ಬೆಳಗಾವಿ: ನಿಗದಿತ ಸ್ಥಳದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ


Team Udayavani, Apr 3, 2020, 1:55 PM IST

ನಿಗದಿತ ಸ್ಥಳದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಜನಸಂದಣಿ ಕಡಿಮೆಗೊಳಿಸುವ ದೃಷ್ಟಿಯಿಂದ ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಪ್ರತ್ಯೇಕ ಹೋಲ್ ಸೇಲ್ ತರಕಾರಿ ಮಾರಾಟಕ್ಕೆ ಸ್ಥಳ ನಿಗದಿಪಡಿಸಲಾಗಿದ್ದು, ಸೋಮವಾರದಿಂದ ನಿಗದಿತ ನಾಲ್ಕು ಸ್ಥಳಗಳಲ್ಲಿ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.

ಎಪಿಎಂಸಿ ಕಚೇರಿಯಲ್ಲಿ ಶುಕ್ರವಾರ  ನಡೆದ ವರ್ತಕರ ಸಭೆಯಲ್ಲಿ ಮಾತನಾಡಿದ ಅವರು ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ ಹಾಗೂ ಬಿ.ಎಸ್.ಯಡಿಯೂರಪ್ಪ ಮಾರ್ಗದ ಗಾಳಿಪಟ ಉತ್ಸವ (ಮಾಲಿನಿ ಸಿಟಿ) ಮೈದಾನ ಹೀಗೆ ನಾಲ್ಕು ದಿಕ್ಕುಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ನಿಗದಿತ ಈ ಸ್ಥಳಗಳಲ್ಲಿ ತಕ್ಷಣವೇ ವ್ಯಾಪಾರಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಎಪಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾನುವಾರದವರೆಗೆ ಈಗಿರುವ ವ್ಯವಸ್ಥೆಯಲ್ಲಿಯೇ ವಹಿವಾಟು ನಡೆಸಬೇಕು. ನಂತರ ನಗರದ ಹೊರ ವಲಯದಲ್ಲಿ ಗುರುತಿಸಲಾಗುವ ನಿಗದಿತ ಮೂರ್ನಾಲ್ಕು ಸ್ಥಳಗಳಲ್ಲಿಯೇ ವಹಿವಾಟು ನಡೆಸಬೇಕು ಎಂದು ತಿಳಿಸಿದರು.

ಉಳ್ಳಾಗಡ್ಡಿ, ಆಲುಗಡ್ಡೆ ಮತ್ತು ಗೆಣಸು ಮಾತ್ರ ಮುಖ್ಯ ಪ್ರಾಂಗಣದಲ್ಲಿ ವಹಿವಾಟು ನಡೆಸಬೇಕು. ಉಳಿದ ತರಕಾರಿ ಮಾರಾಟವನ್ನು ನಾಲ್ಕು ಕಡೆ ಗುರುತಿಸಲಾಗುವ ಸ್ಥಳಗಳಲ್ಲಿಯೇ ವ್ಯಾಪಾರ ನಡೆಸಬೇಕು ಎಂದು ಸೂಚಿಸಿದರು. ಮತರಕಾರಿ ಸೇರಿಂದತೆ ಅಗತ್ಯ ಸಾಮಗ್ರಿಗಳ ಪೂರೈಕೆಯಲ್ಲಿ ವಿನಾಕಾರಣ ವ್ಯತ್ಯಯ ಉಂಟು ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಕೂಡ ಹಿಂದೇಟು ಹಾಕುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದರು.

ಇಡೀ ದೇಶವೇ ಸಂದಿಗ್ಧ ಸ್ಥಿತಿಯಲ್ಲಿ ಇರುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಲು ವ್ಯಾಪಾರಸ್ಥರು ಮತ್ತು ರೈತರು ಸೇರಿದಂತೆ ಎಲ್ಲರೂ ಕೈಜೋಡಿಸಬೇಕು. ರೈತರು, ವ್ಯಾಪಾರಸ್ಥರು, ಹಮಾಲರ ಕುಟುಂಬಗಳು ಸೇರಿದಂತೆ ಎಲ್ಲ ಸಾರ್ವಜನಿಕರ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿ ಆಗಿದೆ. ಆದ್ದರಿಂದ ಸ್ವಲ್ಪ ಅನಾನುಕೂಲ ಆದರೂ ಸರಿ. ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ರೈತರು ಮತ್ತು ವ್ಯಾಪಾರಸ್ಥರಿಗೆ ಅನುಕೂಲ ಆಗುವಂತೆ ಎಲ್ಲ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ. ವ್ಯಾಪಾರಿಗಳು, ಹಮಾಲರು ಸೇರಿದಂತೆ ಎಲ್ಲರಿಗೂ ಅಗತ್ಯವಿರುವಷ್ಟು ಪಾಸ್ ಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಬೇಕಿರುವುದರಿಂದ ಯಾರೂ ಕೂಡ ವ್ಯಾಪಾರ-ವಹಿವಾಟು ಬಂದ್ ಮಾಡದೇ ಸಾರ್ವಜನಿಕರ ದೃಷ್ಟಿಯಿಂದ ಇಂತಹ ತುರ್ತು ಸಂದರ್ಭದಲ್ಲಿ ಪರಸ್ಪರ ಸಹಕರಿಸಬೇಕು. ನಿಗದಿಪಡಿಸಿದ ಸ್ಥಳಗಳಲ್ಲಿ ವ್ಯಾಪಾರ-ವಹಿವಾಟು ಕೈಗೊಂಡರೂ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು ಎಂದರು.

ಪ್ರತಿದಿನ ಸಾವಿರಾರು ಕ್ವಿಂಟಲ್ ಮೆಣಸಿನಕಾಯಿ ಬರಲಿದೆ. ಕಿತ್ತೂರು, ಬೈಲಹೊಂಗಲ, ಖಾನಾಪುರ ಮತ್ತಿತರ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ವರ್ತಕರು ಮನವಿ ಮಾಡಿಕೊಂಡರು.

ಎ.ಪಿ.ಎಂ.ಸಿ. ಪ್ರಾಂಗಣದಲ್ಲಿ ಹೋಲ್ ಸೇಲ್ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಬೇಕು. ಸಾರ್ವಜನಿಕರು ಕೂಡ ತರಕಾರಿ ಖರೀದಿಸಲು ಇಲ್ಲಿಗೆ ಬರುತ್ತಿರುವುದರಿಂದ ಜನಸಂದಣಿ ಹೆಚ್ಚಾಗುತ್ತದೆ. ಆದ್ದರಿಂದ ಹೋಲಸೇಲ್ ವ್ಯಾಪಾರಸ್ಥರನ್ನು ಹೊರತುಪಡಿಸಿ ಉಳಿದವರನ್ನು ನಿರ್ಬಂಧಿಸಬೇಕು ಎಂದು ವರ್ತಕರು ಸಲಹೆ ನೀಡಿದರು.

ಪ್ರತಿದಿನ ಎಲ್ಲ ಬಗೆಯ ವಹಿವಾಟು ಮಾಡುವ ಬದಲು ಒಂದು ದಿನ ತರಕಾರಿ, ಒಂದು ದಿನ ಕಾಳುಕಡಿ ಹೀಗೆ ದಿನವಾರು ವಹಿವಾಟು ನಿಗದಿಪಡಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯ ಎಂದು ಕೆಲವರು ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ‌.ವಿ. ಮಾತನಾಡಿ, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ನಿಗದಿಪಡಿಸುವ ಸ್ಥಳಗಳಲ್ಲಿ ವಹಿವಾಟು ನಡೆಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.