ಶಾಲೆಗಳ ಮಾನ್ಯತೆ ನವೀಕರಣ ಶಾಶ್ವತಗೊಳಿಸಿ: ಜಗದೀಶ ಕುಸುಗಲ್ಲ
Team Udayavani, Jan 2, 2022, 8:03 PM IST
ಸವದತ್ತಿ: ಖಾಸಗಿ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ವಿಧಿಸಿದ ಷರತ್ತುಗಳು ಅವೈಜ್ಞಾನಿಕವಾಗಿದ್ದು, ಸರಕಾರ ಕೂಡಲೇ ಈ ಆದೇಶಗಳನ್ನು ಹಿಂಪಡೆಯಬೇಕು. ಪ್ರತಿವರ್ಷ ಈ ಪ್ರಕ್ರಿಯೆ ನಡೆಸುವದಕ್ಕಿಂತ ಮಾನ್ಯತಾ ನವೀಕರಣ ಶಾಶ್ವತಗೊಳಿಸಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಅನುದಾನರಹಿತ ಶಾಲೆಗಳ ಕ್ಷೇಮಾಭಿವೃದ್ಧಿ ಸಂಘದ ಸಲಹೆಗಾರ ಜಗದೀಶ ಕುಸುಗಲ್ಲ ಹೇಳಿದರು.
ಸ್ಥಳೀಯ ಶಿಂತ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರವಿವಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಅನುದಾನರಹಿತ ಶಾಲೆಗಳ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪ್ರತಿವರ್ಷ ನವೀಕರಣದ ವೇಳೆ ಕಟ್ಟಡ ಸುರಕ್ಷತೆ, ಫೈರ್ ಸೇಪ್ಟಿ ಕುರಿತು ನಿರಪೇಕ್ಷಣೆ ಪ್ರಮಾಣ ಪತ್ರ ನೀಡಲು ತೊಂದರೆಯುಂಟಾಗುತ್ತಿದೆ. ಈಗಿರುವ ನಿಯಮಗಳನ್ನು ಬದಲಾಯಿಸಿ ಎಲ್ಲರಿಗೂ ಅನುಕೂಲವಾಗುವಂತೆ ಸರಕಾರ ಕ್ರಮಕೈಗೊಳ್ಳಬೇಕು. ಪದೇ ಪದೇ ಪ್ರಸ್ತಾವಣೆ ಸಲ್ಲಿಸುವುದು, ಅನಗತ್ಯ ಖರ್ಚುಗಳಿಗೆ ದಾರಿ ಮಾಡಿಕೊಡುತ್ತದೆ. ಜೊತೆಗೆ ಸುಸಜ್ಜಿತ ಕಟ್ಟಡದಲ್ಲಿ ಅಗತ್ಯವಿರುವ ಎಲ್ಲ ಸೌಕರ್ಯಗಳುಳ್ಳ ಶಿಕ್ಷಣ ಸಂಸ್ಥೆಗಳಿಗೆ ಶಾಶ್ವತ ಮಾನ್ಯತೆ ನೀಡುವಂತೆ ಒತ್ತಾಯಿಸಿದರು.
ಅಧ್ಯಕ್ಷ ಜಗದೀಶ ತೋಟಗಿ ಮಾತನಾಡಿ, ಸರಕಾರ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣದ ಕುರಿತು ಸಿಬಿಎಸ್ಸಿ ಮತ್ತು ಐಸಿಎಸ್ಸಿ ಶಾಲೆಗಳಿಗೆ ಒಂದು ನಿಯಮ, ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮತ್ತೊಂದು ನಿಯಮ. ಸರಕಾರಿ ಶಾಲೆ, ಕೇಂದ್ರ ಪಠ್ಯಕ್ರಮದ ಶಾಲೆಗಳಿರದ ನಿಯಮಗಳು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಏಕೆ?. ಈ ರೀತಿ ಮಲತಾಯಿ ಧೋರಣೆ ಖಂಡನೀಯ.
ಈ ಕುರಿತು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸರಕಾರದ ಗಮನಕ್ಕಿರಸಲಾಗುವುದು ಎಂದರು.
ಈ ವೇಳೆ ರಮೇಶ ದೇವರಡ್ಡಿ, ನಾರಾಯಣ ಕಲಾಲ, ಬಸವರಾಜ ಪುಟ್ಟಿ, ಬಿ.ಎನ್.ಜೋಗಿಹಳ್ಳಿ, ಬಸವರಾಜ ತಳವಾರ, ರಮೇಶ ಪತ್ರೋಟ, ಡಿ.ಎಸ್. ಕೊಪ್ಪದ, ಅಶೋಕ ಹೊಂಗಲ ಸೋಮೇಶ ಕಂಕನವಾಡಿ ಆನಂದ ಹಿರೆಹೊಳಿ ಸುರೇಶ ವಾರೆಪ್ಪನವರ ಹಾಗೂ ಪದಾಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ