ಹತ್ತಾರು ನಿರೀಕ್ಷೆಗಳಿಗೆ ಮತ್ತೆ ಬಂತು ಹೊಸ ಜೀವ

•ಸುರೇಶ ಅಂಗಡಿಗೆ ರೈಲ್ವೆ ರಾಜ್ಯ ಖಾತೆ ಸಚಿವ ಸ್ಥಾನ •ಉತ್ತರ ಕರ್ನಾಟಕ ಭಾಗಕ್ಕೆ ಸಿಗುವುದೇ ಕಾಯಕಲ್ಪ?

Team Udayavani, Jun 1, 2019, 12:44 PM IST

bg-tdy-1..

ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವ ಸ್ಥಾನ ಪಡೆದುಕೊಂಡ ಬೆಳಗಾವಿ ಲೋಕಸಭಾ ಸಂಸದ ಸುರೇಶ ಅಂಗಡಿಗೆ ಮಹತ್ವದ ಖಾತೆಯೇ ಸಿಕ್ಕಿದೆ. ಈ ಭಾಗದಲ್ಲಿ ರೈಲ್ವೆ ಯೋಜನೆಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರಾಮುಖ್ಯತೆ ಸಿಕ್ಕಿಲ್ಲ ಎಂಬ ಕೂಗಿನ ಮಧ್ಯೆಯೇ ಸುರೇಶ ಅಂಗಡಿಗೆ ರೈಲ್ವೆ ರಾಜ್ಯ ಖಾತೆ ಸಚಿವ ಸ್ಥಾನ ಸಿಕ್ಕಿರುವುದು ಹಲವಾರು ನಿರೀಕ್ಷೆಗಳನ್ನು ಮತ್ತೆ ಹುಟ್ಟುಹಾಕಿದೆ.

ರೈಲ್ವೆ ಖಾತೆಯ ಸಂಪುಟ ದರ್ಜೆ ಸಚಿವ ಪಿಯುಷ್‌ ಗೋಯಲ್ ಹಾಗೂ ರಾಜ್ಯ ಖಾತೆ ಸಚಿವರು ನೆರೆ ಹೊರೆಯ ರಾಜ್ಯದವರು. ಪಿಯುಷ್‌ ಗೋಯಲ್ ಮಹಾರಾಷ್ಟ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಗಡಿನಾಡು ರೈಲ್ವೆ ಭೂಪಟದಲ್ಲಿ ಹೊಸ ಬದಲಾವಣೆ ಕಾಣಲಿದೆ ಎಂಬ ವಿಶ್ವಾಸ ಮೂಡಿದೆ.

1991ರಲ್ಲಿ ಜಾಫರ್‌ ಶರೀಫ್‌ ರೈಲ್ವೆ ಸಚಿವರಾಗಿದ್ದಾಗ ಕರ್ನಾಟಕದಲ್ಲಿ ಹಲವಾರು ಯೋಜನೆಗಳು ಜಾರಿಯಾಗಿದ್ದವು. ನಂತರ ಮಲ್ಲಿಕಾರ್ಜುನ ಖರ್ಗೆ ಸಹ ಒಂದಿಷ್ಟು ಯೋಜನೆಗಳನ್ನು ತಂದರು. ಈಗ ಅಂತಹ ಮಹತ್ವದ ಜವಾಬ್ದಾರಿ ಸುರೇಶ ಅಂಗಡಿ ಅವರ ಮೇಲಿದೆ.

ಈ ಹಿಂದೆ ಮೂರು ಅವಧಿಯಲ್ಲಿ ಸಂಸದರಾಗಿದ್ದಾಗಲೂ ರೈಲ್ವೆ ಯೋಜನೆಗಳ ಬಗ್ಗೆ ಮೇಲಿಂದ ಮೇಲೆ ಪ್ರಸ್ತಾಪ ಮಾಡಿ ಸರಕಾರದ ಮೇಲೆ ಒತ್ತಡ ಹಾಕುತ್ತಲೇ ಬಂದಿದ್ದ ಸುರೇಶ ಅಂಗಡಿ ಹೊಸ ಯೋಜನೆಗಳನ್ನು ಈ ಭಾಗಕ್ಕೆ ತರದೇ ಇದ್ದರೂ ಕೇಂದ್ರ ರೈಲ್ವೆ ಸಚಿವರ ಗಮನಸೆಳೆಯುವಲ್ಲಿ ಸಫಲರಾಗಿದ್ದರು. ಈಗ ಸ್ವತಃ ಅವರೇ ರೈಲ್ವೆ ಖಾತೆಯ ಸಚಿವರಾಗಿರುವುದರಿಂದ ಈ ಭಾಗದಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಕಾಯಕಲ್ಪ ಸಿಗಲಿದೆ ಎಂಬ ಆಸೆ ಕಾಣುತ್ತಿದೆ.

ಕಳೆದ ಹಲವಾರು ವರ್ಷಗಳ ಅವಧಿಯಲ್ಲಿ ಹಲವು ಹೊಸ ರೈಲು ಮಾರ್ಗಗಳ ಸಮೀಕ್ಷೆ ನಡೆದಿದೆ. ಅನೇಕ ರೈಲು ಮಾರ್ಗಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಅನುಮೋದನೆ ಸಹ ದೊರಕಿದೆ. ಆದರೆ ಈ ಮಾರ್ಗಗಳು ರಾಜ್ಯ ಸರ್ಕಾರದ ಯಾವುದೇ ಪ್ರಾದೇಶಿಕ ಅಭಿವೃದ್ಧಿ ಯೋಜನೆಗೆ ಅನುಗುಣವಾಗಿ ರೂಪುಗೊಂಡಿಲ್ಲ ಈ ಕೊರತೆ ನೀಗಿಸುವ ಜವಾಬ್ದಾರಿಯನ್ನು ನೂತನ ರೈಲ್ವೆ ಸಚಿವರು ವಹಿಸಿಕೊಳ್ಳಬೇಕು ಎಂಬುದು ರೈಲ್ವೆ ಹೋರಾಟಗಾರರ ಅಭಿಪ್ರಾಯ .

•ಕೇಶವ ಆದಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.