ಮಹಾಲಕ್ಷ್ಮೀ-ಕರಗಾಂವ ಏತ ನೀರಾವರಿ ಶೀಘ್ರ ಆರಂಭ: ಡಿಕೆಶಿ
Team Udayavani, Jun 23, 2019, 9:45 AM IST
ಚಿಕ್ಕೋಡಿ: ಮಹಾಲಕ್ಷ್ಮೀ ಮತ್ತು ಕರಗಾಂವ ಏತ ನೀರಾವರಿ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕೆಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸಚಿವ ಡಿ.ಕೆ.ಶಿವಕುಮಾರಗೆ ಮನವಿ ಮಾಡಿದರು.
ಚಿಕ್ಕೋಡಿ: ತಾಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ಮಹಾಲಕ್ಷ್ಮೀ ಮತ್ತು ಕರಗಾಂವ ಏತ ನೀರಾವರಿ ಯೋಜನೆಗೆ ಶೀಘ್ರ ಅನುದಾನ ಒದಗಿಸಿ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಭರವಸೆ ನೀಡಿದರು.
ನಗರಕ್ಕೆ ಶನಿವಾರ ಆಗಮಿಸಿದ ವೇಳೆಯಲ್ಲಿ ಪ್ರವಾಸಿ ಮಂದಿರದಲ್ಲಿ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹಾಗೂ ಹಿರಿಯ ಧುರೀಣ ಬಿ.ಆರ್.ಸಂಗಪ್ಪಗೋಳ ಅವರ ಮನವಿಗೆ ಸ್ಪಂದಿಸಿ ಅವರು ಮಾತನಾಡಿದರು.
ಸಂಗಪ್ಪಗೋಳ ಮಾತನಾಡಿ, ಚಿಕ್ಕೋಡಿ ತಾಲೂಕಿನ ಪಶ್ಚಿಮ ಭಾಗದ 16 ಹಳ್ಳಿಗಳಿಗೆ ನೀರಾವರಿ ಯೋಜನೆ ಕಲ್ಪಿಸುವ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗಾಗಲೇ ಈ ಯೋಜನೆಗೆ ಸರ್ವೇ ಕಾರ್ಯ ಮುಕ್ತಾಯವಾಗಿ ನೀರಿನ ಹಂಚಿಕೆಯಾಗಿದೆ. 375 ಕೋಟಿ ಅನುದಾನ ಬಿಡುಗಡೆ ಮಾತ್ರ ಬಾಕಿ ಉಳಿದುಕೊಂಡಿದೆ. ಕೂಡಲೇ ಸಚಿವರು ಈ ಯೋಜನೆಗೆ ಹೆಚ್ಚಿನ ಗಮನ ಹರಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಮುಖ್ಯಸಚೇತಕ ಗಣೇಶ ಹುಕ್ಕೇರಿ, ರಾಯಬಾಗ ಶಾಸಕ ದುರ್ಯೋಧನ ಐಹೋಳೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಕಲ್ಲಪ್ಪ ಮಗೇನ್ನವರ, ಎಚ್.ಎಸ್.ನಸಲಾಪೂರೆ, ರವೀಂದ್ರ ಮಿರ್ಜೆ, ಅನೀಲ ಪಾಟೀಲ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ