ಮಹದಾಯಿ ನೀರು ಬಳಕೆ: ಗೋವಾದಿಂದ ಜಲಾಶಯ ನಿರ್ಮಾಣ


Team Udayavani, Mar 7, 2019, 10:02 AM IST

7-mach-15.jpg

ಬೆಳಗಾವಿ: ಮುಂಬೈ ಕರ್ನಾಟಕದ ನಾಲ್ಕು ಜಿಲ್ಲೆಗಳ 13 ತಾಲೂಕುಗಳ ಜನರ ಕುಡಿಯುವ ನೀರಿಗಾಗಿ ರೂಪಿಸಲಾದ ಕಳಸಾ ಬಂಡೂರಿ ಯೋಜನೆಯನ್ನು ವಿರೋಧಿಸುತ್ತ ಬಂದಿರುವ ಗೋವಾ ಈಗ ಸ್ವತಃ ತಾನೇ ಉಸ್ಗಾಂವ್‌ ಗಂಜೆಮ್‌ ಬಳಿ 100 ಕೋಟಿ ರೂ.ವೆಚ್ಚದಲ್ಲಿ ಆಣೆಕಟ್ಟು ನಿರ್ಮಾಣ ಮಾಡಿ ಓಪಾ ನೀರು ಸಂಸ್ಕರಣ ಘಟಕಕ್ಕೆ ನೀರನ್ನು ತಿರುಗಿಸಲು ಮುಂದಾಗಿದೆ.

ಈ ಹೊಸ ಯೋಜನೆಗೆ ಮಂಗಳವಾರ ಗೋವಾದ ಜಲಸಂಪನ್ಮೂಲ ಖಾತೆಯ ಸಚಿವ ವಿನೋದ ಪಾಲೇಕರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಮಹದಾಯಿ ನದಿಯಿಂದ ನಿತ್ಯ 110 ಎಮ್‌ಎಲ್‌ಡಿ ಕಚ್ಚಾ ನೀರನ್ನು ಎತ್ತಿ ನೀರು ಶುದ್ಧೀಕರಣ ಕೇಂದ್ರಕ್ಕೆ ತಿರುಗಿಸುವ ಯೋಜನೆ ಇದಾಗಿದೆ.

2006ರಲ್ಲಿ ಈ ಯೋಜನೆ ರೂಪಿಸಿದಾಗ 35 ಎಂಎಲ್‌ಡಿ ನೀರನ್ನು ಮಹದಾಯಿಯಿಂದ ಎತ್ತುವ ಉದ್ದೇಶವಿತ್ತು. ಆದರೆ ನವಂಬರ್‌ದಲ್ಲಿ ಗೋವಾದ ವಿವಿಧ ಪ್ರದೇಶಗಳಿಗೆ ಕುಡಿಯುವ ನೀರಿನ ಅಭಾವ ತಲೆದೋರುತ್ತಿರುವ ಹಿನ್ನೆಲೆಯಲ್ಲಿ ವ್ಯರ್ಥವಾಗಿ ಸಮುದ್ರ ಸೇರುವ ನೀರನ್ನು ಬಳಸಲು ಹೊಸ ತಿರುವು ಯೋಜನೆಯನ್ನು ರೂಪಿಸಲಾಗಿದೆ.

ಕಳೆದ ಆ. 14ರಂದು ಮಹದಾಯಿ ನ್ಯಾಯ ಮಂಡಳಿಯು ಗೋವಾಕ್ಕೆ 24 ಟಿಎಮ್‌ಸಿ ನೀರನ್ನು ಹಂಚಿಕೆ ಮಾಡಿದೆ. ಇದಕ್ಕೂ ಮೊದಲೇ ಅದು 9 ಟಿಎಂಸಿ ನೀರನ್ನು ಬಳಸಿಕೊಳ್ಳುತ್ತಿತ್ತು. ಈಗ ಗೋವಾದ ಹೊಸ ಯೋಜನೆಯು ಅದಕ್ಕೆ ಹಂಚಿಕೆಯಾದ ನೀರಿನ ಪರಿಮಿತಿಯೊಳಗೇ ಇದೆಯೊ ಅಥವಾ ಅದನ್ನು ಮೀರಿದೆಯೊ ಎಂಬುದನ್ನು ಕರ್ನಾಟಕ ಸರಕಾರ ಪರಿಶೀಲಿಸಬೇಕು ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಮುಖಂಡ ಅಶೋಕ ಚಂದರಗಿ ಆಗ್ರಹಿಸಿದ್ದಾರೆ.

ನ್ಯಾಯಾಧಿಕರಣದಿಂದ ಕರ್ನಾಟಕಕ್ಕೆ ಹಂಚಿಕೆಯಾದ ಕಳಸಾ ಯೋಜನೆಯ 2.72 ಟಿಎಂಸಿ ನೀರನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರ ಇನ್ನೂ ಮುಂದಾಗಿಲ್ಲ. ಅದಕ್ಕೆ ಅವಶ್ಯಕವಾದ ಹಣವನ್ನೂ ಸಹ ಬಜೆಟ್‌ ನಲ್ಲಿ ಮೀಸಲಿಟ್ಟಿಲ್ಲ. ಈ ಬಗ್ಗೆ ನಮ್ಮ ಭಾಗದ ಜನಪ್ರತಿನಿಧಿಗಳೂ ತುಟಿ ಬಿಚ್ಚಿಲ್ಲ. ಆದರೆ ಗೋವಾ ಸರಕಾರ ಮಾತ್ರ ಮಹಾದಾಯಿ ನೀರನ್ನು ಬಳಸಲು ಮುಂದಾಗಿದೆ ಎಂದು ಅವರು ರಾಜ್ಯ ಸರ್ಕಾರದ ಧೋರಣೆಯನ್ನು ಟೀಕಿಸಿದ್ದಾರೆ.

ಗೋವಾದ ಈ ಹೊಸ ಆಣೆಕಟ್ಟಿನ ಬಗ್ಗೆ ರಾಜ್ಯ ಸರಕಾರ ಮತ್ತು ನ್ಯಾಯವಾದಿಗಳು ಪರಿಶೀಲಿಸಬೇಕು. ಮಹಾದಾಯಿ ನ್ಯಾಯಮಂಡಳಿಯ ತೀರ್ಪಿನ ವಿರುದ್ಧ ಕರ್ನಾಟಕವು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ಆದಷ್ಟು ಬೇಗ ಇಲ್ಲಿನ ಯೋಜನೆಗೆ ಚಾಲನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.