ಚರ್ಮಗಂಟು ರೋಗಕ್ಕೆ 22 ಜಾನುವಾರು ಬಲಿ

267 ಜಾನುವಾರಗಳಿಗೆ ರೋಗ-77 ಚೇತರಿಕೆ; ಲಸಿಕೆ ಪಡೆಯಲು ವೈದ್ಯರ ಸೂಚನೆ

Team Udayavani, Nov 7, 2022, 3:25 PM IST

11

ಚಿಕ್ಕೋಡಿ: ಜಾನುವಾರುಗಳಲ್ಲಿ ತೀವ್ರವಾಗಿ ಹರಡಿರುವ ಚರ್ಮ ಗಂಟು ರೋಗ ಬಾಧೆ ರೈತರನ್ನು ಚಿಂತೆಗೆ ದೂಡಿದೆ. ರೈತರ ಬದುಕಿನ ಆಧಾರಸ್ಥಂಭವಾಗಿರುವ ಜಾನುವಾರಗಳಿಗೆ ವ್ಯಾಪಕವಾಗಿ ಹರಡಿಕೊಂಡಿರುವ ಸಾಂಕ್ರಾಮಿಕ ರೋಗದ ಹತೋಟಿಗೆ ಪಶುಸಂಗೋಪನಾ ಇಲಾಖೆ ಹಗಲಿರುಳು ಶ್ರಮಿಸುತ್ತಿದ್ದು, ರೋಗ ಲಕ್ಷಣ ಕಂಡು ಬಂದರೆ ತಕ್ಷಣ ಲಸಿಕೆ ಪಡೆಯಲು ಪಶು ಇಲಾಖೆ ಡಂಗೂರ ಸಾರುತ್ತಿದೆ.

ಕಳೆದ ಮೂರು ತಿಂಗಳ ಹಿಂದೆಯಷ್ಟೇ ನೆರೆಯ ಗಡಿ ಭಾಗದ ಮಹಾರಾಷ್ಟ್ರದಲ್ಲಿ ಕಂಡು ಬಂದ ಈ ಸಾಂಕ್ರಾಮಿಕ ರೋಗ ಸದ್ಯ ಇಡೀ ಚಿಕ್ಕೋಡಿ ತಾಲೂಕು ಆವರಿಸಿಕೊಂಡಿದೆ. ಚಿಕ್ಕೋಡಿ ತಾಲೂಕಿನ 29 ಗ್ರಾಮಗಳಲ್ಲಿ ಈ ರೋಗ ಹಬ್ಬಿಕೊಂಡಿದ್ದು, ಎಮ್ಮೆ ಹೊರತುಪಡಿಸಿ ಎತ್ತು, ಆಕಳು ಮತ್ತು ಹೋರಿಗಳಲ್ಲಿ ಈ ರೋಗ ವ್ಯಾಪಕವಾಗಿ ಕಾಣುತ್ತಿದೆ.

ಚಿಕ್ಕೋಡಿ ತಾಲೂಕಿನ 29 ಗ್ರಾಮಗಳಲ್ಲಿ ಹರಡಿಕೊಂಡಿರುವ ಚರ್ಮ ಗಂಟು ರೋಗ ಈವರೆಗೆ 267 ಜಾನುವಾರಗಳಿಗೆ ಅಂಟಿಕೊಂಡಿದೆ. ಅದರಲ್ಲಿ 22 ಜಾನುವಾರಗಳು ಮೃತಪಟ್ಟಿವೆ. 77 ಜಾನುವಾರುಗಳು ಚೇತರಿಸಿಕೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಪಶುಸಂಗೋಪನಾ ಇಲಾಖೆಯು ತಾಲೂಕಿನ 6955 ಜಾನುವಾರುಗಳಿಗೆ ಲಸಿಕೆ ನೀಡಿದೆ. ಇನ್ನೂ 3545 ಲಸಿಕೆ ಇದ್ದು, ರೈತರು ಪಶುಸಂಗೋಪನಾ ಇಲಾಖೆ ವೈದ್ಯರನ್ನು ಸಂಪರ್ಕಿಸಿ ದನಕರುಗಳಿಗೆ ಲಸಿಕೆ ನೀಡಿ ರೋಗ ಬರದಂತೆ ತಡೆಯಬೇಕು ಎನ್ನುತ್ತಾರೆ ವೈದ್ಯರು.

ಇದೊಂದು ಸಾಂಕ್ರಾಮಿಕ ರೋಗವಾಗಿದ್ದರಿಂದ ಒಂದು ಜಾನುವಾರಿನಿಂದ ಮತ್ತೂಂದು ಜಾನುವಾ ರುಗೆ ಅತಿ ವೇಗವಾಗಿ ಹರಡುತ್ತದೆ. ಜಾನುವಾರು ಚರ್ಮದ ಮೇಲೆ ಗಂಟಿನ ತರಹ ಗುಳ್ಳೆಗಳು ಕಾಣಿಸಿ ಕೊಳ್ಳುತ್ತವೆ. ತಕ್ಷಣಾ ಚಿಕಿತ್ಸೆ ನೀಡಿದರೆ ದನಕರುಗಳು ಗುಣಮುಖವಾಗುತ್ತವೆ. ನಿರ್ಲಕ್ಷé ಮಾಡಿದರೆ ದನಗಳು ಸಾಯುವ ಸಾಧ್ಯತೆ ಹೆಚ್ಚು. ವೈದ್ಯರು ಹೇಳುವಂತೆ ಸೋಂಕಿತ ಪ್ರಾಣಿಗಳನ್ನು ಆರೋಗ್ಯಕರ ಪ್ರಾಣಿಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಬೇಕು. ಆರೋಗ್ಯಕರ ಪ್ರಾಣಿಗಳಿಗೆ ಉಳಿದ ನೀರು ಅಥವಾ ಸೋಂಕಿತ ಪ್ರಾಣಿಗಳ ಮೇವನ್ನು ತಿನ್ನಲು ಹಾಕಬಾರದು.

ರೋಗ ಬಾಧೆಯಿಂದ ಜಾನುವಾರು ಸತ್ತರೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.ಎತ್ತಿಗೆ 30 ಸಾವಿರ, ಹೋರಿಗೆ 30 ಸಾವಿರ ರೂ , ಆಕಳು ಸತ್ತರೆ 25 ಸಾವಿರ ರೂ ಮತ್ತು ಕರು ಸತ್ತರೆ 5 ಸಾವಿರ ರೂ ನೀಡಲಾಗುತ್ತದೆ.

ಚರ್ಮ ಗಂಟು ರೋಗ ಬಾಧೆ ಹತೋಟಿಗೆ ಬರುತ್ತಿದೆ. ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತಿದೆ. ಯಾರು ಲಸಿಕೆ ಹಾಕಿಸಿಲ್ಲವೋ ಅವರು ಕೂಡಲೇ ಪಶು ವೈದ್ಯರನ್ನು ಸಂಪರ್ಕಿಸಿ ಲಸಿಕೆ ಕೊಡಿಸಬೇಕು. ಈಗಾಗಲೇ ಮೃತಪಟ್ಟ 22 ಜಾನುವಾರಗಳಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪರಿಹಾರ ರೈತರ ಬ್ಯಾಂಕ ಖಾತೆಗೆ ಜಮೆ ಆಗುತ್ತದೆ. -ಡಾ| ಸದಾಶಿವ ಉಪ್ಪಾರ, ಸಹಾಯಕ ನಿರ್ದೇಶಕರು, ಪಶುಸಂಗೋಪನಾ ಇಲಾಖೆ-ಚಿಕ್ಕೋಡಿ

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.