ಅಂಗಾಂಗ ದಾನದಿಂದ ಜೀವರಕ್ಷಣೆ


Team Udayavani, Feb 23, 2020, 12:59 PM IST

bg-tdy-2

ಚಿಕ್ಕೋಡಿ: ದೇಹ ಅಮೂಲ್ಯ ವಸ್ತು. ಸಾವಿನ ನಂತರ ಅದನ್ನು ಸುಡುವುದರಿಂದ ಬೆಲೆ ಬಾಳುವ ಅಂಗಾಂಗಗಳು ಬೂದಿಯಾಗುತ್ತವೆ. ಅದರ ಬದಲು ಅಂಗಾಂಗ ದಾನ ಮಾಡುವುದರಿಂದ ಎಷ್ಟೋ ಅನಾರೋಗ್ಯ ಮತ್ತು ಅಪಘಾತಕ್ಕೀಡಾದ ಜೀವಿಗಳು ಉಳಿಯುತ್ತವೆ ಎಂದು ಮುಂಬಯಿ ಅಂಗಾಂಗ ಮತ್ತು ದೇಹದಾನ ಒಕ್ಕೂಟದ ಸಂಚಾಲಕ ಪುರುಷೋತ್ತಮ ಪವಾರ ಹೇಳಿದರು.

ಇಲ್ಲಿನ ಕೆ.ಎಲ್‌.ಇ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಮ್ಮಿಕೊಂಡ ಅಂಗಾಂಗ ದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾನವ ಜೀವನ ಜೀವಂತವಿದ್ದಾಗಲೂ ಹಾಗೂ ಮರಣದ ನಂತರವೂ ಸಮಾಜಕ್ಕೆ ಉಪಯುಕ್ತವಾಗಬೇಕು. ಮಾನವ ದೇಹದ ಅಂಗದಾನ ಮಾಡುವುದರಿಂದ ಇತರರು ಬದುಕುತ್ತಾರೆ. ನೇತ್ರದಾನದಿಂದ ಅಂಧರು ದೃಷ್ಟಿ ಪಡೆಯುತ್ತಾರೆ. ಇದರಿಂದ ಯಾರಿಗೂ ಯಾವುದೇ ನಷ್ಟವಿಲ್ಲ ಎಂದರು.

ಸಾವಿನ ನಂತರ ದೇಹದ ಅಂಗದಾನ ಮಾಡುವುದರಿಂದ ಮುಂದಿನ ಜನ್ಮದಲ್ಲಿ ಕುರುಡರಾಗುತ್ತೇವೆಂಬುದು ಮೂಢನಂಬಿಕೆ. ದೇಹದಾನ ಪವಿತ್ರ ಕೆಲಸ ಎಂದರು. ಯಾವ ಆಸ್ಪತ್ರೆಯ ಪರವಾಗಿಯೂ ನಾವು ಪ್ರಚಾರಕ್ಕೆ ಬಂದಿಲ್ಲ. ಇದು ಕೇವಲ ಸಮಾಜ ಸೇವೆ. ನಮ್ಮ ತಂಡ ಅಂಗಾಂಗ ದಾನ ಜಾಗೃತಿಗಾಗಿ ನಾಸಿಕ್‌ನಿಂದ ಬೆಳಗಾವಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ ಎಂದರು.

ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ| ಪ್ರಸಾದ ರಾಂಪೂರೆ, ನಮ್ಮ ದೇಶದಲ್ಲಿ ದೇಹದಾನದ ಕುರಿತು ಭ್ರಮೆ ಇದೆ. ವರ್ಷಕ್ಕೆ 5 ಲಕ್ಷ ಜನರು ಅಂಗಾಂಗ ವೈಫಲ್ಯದಿಂದ ನಿಧನ ಹೊಂದುತ್ತಿದ್ದಾರೆ. ಭಾರತದಲ್ಲಿ ದೇಹದಾನದ ಅರಿವು ಕಡಿಮೆಯಿದ್ದು, 1000ಕ್ಕೂ ಕಡಿಮೆ ಜನ ದೇಹದಾನ ಮಾಡುತ್ತಾರೆ. ನಮ್ಮಲ್ಲಿ ಈ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಮುಂಬಯಿ ಅಂಗಾಂಗ ಮತ್ತು ದೇಹದಾನ ಒಕ್ಕೂಟದ ಕಾರ್ಯ ಶ್ಲಾಘನೀಯ ಎಂದರು. ಎನ್‌ಎಸ್‌ಎಸ್‌ ಅ ಧಿಕಾರಿ ಪ್ರೊ. ವಿಶಾಲ ದಾನವಾಡೆ ಕಾರ್ಯಕ್ರಮ ಸಂಯೋಜಿಸಿದ್ದರು.

ಕೆ.ಎಲ್‌.ಇ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಸವರಾಜ ಸೊಂಟನವರ, ವಿಭಾಗ ಮುಖ್ಯಸ್ಥರಾದ ಪ್ರೊ. ವಿ. ಎಂ. ಬೂದ್ಯಾಳ, ಪ್ರೊ. ಸತೀಶ ಭೋಜನ್ನವರ, ಪ್ರೊ. ಸಚಿನ ಮೆಕ್ಕಳಕಿ, 200ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸಿಬ್ಬಂದಿ ಉಪಸ್ಥಿತರಿದ್ದರು. ಸುಧೀರ ಭಾಗೈತಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೌರಭ ಜುಟ್ಟಿ ಸ್ವಾಗತಿಸಿದರು. ರುದ್ರನೀಲ ವಂದಿಸಿದರು. ವಿಶಾಲ ಮೆತ್ರಿ ನಿರೂಪಿಸಿದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.