- Wednesday 11 Dec 2019
ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಶ್ರಮಿಸೋಣ
Team Udayavani, Sep 9, 2019, 10:33 AM IST
ಬೆಳಗಾವಿ: ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ರವಿವಾರ ನಡೆದ ಪ್ಲಾಸ್ಟಿಕ್ ಮುಕ್ತ ಬೆಳಗಾವಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ರಹಿತ ಚೀಲವನ್ನು ಕೊಡುಗೆಯಾಗಿ ನೀಡಲಾಯಿತು.
ಬೆಳಗಾವಿ: ದಿನ ನಿತ್ಯ ನಾವು ತಿಳಿದೋ ತಿಳಿಯದೆಯೋ ಶೇ. 60ರಷ್ಟು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದೇವೆ. ಇದರಿಂದ ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಎಲ್ಲರೂ ಶ್ರಮಿಸಬೇಕಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹೇಳಿದರು.
ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ರವಿವಾರ ನಡೆದ ಪ್ಲಾಸ್ಟಿಕ್ ಮುಕ್ತ ಬೆಳಗಾವಿ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮುದ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ಬೀಳುತ್ತಿರುವುದರಿಂದ ಜಲಚರ ಜೀವಿಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ನಿಂದ ಜೀವ ಕಳೆದುಕೊಳ್ಳುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದರು.
ಒಳ್ಳೆಯ ಕೆಲಸ ಮಾಡಲು ಜನರನ್ನು ಜಾಗೃತಿ ಮಾಡಬೇಕು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಸಂಕಲ್ಪ ಮಾಡಿದ್ದಾರೆ. ಅದಕ್ಕೆ ಎಲ್ಲರೂ ಕೈ ಜೋಡಿಸುವ ಅಗತ್ಯವಿದೆ. ಪ್ಲಾಸ್ಟಿಕ್ ಮುಕ್ತ ಭಾರತ ಮಾಡಲು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣ ಮಾಡಲು ಜನರು ಸಂಕಲ್ಪ ಮಾಡಬೇಕು. ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಜನ ಪ್ಲಾಸ್ಟಿಕ್ ಬಳಸುವುದನ್ನು ತ್ಯಜಿಸಿದಾಗ ಮಾತ್ರ ಹಂತ ಹಂತವಾಗಿ ಪ್ಲಾಸ್ಟಿಕ್ ಮುಕ್ತವಾಗುವುದು ಎಂದರು.
ಮನೆಯಲ್ಲಿ ಉಪಯೋಗಿಸುವ ಪ್ಲಾಸ್ಟಿಕ್ ಬಳಕೆಯ ತ್ಯಾಜ್ಯದಿಂದ ಸಾವಿರಾರು ಪ್ರಾಣಿ ಸಂಕುಲಗಳು ನಶಿಸುತ್ತಿವೆ. ಪ್ರವಾಹದಲ್ಲಿ ಹರಿದು ಬಂದಿದ್ದು ಅತೀ ಹೆಚ್ಚು ಪ್ಲಾಸ್ಟಿಕ್ ಚೀಲಗಳು. ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಮೊದಲು ಮನೆಯಿಂದಲೇ ಸಂಕಲ್ಪ ಪ್ರಾರಂಭವಾಗಬೇಕು. ಬಳಿಕ ಸಮಾಜಕ್ಕೆ ತಿಳಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕೆಂದು ಹೇಳಿದರು.
ಈ ವೇಳೆ ನ್ಯಾಯಾಧೀಧಿಶರಾದ ಮಹಾದೇವಯ್ಯ , ಬಿ.ಐ. ಪಾಟೀಲ, ಅರವಿಂದ ಜೋಶಿ, ವೀರೂಪಾಕ್ಷಯ್ಯ ನೀರಲಗಿಮಠ ಸೇರಿದಂತೆ ಇತರರು ಇದ್ದರು.
ಈ ವಿಭಾಗದಿಂದ ಇನ್ನಷ್ಟು
-
ಬೆಳಗಾವಿ: ಉಪ ಚುನಾವಣೆ ಮುಗಿದು ಫಲಿತಾಂಶ ಬಂದ ಬೆನ್ನಲ್ಲೇ ಯಾರು ಉಪ ಮುಖ್ಯಮಂತ್ರಿ, ಯಾರಿಗೆ ಸಚಿವ ಸ್ಥಾನ, ಜಿಲ್ಲಾ ಉಸ್ತುವಾರಿ ಯಾರಿಗೆ ಎಂಬ ಚರ್ಚೆ ಜಿಲ್ಲೆಯಲ್ಲಿ...
-
ಮೂಡಲಗಿ: ಗೋಕಾಕ ಮತಕ್ಷೇತ್ರದ ಇತಿಹಾಸದಲ್ಲಿಯೇ ಪ್ರಥಮ ಭಾರೀಗೆ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರು ಆಯ್ಕೆಯಾಗಿದರಿಂದ ಮೂಡಲಗಿ ಪಟ್ಟಣ ಸೇರಿದಂತೆ ಅರಭಾವಿ ಕ್ಷೇತ್ರದಲ್ಲಿ...
-
ಹಾರೂಗೇರಿ: ಅಬಾಜಿಯವರು ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಬಡ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಮೂಲಕ ಸಹಸ್ರಾರು...
-
ಚಿಕ್ಕೋಡಿ: ಕೃಷ್ಣಾ ನದಿಗೆ ಕಟ್ಟಿರುವ ಕಲ್ಲೋಳ-ಯಡೂರ ಸೇತುವೆ ಕಳೆದ ಹತ್ತು ವರ್ಷಗಳಿಂದ ಶಿಥಿಲಗೊಂಡು ಈಗಲೋ ಆಗಲೋ ಬೀಳುವ ಹಂತ ತಲುಪಿದೆ. ಸೇತುವೆ ಮೇಲೆ ಭಾರಿ ವಾಹನಗಳು...
-
ಚಿಕ್ಕೋಡಿ: ರಾಜ್ಯದ ಅಂಗನವಾಡಿ ಕಟ್ಟಡಗಳಿಗೆ ಪುನನಿರ್ಮಾಣ ಹಾಗೂ ನವೀಕರಣದ ಅವಶ್ಯಕವಿದ್ದು, ಕೂಡಲೇ ಕೇಂದ್ರ ಸಚಿವರು ಗಮನ ಹರಿಸಿ ಸೂಕ್ತ ಅನುದಾನ ಬಿಡುಗಡೆ ಮಾಡಬೇಕೆಂದು...
ಹೊಸ ಸೇರ್ಪಡೆ
-
ರಾವಲ್ಪಿಂಡಿ: ದಶಕದ ಬಳಿಕ ತವರಲ್ಲಿ ಟೆಸ್ಟ್ ಸಂಭ್ರಮ ಆಚರಿಸುತ್ತಿರುವ ಪಾಕಿಸ್ಥಾನ, ಪ್ರವಾಸಿ ಲಂಕಾ ವಿರುದ್ಧ ಮೊದಲ ದಿನದಾಟದಲ್ಲಿ ಮೇಲುಗೈ ಸಾಧಿಸಿದೆ. ಬೆಳಕಿನ...
-
ಕರಾಚಿ: ದಶಕದ ಬಳಿಕ ತಾಯ್ನಾಡಿನಲ್ಲಿ ಟೆಸ್ಟ್ ಪಂದ್ಯ ಆಯೋಜಿಸಿದ ಸಂಭ್ರಮದಲ್ಲಿರುವ ಪಾಕಿಸ್ಥಾನ, ಮುಂದಿನ ವರ್ಷಾರಂಭದಲ್ಲಿ ಬಾಂಗ್ಲಾದೇಶ ವಿರುದ್ಧ ಹಗಲು-ರಾತ್ರಿ...
-
ಪುತ್ತೂರು: ವಿಜ್ಞಾನ ಕಷ್ಟ ಎನಿಸಿದರೂ ಆಟದ ರೀತಿಯಲ್ಲಿ ವಿನಿ ಯೋಗಿಸಿದರೆ ಉತ್ತಮ ಅನ್ವೇಷಣೆ ಮಾಡ ಬಹುದು. ಈ ನಿಟ್ಟಿನಲ್ಲಿ ಮಕ್ಕಳು ಅನ್ವೇಷಣೆ ಯಲ್ಲಿ ಪಾಲ್ಗೊಳ್ಳಬೇಕೆಂದು...
-
ಮುಂಬಯಿ: ಭಾರತದ ಭಾರೀ ಮೊತ್ತಕ್ಕೆ ಜವಾಬು ನೀಡುವಲ್ಲಿ ಎಡವಿದ ಟಿ20 ವಿಶ್ವ ಚಾಂಪಿಯನ್ ವೆಸ್ಟ್ ಇಂಡೀಸ್ ಮುಂಬಯಿಯ 3ನೇ ಹಾಗೂ ಅಂತಿಮ ಪಂದ್ಯವನ್ನು 67 ರನ್ನುಗಳಿಂದ...
-
ಹಾಸನ: ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಒಳಒಪ್ಪಂದ ಮಾಡಿಕೊಂಡಿದ್ದರಿಂದಾಗಿ ಜೆಡಿಎಸ್ ಅಭ್ಯರ್ಥಿಗಳು...