ಜಿಲ್ಲೆಯಲ್ಲಿ ಲಾಕ್‌ಡೌನ್‌ ವಿಸ್ತರಣೆ ಅಗತ್ಯ

ಚಿಕ್ಕೋಡಿ ಕೋವಿಡ್‌ ಲ್ಯಾಬ್‌ ತಕ್ಷಣ ಆರಂಭಿಸಲು ಉಸ್ತುವಾರಿ ಸಚಿವ ಕಾರಜೋಳ ಸೂಚನೆ

Team Udayavani, Jun 10, 2021, 6:02 PM IST

9bgv-11

ಬೆಳಗಾವಿ: ಮಹಾರಾಷ್ಟ್ರ ಹಾಗೂ ಗೋವಾಕ್ಕೆ ಹೊಂದಿಕೊಂಡಿರುವ ಬೆಳಗಾವಿ ಗಡಿ ಜಿಲ್ಲೆ ಆಗಿರುವುದರಿಂದ ಲಾಕಡೌನ್‌ ವಿಸ್ತರಿಸುವ ಅಗತ್ಯವಿದೆ ಎನಿಸಿದೆ. ಗುರುವಾರ ಜೂ. 10ರಂದು ನಡೆಯಲಿರುವ ಸಭೆಯಲ್ಲಿ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಕೋವಿಡ್‌ ಹಾಗೂ ನೆರೆಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಹಿರಿಯ ಅ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಚಿಕ್ಕೋಡಿಯಲ್ಲಿ ಕೋವಿಡ್‌ ಪರೀಕ್ಷೆಯ ಆರ್‌.ಟಿ-ಪಿಸಿಆರ್‌ ಪ್ರಯೋಗಾಲಯ ಸ್ಥಾಪನೆಗೆ ಅನುಮತಿ ಲಭಿಸಿರುವುದರಿಂದ ಸಿವಿಲ್‌ ಕಾಮಗಾರಿಗೆ ಕಾಲಹರಣ ಮಾಡದೇ ಲಭ್ಯವಿರುವ ಕಟ್ಟಡಗಳನ್ನು ಬಳಸಿಕೊಂಡು ಕೂಡಲೇ ಪ್ರಯೋಗಾಲಯ ಆರಂಭಿಸಬೇಕು. ಚಿಕ್ಕೋಡಿಯಲ್ಲಿ ಅನೇಕ ಸರ್ಕಾರಿ ಕಟ್ಟಡಗಳು ಲಭ್ಯವಿರುವುದರಿಂದ ಅದರಲ್ಲಿಯೇ ಪ್ರಯೋಗಾಲಯ ಆರಂಭಿಸಬೇಕು. ಸಣ್ಣಪುಟ್ಟ ದುರಸ್ತಿ ಅಗತ್ಯವಿದ್ದರೆ ತಕ್ಷಣ ಕೈಗೊಂಡು ಕಟ್ಟಡವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಬೇಕು. ಬಿಮ್ಸ್‌ ಪ್ರಯೋಗಾಲಯದ ಮಾದರಿಯಲ್ಲಿ ಚಿಕ್ಕೋಡಿಯಲ್ಲಿ ಪ್ರಯೋಗಾಲಯವನ್ನು ಎರಡು ದಿನಗಳಲ್ಲಿ ಸಿದ್ಧಪಡಿಸಿಕೊಡುವಂತೆ ಲೋಕೋಪಯೋಗಿ ಇಲಾಖೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ಲ್ಯಾಕ್ ಫಂಗಸ್‌ ಚಿಕಿತ್ಸೆಗೆ ಅಗತ್ಯವಿರುವ ಖಾಸಗಿ ವೈದ್ಯರನ್ನು ಅಥವಾ ನಿವೃತ್ತ ವೈದ್ಯರನ್ನು ಪಾವತಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬೇಕು. ವೈದ್ಯಕೀಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಹಣದ ಕೊರತೆಯಿಲ್ಲ. ವಿವಿಧ ಮೂಲಗಳಿಂದ ಅನುದಾನ ಲಭ್ಯವಿದೆ. ತುರ್ತು ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಇದನ್ನು ಬಳಸಿಕೊಳ್ಳಬೇಕು ಎಂದು ಬಿಮ್ಸ್‌ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

ಪ್ಯಾಕೇಜ್‌ ನೆರವು ತಲುಪಿಸಲು ಸೂಚನೆ: ಲಾಕಡೌನ್‌ ವೇಳೆ ಆರ್ಥಿಕ ಸಂಕಷ್ಟದಲ್ಲಿರುವ ವಿವಿಧ ವರ್ಗಗಳ ಜನರಿಗೆ ಎರಡು ಪ್ಯಾಕೇಜ್‌ಗಳಲ್ಲಿ 1750 ಕೋಟಿ ರೂ. ಪರಿಹಾರವನ್ನು ಸರ್ಕಾರ ಪ್ರಕಟಿಸಿದೆ. ಎಲ್ಲ ವರ್ಗಗಳ ಜನರಿಗೆ ಕೂಡಲೇ ಪರಿಹಾರಧನ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಬಿಮ್ಸ್‌ ಪ್ರಭಾರ ನಿರ್ದೇಶಕ ಡಾ| ಕುಲಕರ್ಣಿ ತಿಳಿಸಿದರು.

ಆಕ್ಸಿಜನ್‌ ಕೊರತೆ ಇಲ್ಲ: ಜಿಲ್ಲೆಯ ಮರಣ ಪ್ರಮಾಣ ಶೇ. 1.60ರಷ್ಟಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟಾರೆ 976 ಜನರು ಕೋವಿಡ್‌ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಿತ್ಯ 16 ಕೆ.ಎಲ್‌. ಆಕ್ಸಿಜನ್‌ ಬಳಕೆಯಾಗುತ್ತಿದ್ದು, ಸಾಕಷ್ಟು ಆಕ್ಸಿಜನ್‌ ದಾಸ್ತಾನು ಲಭ್ಯವಿದೆ. ರೆಮ್‌ಡೆಸಿವಿಯರ್‌ ಸೇರಿದಂತೆ ಯಾವುದೇ ಔಷಧಿ ಕೊರತೆ ಇಲ್ಲ ಎಂದು ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ ಮಾಹಿತಿ ನೀಡಿದರು.

ಪಾಸಿಟಿವಿಟಿ ದರ ಕ್ರಮೇಣ ಕಡಿಮೆಯಾಗಿದ್ದು, ಪಾಸಿಟಿವಿಟಿ ದರ ಹೆಚ್ಚಾಗಿರುವ ಕಡೆಗಳಲ್ಲಿ ಆ್ಯಂಟಿಜೆನ್‌ ಟೆಸ್ಟ್‌ (ರ್ಯಾಟ್‌) ಪ್ರಮಾಣ ಹೆಚ್ಚಿಸಲಾಗಿದೆ. ಜನಸಂಖ್ಯೆ ಆಧರಿಸಿ ಲಸಿಕೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪೂರೈಸುವಂತೆ ಕೋರಲಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ 30 ಸಾವಿರ ಲಸಿಕೆ ನೀಡುವಷ್ಟು ವ್ಯವಸ್ಥೆ ಇದೆ. ಲಸಿಕೆ ಪೂರೈಕೆ ಆದಂತೆ ಲಸಿಕಾ ಪ್ರಮಾಣ ಹೆಚ್ಚಿಸಲಾಗುವುದು. ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 204 ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ವರದಿಯಾಗಿವೆ. ಬಿಮ್ಸ್‌ನಲ್ಲಿ 136 ರೋಗಿಗಳು ದಾಖಲಾಗಿದ್ದರು ಎಂದು ಮಾಹಿತಿ ನೀಡಿದರು.

ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಗೆ ವೈದ್ಯರ ನಿಯೋಜನೆಗೆ ಕ್ರಮ: ಬ್ಲ್ಯಾಕ್‌ ಫಂಗಸ್‌ ಸರ್ಜರಿಗೆ 2-3 ತಾಸು ಬೇಕಾಗುತ್ತದೆ. ಹುಬ್ಬಳ್ಳಿ ಕಿಮ್ಸ್‌ ಹಾಗೂ ಗದಗ ವೈದ್ಯಕೀಯ ಕಾಲೇಜಿನಿಂದ ತಲಾ ಒಬ್ಬ ತಜ್ಞರನ್ನು ಬಿಮ್ಸ್‌ಗೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು ಹಾಗೂ ಬಿಮ್ಸ್‌ ಆಡಳಿತ ಮೇಲುಸ್ತುವಾರಿ ಅಧಿ ಕಾರಿ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಹೇಳಿದರು.

ಬಿಮ್ಸ್‌ನಲ್ಲಿ ಸದ್ಯಕ್ಕೆ ಸ್ವತ್ಛತೆ ಹಾಗೂ ಸೋಂಕಿತರಿಗೆ ಉತ್ತಮ ಪ್ರೋಟಿನ್‌ಯುಕ್ತ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು. ನೀರಾವರಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್‌ ಅರವಿಂದ ಕಣಗಲಿ, ಕೋಯ್ನಾ ಸೇರಿದಂತೆ ವಿವಿಧ ಜಲಾಶಯ ಮಟ್ಟಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋರ್ಸ್‌ ಮೂಲಕ ಮನೆ ಮನೆ ಸಮೀಕ್ಷೆ ಮಾಡಲಾಗುತ್ತಿದೆ. ಐಸೋಲೇಷನ್‌ ಇದ್ದವರಿಗೆ ಕಿಟ್‌ ಗಳನ್ನು ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಪ್ರಮಾಣ ಕಡಿಮೆಯಾಗಿದೆ ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ. ಎಸ್‌.ವಿ. ಮುನ್ಯಾಳ ತಿಳಿಸಿದರು.

52 ಸಾವಿರ ಕ್ವಿಂಟಲ್‌ ಬೀಜ ದಾಸ್ತಾನು: ಕಳೆದ ವರ್ಷ ಸಹಾಯಧನದಡಿ ಒಟ್ಟಾರೆ 48 ಸಾವಿರ ಕ್ವಿಂ. ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಇದರಲ್ಲಿ 38 ಸಾವಿರ ಕ್ವಿಂ. ಸೋಯಾಬಿನ್‌ ಬೀಜ ವಿತರಿಸಲಾಗಿದೆ. ಈ ಬಾರಿ ಒಟ್ಟಾರೆ 52 ಸಾವಿರ ಕ್ವಿಂಟಲ್‌ ದಾಸ್ತಾನು ಇದೆ. ಇದುವರೆಗೆ 35 ಸಾವಿರ ಕ್ವಿಂಟಲ್‌ ಮಾರಾಟ ಮಾಡಲಾಗಿದೆ. ಸಾಕಷ್ಟು ಬಿತ್ತನೆ ಬೀಜ ದಾಸ್ತಾನು ಇದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಹಕಾಟಿ, ಸರಕಾರದ ಪ್ಯಾಕೇಜ್‌ ಪ್ರಕಾರ ಈಗಾಗಲೇ ಐದು ಕೋಟಿ ರೂಪಾಯಿ ಪರಿಹಾರಧನ ಫಲಾನುಭವಿಗಳಿಗೆ ತಲುಪಿದೆ ಎಂದರು. ಪಶುಪಾಲನೆ ಇಲಾಖೆಯ ಉಪನಿರ್ದೇಶಕ ಅಶೋಕ ಕೊಳ್ಳಾ, 12.81 ಜಾನುವಾರುಗಳ ಪೈಕಿ 11.72 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಎರಡನೇ ಹಂತದಲ್ಲಿ ಆಗಸ್ಟ್‌ ಮಾಹೆಯಿಂದ ಲಸಿಕೆ ನೀಡಲಾಗುವುದು. 56 ಸಾವಿರ ಡೋಸ್‌ ಲಸಿಕೆ ದಾಸ್ತಾನು ಇದ್ದು, ಲಸಿಕೆ ಕೊರತೆಯಿಲ್ಲ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ್‌, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ. ಬಾಲಕೃಷ್ಣ ತುಕ್ಕಾರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.