ಹೆಬ್ಬಾಳ್ಕರ್ ಮತ್ತೆ ಗೆದ್ದರೆ ಹಾರ ಹಾಕೋಣ: ವ್ಯಂಗ್ಯ
Team Udayavani, Dec 26, 2020, 1:19 PM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹೆಸರು ಪ್ರಸ್ತಾಪಿಸದೇ ಮಾತಿನ ಸಮರ ಮುಂದುವರಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಈ ಕ್ಷೇತ್ರದಲ್ಲಿ ಶಾಸಕಿ ಮತ್ತೆ ಗೆದ್ದು ಬಂದರೆ ಅವರಿಗೆ ಹಾರ ಹಾಕೋಣ ಎಂದು ವ್ಯಂಗವಾಡಿದರು.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ನಾವು ಯಾವ ರೀತಿ ತಯಾರಿ ಮಾಡಿದ್ದೆವು ಎಂಬುದು ಜನರಿಗೆ ಗೊತ್ತು. ಆಗ ಜನರು ನನ್ನ ನಂಬಿ ಮತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಗೆದ್ದು ಬಂದ ಮೇಲೆ ಶಾಸಕಿ ಅದನ್ನು ಬೇರೆ ರೀತಿ ಉಪಯೋಗ ಮಾಡಿಕೊಂಡರು.
ಇದನ್ನೂ ಓದಿ:ಮೂತ್ರಕೋಶ ನೋವು ಕಾಯಿಲೆ ಬ್ಲಾಡರ್ ಪೇಯ್ನ ಸಿಂಡ್ರೋಮ್ (ಬಿಪಿಎಸ್)
ಬೆಳಗಾವಿ ಗ್ರಾಮೀಣ ಶಾಸಕಿ ಬಗ್ಗೆ ಮಾತನಾಡದಿರುವಂತೆ ಬಿಜೆಪಿ ವರಿಷ್ಠರು ನನಗೆ ಎಚ್ಚರಿಕೆ ನೀಡಿದ್ದರು. ಹೀಗಾಗಿ ಆರು ತಿಂಗಳಿಂದ ಸುಮ್ಮನಿದ್ದೇನೆ. ನಾನು ಯಾರ ಮೇಲೂ ಸೇಡು ತೀರಿಸಿ ಕೊಳ್ಳು ವುದಿಲ್ಲ. ಆದರೆ ನಮ್ಮ ಕ್ಷೇತ್ರವನ್ನು ಮರಳಿ ತೆಗೆದುಕೊಳ್ಳುವಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ಕಳೆದ ಚುನಾವಣೆಯಲ್ಲಿ ನನ್ನನ್ನು ನಂಬಿ ಮತ ಹಾಕಿದ್ದ ಬೆಳಗಾವಿ ಗ್ರಾಮೀಣ ಜನರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎಂದರು.
ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಆಪ್ತರಲ್ಲಿ ಒಬ್ಬರಾದ ಯುವರಾಜ ಕದಂ ಬಿಜೆಪಿಗೆ ಬರುವುದು ಅಥವಾ ಬಿಡುವುದು ಅವರ ವೈಯಕ್ತಿಕ ವಿಚಾರ. ಇದರಲ್ಲಿ ನಮ್ಮ ಯಾವುದೇ ಪಾತ್ರ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ