ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಪಕ್ಕಾ : ಕುಮಟಳ್ಳಿ
Team Udayavani, Jun 24, 2021, 4:48 PM IST
ಅಥಣಿ: ರಮೇಶ್ ಜಾರಕಿಹೊಳಿ ಅವರು ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು ಆರೋಪ ಮುಕ್ತರಾದ ಮೆಲೆ ಸಚಿವ ಸ್ಥಾನ ಪಕ್ಕಾ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು.
ಅವರು ತಾಲೂಕಿನ ಭರಮಖೋಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಒಬ್ಬ ನಾಯಕರು. ಭಾರತೀಯ ಜನತಾಪಕ್ಷದಲ್ಲಿ ಅವರಿಗೆ ಅಪಾರ ಗೌರವವಿದೆ. ಕೆಟ್ಟಗಳಿಗೆಯಲ್ಲಿ ಪ್ರಕರಣದ ತನಿಖೆ ನಡೆದಿದೆ. ಈ ಪ್ರಕರಣದಿಂದಾಗಿ ರಮೇಶ ಜಾರಕಿಹೊಳಿಯವರ ಮನಸ್ಸಿಗೆ ನೋವಾಗಿದೆ. ಜಾರಕಿಹೊಳಿ ಅವರು ಆರೋಪ ಮುಕ್ತರಾಗಿ ಹೊರಬರುತ್ತಾರೆ. ನಾವೆಲ್ಲರೂ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಬಂದಿದ್ದೆವೆ. ಮತ್ತೆ ರಮೇಶ್ ಅವರಿಗೆ ಮಂತ್ರಿ ಸ್ಥಾನ ದೊರೆತು ಅವರು ಪಕ್ಷದ ಸೇವೆ ಮಾಡಲಿದ್ದಾರೆ.
ರಮೇಶ್ ಜಾರಕಿಹೊಳಿ ಒಬ್ಬ ಉತ್ತಮ ಸಂಘಟನಾಕಾರರು. ಪಕ್ಷಕ್ಕೆ ಅವರ ಸೇವೆ ಬೇಕು. ಪಕ್ಷವನ್ನು 2023ರಲ್ಲಿ ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉದ್ದೇಶದಿಂದ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ಪಕ್ಷದ ಹೈಕಮಾಂಡ್ ನಿರ್ಣಯಕ್ಕೆ ನಾವೆಲ್ಲ ಬದ್ಧ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು. ಈ ವೇಳೆ ಮಲ್ಲಿಕಾರ್ಜುನ ಅಂದಾನಿ, ರಾಜು ಕುಮಟಳ್ಳಿ, ಸಂಕೋನಟ್ಟಿ ಗ್ರಾಪಂ ಸದಸ್ಯ ಪರಶುರಾಮ ಸೋನಕರ, ಎಂ.ಎನ್ ಜಮಖಂಡಿ , ಹಣಮಂತ ಅರ್ಧಾವೂರ, ಪಿಎಸ್ಐ ಕುಮಾರ ಹಾಡಕರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ