ಹಳ್ಳಿ  ಸೇರಿದ ಜನರ ಕೈ ಹಿಡಿದ ನರೇಗಾ

ನಿರುದ್ಯೋಗಿಗಳಿಗೆ ಉದ್ಯೋಗ ಖಾತ್ರಿ ವರದಾನ! ­480 ಹೊಸ ಜಾಬ್‌ ಕಾರ್ಡ್‌ ಸೃಷ್ಟಿ

Team Udayavani, May 12, 2021, 12:01 PM IST

hfghfhrtyt

ವರದಿ: ಮಹಾದೇವ ಪೂಜೇರಿ
ಚಿಕ್ಕೋಡಿ: ಕೊರೊನಾದಂತಹ ಮಾರಕ ರೋಗ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ನಗರ-ಪಟ್ಟಣದ ಜನರು ಹಳ್ಳಿಯತ್ತ ವಾಲುತ್ತಿದ್ದಾರೆ. ಹೀಗಾಗಿ ಕೈಯಲ್ಲಿ ಕೆಲಸವಿಲ್ಲದೇ ಹಳ್ಳಿಗಳಿಗೆ ಬರುವ ನಿರುದ್ಯೋಗಿ ಜನರಿಗೆ ನರೇಗಾ ಯೋಜನೆ ವರದಾನವಾಗಿ ಪರಿಣಮಿಸಿದೆ.

ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಮೂಲಕ ಚಿಕ್ಕೋಡಿ ತಾಲೂಕಿನ 36 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೇವಲ ಒಂದು ತಿಂಗಳ ಒಳಗಾಗಿ 91 ಸಾವಿರ ಮಾನವ ದಿನಗಳು ಸೃಜಿಸಲಾಗಿದ್ದು, ಸುಮಾರು 6669 ಜನರು ನರೇಗಾ ಕೆಲಸದಲ್ಲಿ ತೊಡಗಿಕೊಂಡು ಕುಟುಂಬ ನಿರ್ವಹಣೆಗೆ ಮುಂದಾಗಿದ್ದಾರೆ. ಈ ತಿಂಗಳ ಅವ ಧಿಯಲ್ಲಿ ಸುಮಾರು 480 ಹೊಸ ಜಾಬ್‌ ಕಾರ್ಡ್‌ ಸೃಷ್ಟಿಯಾಗಿವೆ. ಕೊರೊನಾ ಸೋಂಕು ಅವ್ಯಾಹತವಾಗಿ ಹಬ್ಬುತ್ತಿರುವ ಪರಿಣಾಮ ನಗರ-ಪಟ್ಟಣಗಳಲ್ಲಿ ವಾಸಿಸುವ ಜನರು ಈಗ ಹಳ್ಳಿಗಳಲ್ಲಿ ಠಿಕಾಣಿ ಹೂಡಿದ್ದಾರೆ. ಕೆಲಸವಿಲ್ಲದೇ ಖಾಲಿ ಕೈಯಲ್ಲಿದ್ದ ಜನರಿಗೆ ನರೇಗಾ ಯೋಜನೆ ಆಸರೆಯಾಗಿದೆ.

ಯುವಕರು ಕೆಲಸವಿಲ್ಲದೇ ಖಾಲಿ ಇರಬಾರದೆಂಬ ಉದ್ದೇಶದಿಂದ ಸರ್ಕಾರ ನರೇಗಾ ಯೋಜನೆ ಮೂಲಕ ಅವರಿಗೆ ಕೆಲಸ ನೀಡಲು ಪ್ರೇರಣೆ ನೀಡುತ್ತಿದೆ. ಮೊದಲಿನಿಂದಲೂ ಚಿಕ್ಕೋಡಿ ತಾಲೂಕು ನರೇಗಾ ಯೋಜನೆ ಬಳಕೆ ಮಾಡಿಕೊಳ್ಳುವಲ್ಲಿ ಹಿಂದೆ ಬಿದ್ದಿಲ್ಲ, ಅದರಂತೆ ಈ ವರ್ಷವು ಕೂಡ ತಾಲೂಕಿನಲ್ಲಿ ನರೇಗಾ ಕೆಲಸಗಳು ಭರದಿಂದ ಸಾಗಿವೆ. ಕಳೆದ ಒಂದು ವರ್ಷದಿಂದ ಇಲ್ಲಿಯವರೆಗೆ ಸುಮಾರು 23 ಸಾವಿರ ಕುಟುಂಬಗಳು ನರೇಗಾ ಯೋಜನೆ ನಂಬಿಕೊಂಡು ಕೆಲಸ ಗಿಟ್ಟಿಸಿಕೊಂಡಿದ್ದಾರೆ.

ಚಿಕ್ಕೋಡಿ ತಾಲೂಕಿನ ಕೇರೂರ, ಉಮರಾಣಿ, ಜೋಡಕುರಳಿ, ಬಂಬಲವಾಡ, ವಡ್ರಾಳ, ನವಲಿಹಾಳ, ನಾಗರಮುನ್ನೋಳ್ಳಿ, ಹತ್ತರವಾಟ, ಮುಗಳಿ, ಚಿಂಚಣಿ, ಶಿರಗಾಂವ ಮತ್ತು ಜಾಗನೂರ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ ರೈತ ಕ್ರಿಯಾ ಯೋಜನೆ ಹಾಗೂ ದುಡಿಯೋಣ ಬಾರ ಎಂಬ ವಿನೂತನ ಕಾರ್ಯಕ್ರಮದಡಿ ಜನರು ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲಮಟ್ಟ ಹೆಚ್ಚಿಸುವ ಕೆರೆ ಹೂಳು ತೆಗೆಯುವುದು, ಬದು ನಿರ್ಮಾಣ, ಕೆನಾಲ್‌ ಹೂಳೆತ್ತುವುದು, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ಗಿಡ ನೆಡಲು ಗುಂಡಿ ತೋಡುವಿಕೆ, ಹಳ್ಳ ಸ್ವತ್ಛತೆ, ತೋಟಪಟ್ಟಿ ರಸ್ತೆ ನಿರ್ಮಾಣ, ಕೃಷಿ ಹೊಂಡ ಸೇರಿದಂತೆ ಮುಂತಾದ ಕೆಲಸಗಳನ್ನು ನರೇಗಾದ ಮೂಲಕ ಕೈಗೆತ್ತಿಕೊಳ್ಳಲಾಗುತ್ತಿದ್ದು, ಜನರು ಮೈಮುರಿದು ಕೆಲಸ ಮಾಡುತ್ತಿದ್ದಾರೆ.

7.95 ಲಕ್ಷ ಮಾನವ ದಿನಗಳ ಟಾರ್ಗೇಟ್‌: ತಾಲೂಕಿನ 36 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಂದು ವರ್ಷಕ್ಕೆ 7.95 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡುವಂತೆ ಸರ್ಕಾರ ಟಾಗೇìಟ್‌ ನೀಡಿದೆ. ಕೇವಲ ಒಂದು ತಿಂಗಳ ಒಳಗಾಗಿ 91 ಸಾವಿರ ಮಾನವ ದಿನಗಳನ್ನು ಸೃಜನೆ ಮಾಡಿದ್ದು, ತಾಲೂಕಿನಲ್ಲಿ ಒಟ್ಟು 51 ಸಾವಿರ ಜಾಬ್‌ ಕಾರ್ಡ ಇದ್ದು, ಇದರಲ್ಲಿ 23 ಸಾವಿರ ಜನರು ಸಕ್ರೀಯರಾಗಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿಯವರಿಗೆ ಸುಮಾರು 3.18 ಕೋಟಿ ರೂ. ಅನುದಾನ ಪಾವತಿಯಾಗಿದೆ.

ಕೊರೊನಾ ನಿಯಮ ಪಾಲನೆ: ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಉದ್ಯೋಗ ಖಾತ್ರಿ ಕೆಲಸ ಹೊರತು ಪಡಿಸಿ ಉಳಿದೆಲ್ಲ ಕೆಲಸ ಕಾರ್ಯಗಳು ನಿಂತುಹೋಗಿದೆ. ಹೀಗಾಗಿ ನರೇಗಾದಡಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ಸಾಮಾಜಿಕ ಅಂತರ, ಮೇಲಿಂದ ಮೇಲೆ ಸ್ಯಾನಿಟೈಸ್‌ ಮಾಡುವ ಮೂಲಕ ಕೊರೊನಾ ನಿಯಮ ಪಾಲನೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.