ಪಕ್ಷ-ಜಾತಿ ಭೇದ ಮರೆತು ಕನ್ನಡ ಕಟ್ಟುವ ಕೆಲಸವಾಗಲಿ

ಕಸಾಪ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ; ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

Team Udayavani, Jun 19, 2022, 4:22 PM IST

15

ಮುನವಳ್ಳಿ: ಕನ್ನಡದ ನೆಲ, ಜಲ, ಭಾಷೆ ರಕ್ಷಣೆಗೆ ಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತು ಒಂದಾದರೆ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ. ತಾಯ್ನಾಡು ಹಾಗೂ ಮಾತೃಭಾಷೆ ಉಳಿಸುವ ಕೆಲಸವಾಗಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಪಟ್ಟಣದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಮುನವಳ್ಳಿ ಹೋಬಳಿ ಘಟಕದ ನೂತನ ಪದಾಧಿ ಕಾರಿಗಳ ಅಧಿಕಾರ ಸ್ವೀಕಾರ ಹಾಗೂ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶ್ರೀ ನಿತ್ಯಾನಂದ ಸತ್ಸಂಗ ಆಶ್ರಮದ ಶ್ರೀ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ಕನ್ನಡ ಭಾಷೆಯಲ್ಲಿ ಅನ್ಯ ಭಾಷೆಗಳು ಹೊಕ್ಕು, ಕನ್ನಡ ನುಂಗಿ ಹಾಕುತ್ತಿವೆ. ಇದರಿಂದ ನಮ್ಮ ಕನ್ನಡ ಸಂಸ್ಕೃತಿ ಬಿಟ್ಟು ಬೇರೆ ಭಾಷೆಗಳ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದೇವೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವ ಪ್ರತಿಜ್ಞೆ ಮಾಡುವ ನಿರ್ಧಾರ ಕೈಗೊಳ್ಳಬೇಕು ಎಂದರು.

ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ಮಾತನಾಡಿ, ಎಲ್ಲ ಭಾಷೆಯ ಪತ್ರಿಕೆಗಳು ಸಿಗುವ ರಾಜ್ಯ ಕರ್ನಾಟಕ ಮಾತ್ರ. ಏಕೆಂದರೆ, ತಮಿಳಿನಲ್ಲಿ ತಮಿಳು ಪತ್ರಿಕೆ, ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ, ಆಂಧ್ರದಲ್ಲಿ ತೆಲುಗು ಪತ್ರಿಕೆ ಮಾತ್ರ ಸಿಗುತ್ತವೆ. ಆದರೆ ನಮ್ಮ ಕರ್ನಾಟಕದಲ್ಲಿ ಎಲ್ಲ ಭಾಷೆ ಪತ್ರಿಕೆಗಳು ದೊರೆಯುತ್ತವೆ ಎಂದರು.

ಬಸವರಾಜ ನಾವಲಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಡಾ| ವೈ.ಎಂ. ಯಾಕೊಳ್ಳಿ, ಟಿ.ಎಂ. ಕಾಮಣ್ಣವರ, ಮುಖಂಡರಾದ ರಮೇಶ ಗೋಮಾಡಿ, ರವೀಂದ್ರ ಯಲಿಗಾರ, ಉಮೇಶ ಬಾಳಿ, ಪಂಚನಗೌಡ ದ್ಯಾಮನಗೌಡರ, ಪುರಸಭೆ ಮುಖ್ಯಾಧಿಕಾರಿ ರಮೇಶ ಹಿಟ್ಟಣಗಿ, ಅನ್ನಪೂರ್ಣ ಲಂಬೂನವರ, ಮುನವಳ್ಳಿ ಹೋಬಳಿ ಘಟಕದ ನೂತನ ಅಧ್ಯಕ್ಷ ಮೋಹನ ಸರ್ವಿ ಆಗಮಿಸಿದ್ದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸು ಬೇವಿನಗಿಡದ, ಡಾ| ಎ.ಎಸ್‌. ಅಮೋಘಿಮಠ, ಡಾ| ಎಚ್‌.ಎಸ್‌. ಗೋಟಿ, ಬಿ.ಬಿ. ಹುಲಿಗೊಪ್ಪ, ಸುಧಿಧೀರ ವಾಘೇರಿ, ಅಶ್ವಿ‌ನಿ ಪಾತಾಳಿ, ಸಹನಾ ರಾಯರ ಅವರನ್ನು ಸನ್ಮಾನಿಸಲಾಯಿತು.

ಅಲ್ಲದೇ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜರುಗಿತು. ಈ ವೇಳೆ ಸುರೇಶ ಜಾವೂರ, ಶ್ರೀಕಾಂತ ಮಿರಜಕರ, ಮಂಜುನಾಥ ಭಂಡಾರಿ, ಗುರುನಾಥ ಪತ್ತಾರ, ಸುಧಿಧೀರ ವಾಘೇರಿ, ಪ್ರಶಾಂತ ತುಳಜಣ್ಣವರ, ವೀರಣ್ಣ ಕೊಳಕಿ, ರಮೇಶ ಮುರಂಕರ, ಗಂಗಾಧರ ಗೊರಾಬಾಳ, ಟಿ.ಎನ್‌. ಮುರಂಕರ, ಬಿ.ಎಚ್‌. ಖೊಂದುನಾಯ್ಕ, ಬಾಳು ಹೊಸಮನಿ, ಜಿ.ಎಸ್‌. ಚಿಪ್ಪಲಕಟ್ಟಿ, ನಾಗೇಶ ಹೊನ್ನಳ್ಳಿ, ರಾಧಾ ಕುಲಕರ್ಣಿ, ಅನುರಾಧಾ ಬೆಟಗೇರಿ, ಶಾರದಾ ದ್ಯಾಮನಗೌಡರ, ಸುಮಾ ಯಲಿಗಾರ, ಪುಷ್ಪಾ ಪಶುಪತಿಮಠ, ವೈ. ಎಫ್‌. ಶಾನಭೋಗ, ವಿರಾಜ ಕೊಳಕಿ, ಎಂ.ಬಿ. ಅಷ್ಟಗಿಮಠ, ಅರುಣಗೌಡ ಪಾಟೀಲ, ಪ್ರಾಚಾರ್ಯ ಎಂ.ಎಚ್‌. ಪಾಟೀಲ, ಶ್ರೀಶೈಲ ಗೋಪಶೆಟ್ಟಿ, ಶಂಕರ ರಾಠೊಡ, ರಾಜೇಶ್ವರಿ ಬಾಳಿ, ಎಂ.ಜಿ. ಹೊಸಮಠ, ಅನಿತಾ ಯಲಿಗಾರ ಇದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.