.