![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ತಂತ್ರಜ್ಞಾನದಲ್ಲಿ ತಾಂತ್ರಿಕ ಪದವೀಧರರಿಗೆ ವಿಪುಲ ಅವಕಾಶ
Team Udayavani, May 13, 2019, 2:09 PM IST
![bel-1](https://www.udayavani.com/wp-content/uploads/2019/05/bel-1-5-620x198.jpg)
ಬೆಳಗಾವಿ: ಸತ್ಯ, ಸೇವೆ, ಪಾರದರ್ಶಕತೆ ಹಾಗೂ ದೂರದರ್ಶಿತ್ವ ದ್ಯೇಯಗಳೊಂದಿಗೆ ಮನ್ನಡೆದಲ್ಲಿ ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನದ ಜಗತ್ತಿನಲ್ಲಿ ತಾಂತ್ರಿಕ ಪದವೀಧರರಿಗೆ ಉದ್ಯೋಗ ಪಡೆಯಲು ಹೆಚ್ಚಿನ ಅವಕಾಶಗಳಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ| ಕರಿಸಿದ್ದಪ್ಪ ಹೇಳಿದರು.
ನಗರದ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದಲ್ಲಿ 7ನೇ ವಾರ್ಷಿಕೋತ್ಸವ ಹಾಗೂ ವ್ಯಾಸಂಗ ಪದವಿ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪದವಿ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಗಳು ತಾಂತ್ರಿಕ ಕೌಶಲ, ಸಾಮರ್ಥ್ಯ ಹೆಚ್ಚಿಸಿಕೊಂಡು ದೌರ್ಬಲ್ಯ, ಕೀಳರಿಮೆ ತೊರೆದು ಸ್ವ-ಸಾಮರ್ಥ್ಯದಿಂದ ಮುಂದೆ ಬರಬೇಕು ಎಂದರು.
ಇಂದಿನ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ತಾಂತ್ರಿಕ ಕೌಶಲ ಹಾಗೂ ಗುಣಮಟ್ಟದ ತಂತ್ರಜ್ಞಾನ ಅಭಿವೃದ್ಧಿಗೊಳಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಭಾರತ ದೇಶವು ಜಗತ್ತನ್ನು ಬದಲಾಯಿಸುವಂತ ಅಗಾಧವಾದ ಸಾಮರ್ಥ್ಯ ಹಾಗೂ ಕುಶಾಗ್ರತೆಯುಳ್ಳ ಎಂಜಿನಿಯರಿಂಗ್ ಹಾಗೂ ವ್ಯವಸ್ಥಾಪನಾ ವಿದ್ಯಾರ್ಥಿಗಳನ್ನು ಹೊಂದಿದೆ. ತಾಂತ್ರಿಕ ಪದವೀಧರರು ತಮ್ಮ ಪರಿಶ್ರಮ, ಛಲ, ಆಂತರಿಕ ಸ್ಫೂರ್ತಿಯಿಂದ ತಾಂತ್ರಿಕ ಕ್ಷೇತ್ರದಲ್ಲಿ ಸಿಗುವ ಅಗಾಧ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್ ಸುರೇಶ ಅಂಗಡಿ ಮಾತನಾಡಿ, ಭಾರತವು ಇಂದಿನ ದಿನದಲ್ಲಿ ಬುಲೆಟ್ ಟ್ರೇನ್ ಓಡಿಸುವ, ಸ್ವಚ್ಛತಾ ಅಭಿಯಾನ, ಕೃಷಿಕ್ಷೇತ್ರ, ವೈಮಾನಿಕ ಹಾಗೂ ಅಂತರಿಕ್ಷದ ಕ್ಷೇತ್ರಗಳಲ್ಲಿ ಕ್ಷಿಪ್ರ ಪ್ರಗತಿಯನ್ನು ಸಾಧಿಸುತ್ತಿದ್ದು, ತಾಂತ್ರಿಕ ವಿದ್ಯಾರ್ಥಿಗಳು ವಿದ್ಯೆಯ ಜೊತೆ ವಿನಯತೆ, ತಾವು ಕಲಿಸಿದ ಗುರುಗಳ ಬಗ್ಗೆ ವಿಧೇಯತೆ ಹಾಗೂ ತಾಂತ್ರಿಕ ಕೌಶಲ ಕಲೆಗಳನ್ನು ಗಳಿಸಿಕೊಂಡು ಪದವಿ ಗಳಿಸಿ ದೇಶವನ್ನು ಮುನ್ನಡೆಸಬೇಕು ಎಂದರು.
ಡಾ| ರಾಜೇಂದ್ರ ಇನಾಮದಾರ, ಡಾ| ಅಶೋಕ ಹುಲಗಬಾಳಿ, ಪ್ರೊ| ಅನಿಲಕುಮಾರ ಕೋರಿಶೆಟ್ಟಿ, ಪ್ರೊ| ಅಮರ ಬ್ಯಾಕೋಡಿ, ಪ್ರೊ| ಸಾಗರ ಬಿರ್ಜೆ, ಪ್ರೊ| ಕಿರಣ ಪೋತದಾರ, ಪ್ರೊ| ವಸಂತಕುಮಾರ ಉಪಾಧ್ಯೆ ಉಪಸ್ಥಿತರಿದ್ದರು. ಡಾ| ಸಂಜಯ ಪೂಜಾರಿ ಸ್ವಾಗತಿಸಿದರು. ಪ್ರೊ| ವಿಜಯ ಕುಂಬಾರ ಪರಿಚಯಿಸಿದರು. ಪ್ರೊ| ಪ್ರಿಯಾಂಕಾ ಪೂಜಾರಿ ಹಾಗೂ ಪ್ರೊ| ವರ್ಷಾ ದೇಶಪಾಂಡೆ ನಿರೂಪಿಸಿದರು. ಪ್ರೊ| ಸಚಿನ ಕುಲಕರ್ಣಿ ವಂದಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.