ಲಂಬಾಣಿ ಜನಾಂಗದಿಂದ ಪತ್ರ ಚಳವಳಿ
Team Udayavani, Jun 11, 2020, 6:52 AM IST
ಬೈಲಹೊಂಗಲ: ಲಂಬಾಣಿ, ಭೋವಿ, ಕೊರಚ, ಕೊರಮ ಉಪಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಹೊರತೆಗೆಯುವುದನ್ನು ವಿರೋಧಿಸಿ ಲಂಬಾಣಿ ಜನಾಂಗದವರು ಪತ್ರ ಚಳವಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬುಧವಾರ ಅಂಚೆ ಮೂಲಕ ಪತ್ರಗಳನ್ನು ರವಾನಿಸಿದ್ದಾರೆ. ಪಟ್ಟಣದ ಮುಖ್ಯ ಅಂಚೆ ಕಚೇರಿ ಮುಂಭಾಗದಲ್ಲಿ ಪತ್ರ ಚಳವಳಿ ನಡೆಸಿದ ಲಂಬಾಣಿ ಸಮುದಾಯವರು, ಸದಾಶಿವ ಆಯೋಗದಲ್ಲಿ ಲಂಬಾಣಿ ಜನಾಂಗದ ಜೊತೆ ಉಪಜಾತಿಗಳನ್ನು ಪಟ್ಟಿಯಿಂದ ಹೊರ ತೆಗೆಯುವಂತೆ ಸೂಚಿಸಿರುವ ಕ್ರಮ ತೀವ್ರ ಖಂಡನೀಯ. ಕೂಡಲೇ ಮುಖ್ಯಮಂತ್ರಿಗಳು ಎಚ್ಚೆತ್ತುಕೊಂಡು ಸೂಚನೆಯನ್ನು ಹಿಂಪಡೆಯಬೇಕು. ಸರ್ಕಾರ ಮನವಿಗೆ ಸ್ಪಂದಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಲಂಬಾಣಿ ಸಮುದಾಯದ ಮುಖಂಡರಾದ ಬಿ.ವೈ. ನಾಯ್ಕ, ಗುರು ಕಾರಬಾರಿ, ಶಿವಾನಂದ ರಜಪೂತ, ಕೃಷ್ಣ ಲಮಾಣಿ, ಸೋಮು ಲಮಾಣಿ, ಕುಮಾರ ನಾಯ್ಕ, ದಯಾನಂದ ಲಮಾಣಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್