ಜಿಲ್ಲೆಯ 11 ನ್ಯಾಯಬೆಲೆ ಅಂಗಡಿಗಳ ಲೈಸೆನ್ಸ್‌ ಅಮಾನತು


Team Udayavani, May 1, 2020, 6:07 PM IST

bg-tdy-2

ಬೆಳಗಾವಿ: ಎಪ್ರೀಲ್‌ ತಿಂಗಳ ವಿತರಣೆಯಲ್ಲಿ ಸರಿಯಾದ ತೂಕದ ಪಡಿತರ ನೀಡದ ಮತ್ತು ಹಣ ಪಡೆದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 11 ನ್ಯಾಯಬೆಲೆ ಅಂಗಡಿಗಳ ಪ್ರಾಧಿಕಾರವನ್ನು ಅಮಾನತುಗೊಳಿಸಲಾಗಿದೆ.

ಹಾಗೂ 35 ನ್ಯಾಯಬೆಲೆ ಅಂಗಡಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್‌ಅಅದೇ ರೀತಿ ಮೇ ತಿಂಗಳ ಪಡಿತರ ವಿತರಣೆಯಲ್ಲಿ ಪಡಿತರ ಚೀಟಿದಾರರಿಗೆ ಸರಿಯಾದ ತೂಕದ ಪಡಿತರ ನೀಡದ, ಹಣ ಪಡೆದಿರುವ ಮತ್ತು ಪಡಿತರೇತರ ವಸ್ತುಗಳನ್ನು(ಮುಕ್ತ ಮಾರುಕಟ್ಟೆಯ ವಸ್ತುಗಳು) ನ್ಯಾಯಬೆಲೆ ಅಂಗಡಿಗಳಲ್ಲಿ ಮಾರಾಟ ಮಾಡುವ ಪ್ರಕರಣಗಳು ಕಂಡುಬಂದರೆ ಅಂತಹ ಅಂಗಡಿಕಾರರ ಲೈಸೆನ್ಸ್‌ ಪ್ರಾಧಿಕಾರ ಅಮಾನತುಗೊಳಿಸುವುದಲ್ಲದೇ ಕ್ರಿಮಿನಲ್‌ ಮೊಕದ್ದಮೆ ಸಹ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಪಡಿತರ ಚೀಟಿದಾರರು ಯಾವುದಾದರೂ ದೂರುಗಳಿದ್ದರೆ ಬೆಳಗಾವಿ ನಗರಕ್ಕೆ ಸಂಬಂಧಿಸಿದಂತೆ ಸಹಾಯಕ ನಿರ್ದೇಶಕರು ಮತ್ತು ಆಹಾರ ನಿರೀಕ್ಷಕರಲ್ಲಿ ಹಾಗೂ ಆಯಾ ತಾಲೂಕುಗಳಲ್ಲಿ ತಹಶೀಲ್ದಾರರು ಮತ್ತು ಸಂಬಂಧಪಟ್ಟ ಆಹಾರ ನಿರೀಕ್ಷಕರಲ್ಲಿ ದೂರು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 1 ರಿಂದ ಪಡಿತರ ವಿತರಣೆ: ಕೋವಿಡ್‌ -19 ವೈರಾಣು ಜಿಲ್ಲೆಯ ಸಾರ್ವಜನಿಕರನ್ನು ಕಂಗೆಡಿಸಿದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ ಕಲ್ಯಾಣ ಅನ್ನ ಯೋಜನೆಯ ಮೂಲಕ ಮೇ ಮೊದಲನೆಯ ತಾರೀಖೀನಿಂದ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್‌ ಬಿ ಬೊಮ್ಮನಹಳ್ಳಿ ತಿಳಿಸಿದ್ದಾರೆ. ಮೇ 1 ರಿಂದ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಪಡಿತರ ವಿತರಣೆ ಕಾರ್ಯ ನಡೆಸಲಾಗುವುದು. ಅಕ್ಕಿಯೊಂದಿಗೆ ಕಡ್ಡಾಯವಾಗಿ ತೊಗರಿಬೇಳೆಯನ್ನು ವಿತರಿಸಬೇಕು. ಪಡಿತರವನ್ನು ಪಡೆಯಲು ಬರುವ ಸದಸ್ಯರು ಕಡ್ಡಾಯವಾಗಿ ಮಾಸ್ಕ(ಮುಖಗವಸು) ಧರಿಸಿರಬೇಕು. ಕೇಂದ್ರ ಸರ್ಕಾರದ ಗ್ರಾಹಕರ ಮತ್ತು ಆಹಾರ ನಾಗರಿಕ ಸರಬರಾಜು ಮಂತ್ರಾಲಯದ ಆದೇಶದ ಅನ್ವಯ ಓ.ಟಿ.ಪಿ ಮೂಲಕವೇ ಕಡ್ಡಾಯವಾಗಿ ಪಡಿತರ ವಿತರಿಸುವದರಿಂದ ಪಡಿತರ ಚೀಟಿದಾರರು ನೋಂದಾಯಿತ ಮೋಬೆ„ಲ್‌ ತರಬೇಕು ಎಂದು ಅವರು ಹೇಳಿದ್ದಾರೆ.

ಆದ್ಯತಾ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಿದ ಪ್ರತಿ ಕುಟುಂಬಕ್ಕೆ ಸರ್ಕಾರವು 10ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದು 2019 ಮಾರ್ಚ ತಿಂಗಳಿನಿಂದ ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಮೊಬೈಲ್‌ ಮತ್ತು ಆಧಾರ ಕಾರ್ಡನೊಂದಿಗೆ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಓ.ಟಿ.ಪಿ. ಮೂಲಕ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಪಡೆಯಬಹುದಾಗಿದೆ. ಅಂತ್ಯೋದಯ ಪಡಿತರ ಚೀಟಿಗಳು ಹೊಂದಿರುವ ಪ್ರತಿ ಸದಸ್ಯರಿಗೆ ಉಚಿತವಾಗಿ 10ಕೆಜಿ ಅಕ್ಕಿ ಮತ್ತು ಪ್ರತಿ ಪಡಿತರ ಚೀಟಿಗೆ(ಕುಟುಂಬಕ್ಕೆ) 1ಕೆಜಿ ತೊಗರಿ ಬೇಳೆ ನೀಡಲಾಗುವುದು. ಆದ್ಯತಾ ಕುಟುಂಬಗಳ ಪ್ರತಿ ಸದಸ್ಯರಿಗೆ 10ಕೆಜಿ ಅಕ್ಕಿ ಮತ್ತು ಪ್ರತಿ ಪಡಿತರ ಚೀಟಿಗೆ(ಕುಟುಂಬಕ್ಕೆ) 1ಕೆಜಿ ತೊಗರಿ ಬೇಳೆಯನ್ನು ಉಚಿತವಾಗಿ ವಿತರಿಸಲಾಗುವದು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.