ಪೊಲೀಸರ ಕಣ್ಣುತಪ್ಪಿಸಿ ಬೆಳಗಾವಿಗೆ ಬಂದ ಮಹಾರಾಷ್ಟ್ರ ಶಾಸಕ ವಶಕ್ಕೆ
Team Udayavani, Jan 17, 2020, 3:19 PM IST
ಬೆಳಗಾವಿ: ಪೊಲೀಸರ ಕಣ್ಣುತಪ್ಪಿಸಿ ಬೆಳಗಾವಿಯಲ್ಲಿಆಯೋಜಿಸಲಾಗಿದ್ದ ‘ಹುತಾತ್ಮರ ದಿನ’ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜೇಂದ್ರ ಪಾಟೀಲ ಅವರನ್ನು ಹುತಾತ್ಮಾ ವೃತ್ತದಲ್ಲಿಯೇ ವಶಕ್ಕೆ ಪಡೆದ ಪೊಲೀಸರು, ಮಹಾರಾಷ್ಟ್ರದ ಗಡಿಯಲ್ಲಿ ಬಿಟ್ಟು ಬಂದಿದ್ದಾರೆ.
ಮಹಾರಾಷ್ಟ್ರದ ಸಚಿವ ಕಾರ್ಯಕ್ರಮದಲ್ಲಿ ಭಾಗವಹಿಸಿಲಿದ್ದಾರೆ ಎನ್ನುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಬೆಳಗಾವಿ ಪೊಲೀಸರು ಬೆಳಿಗ್ಗೆಯಿಂದ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು.
ನಗರದ ಹೊರವಲಯದ ಸುತಗಟ್ಟಿ ಬಳಿ ಎಸಿಪಿ ನಾರಾಯಣ ಭರಮಣಿ ಮತ್ತು ಇನ್ಸ್ ಪೆಕ್ಟರ್ ಗಡ್ಡೇಕರ ವಾಹನಗಳ ತಪಾಸಣೆ ನಡೆಸುತ್ತಿದ್ದರೆ, ಹೆಚ್ಚುವರಿ ಎಸ್ಪಿ ಅಮರನಾಥ ರೆಡ್ಡಿ ಅವರು ಕೊಗನೊಳ್ಳಿ ಚೆಕ್ ಪೋಸ್ಸ್ ನಲ್ಲಿ ತಪಾಸಣೆ ನಡೆಸುತ್ತಿದ್ದರು.
ಈ ಮಧ್ಯೆ ಸರ್ಕಾರಿ ಕಾರನ್ನು ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸುವ ಮೂಲಕ ಸಚಿವ ರಾಜೇಂದ್ರ ಪಾಟೀಲ, ಪೊಲೀಸರ ಕಣ್ಣು ತಪ್ಪಿಸಿ ಬೆಳಗಾವಿ ನಗರದಲ್ಲಿ ಪ್ರವೇಶಿಸಿದ್ದರು.
ಎಂಇ ಎಸ್ ಆಯೋಜಿಸಿದ್ದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುತ್ತಿದ್ದ ಮಹಾರಾಷ್ಟ್ರ ಸಚಿವರನ್ನು ಪೊಲೀಸರು ತಡೆದು ತಮ್ಮ ವಶಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಎಂಇಎಸ್ ಮುಖಂಡರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು