ನಾಡು-ನುಡಿ ಮೇಲೆ ಪ್ರೀತಿ-ಅಭಿಮಾನ ಇರಲಿ
ಎಲ್ಲ ಚಟುವಟಿಕೆಗಳಿಗೆ ನನ್ನಿಂದ ನಿರಂತರ ಸಹಾಯ, ಸಹಕಾರ ಇದ್ದೇ ಇರುತ್ತದೆ
Team Udayavani, Nov 10, 2021, 5:53 PM IST
ಮೂಡಲಗಿ: ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನ ಇರಬೇಕು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ತಾಯಿ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಯುವ ಪೀಳಿಗೆಯು ತಾವು ಬೆಳೆಯುವುದರೊಂದಿಗೆ ಕನ್ನಡ ನಾಡು, ನುಡಿಯ ಬೆಳವಣಿಗೆಗೆ ಅರ್ಪಿಸಿಕೊಳ್ಳಬೇಕು. ಕನ್ನಡದಲ್ಲಿ ಮಾತನಾಡುವುದು ಮತ್ತು ವ್ಯವಹರಿಸುವ ಮೂಲಕ ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿತ್ತೂರ ಕರ್ನಾಟಕ ಎಂದು ಘೋಷಣೆ ಮಾಡಿರುವುದು ಉತ್ತರ ಕರ್ನಾಟಕದ ಜನರಿಗೆ ಹೆಮ್ಮೆ ತಂದಿದೆ. ಕನ್ನಡ ನಾಡು, ನುಡಿಯ ಬೆಳವಣಿಗೆಯ ಎಲ್ಲ ಚಟುವಟಿಕೆಗಳಿಗೆ ನನ್ನಿಂದ ನಿರಂತರ ಸಹಾಯ, ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಸಿದರು.
ಇತ್ತೀಚೆಗೆ ಅಗಲಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಅವರು, ಪುನೀತ್ ಅಗಲಿಕೆಯಿಂದ ಇಡೀ ಭಾರತೀಯ ಚಲನಚಿತ್ರೋದ್ಯಮಕ್ಕೆ ಅಪಾರ ಹಾನಿಯಾಗಿದೆ. ರೈತರ ಹೆಮ್ಮೆಯ ಸಹಕಾರ ಸಂಸ್ಥೆಯಾದ ಕೆಎಂಎಫ್ನ ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ಸಂಸ್ಥೆಯ ಪ್ರಗತಿಗೆ ಕಾರಣೀಕರ್ತರಾಗಿದ್ದರು. ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪುನೀತ್ ರಾಜಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಸ್ವಾಗತಾರ್ಹ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮೂಡಲಗಿ ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಪ್ರೊ. ಸಂಗಮೇಶ ಗುಜಗೊಂಡ, ಕಸಾಪ ಮಾಜಿ ಅಧ್ಯಕ್ಷ ಬಾಲಶೇಖರ ಬಂದಿ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಪುರಸಭೆ ಮಾಜಿ ಅಧ್ಯಕ್ಷ ರಾಮಣ್ಣಾ ಹಂದಿಗುಂದ, ಪುರಸಭೆ ಮಾಜಿ ಉಪಾಧ್ಯಕ್ಷರಾದ ಆರ್.ಪಿ. ಸೋನವಾಲ್ಕರ, ಅಜೀಜ ಡಾಂಗೆ, ಹುಸೇನಸಾಬ ಶೇಖ, ಮುಖಂಡರಾದ ಬಿ.ಬಿ. ಹಂದಿಗುಂದ, ಮರೆಪ್ಪ ಮರೆಪ್ಪಗೋಳ, ರಮೇಶ ಸಣ್ಣಕ್ಕಿ, ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪುರಸಭೆ ಸದಸ್ಯರು, ಬಿಜಿಪಿ ಎಸಿ ಮೋರ್ಚಾ ಜಿಲ್ಲಾ ಪ್ರಧಾನಕಾರ್ಯದರ್ಶ ಈರಪ್ಪ ಢವಳೇಶ್ವರ, ಮುಖ್ಯಾ ಧಿಕಾರಿ ದೀಪಕ ಹರ್ದಿ, ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್ಎಸ್ಆರ್ ಕಾಲೇಜ್ನಿಂದ ಆರಂಭಗೊಂಡ ಕನ್ನಡ ನಾಡು-ನುಡಿಯನ್ನು ಬಿಂಬಿಸುವ ರೂಪಕಗಳನ್ನೊಳಗೊಂಡ ಮೆರವಣಿಗೆಯು ಪ್ರಮುಖ ಬೀದಿಗಳ ಮೂಲಕ ಸಂಚರಿಸಿತು. ನಂತರ ಕಲ್ಮೇಶ್ವರ ವೃತ್ತದಲ್ಲಿ ಕಲ್ಮೇಶ್ವರ ಪುತ್ಥಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೂ ಹಾರ ಸಮರ್ಪಿಸುವ ಮೂಲಕ ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ