ಬೆಳಗಾವಿ: ಜ್ಯುವೆಲ್ಲರಿಯಲ್ಲಿ ಪಿಸ್ತೂಲು ತೋರಿಸಿ ಚಿನ್ನ ದೋಚಿದ್ದ ವ್ಯಕ್ತಿ ಬಂಧನ
Team Udayavani, Jun 29, 2020, 5:41 PM IST
ಬೆಳಗಾವಿ: ಚಿನ್ನ ಖರೀದಿ ನೆಪದಲ್ಲಿ ಬಂದು ಪಿಸ್ತೂಲು ತೋರಿಸಿ ಹೆದರಿಸಿ ಮೂರು ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿಕೊಂಡು ಹೋಗಿದ್ದ ವ್ಯಕ್ತಿಯನ್ನು ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿ ಮೂರು ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಪಿಸ್ತೂಲು ವಶಕ್ಕೆ ಪಡೆದುಕೊಂಡಿದ್ದಾರೆ.
ಮಜಗಾಂವಿಯ ಸಂತ ಜ್ಞಾನೇಶ್ವರ ನಗರದ ವೈಭವ ರಾಜೇಂದ್ರ ಪಾಟೀಲ (29) ಎಂಬಾತನನ್ನು ಬಂಧಿಸಲಾಗಿದೆ. ಮೂರು ಲಕ್ಷ ರೂ. ಮೌಲ್ಯದ ಬಂಗಾರದ ನಾಲ್ಕು ನಕ್ಲೇಸ್, ಕೃತ್ಯಕ್ಕೆ ಬಳಸಿದ್ದ ಕಂಟ್ರಿ ಪಿಸ್ತೂಲು, ಮೂರು ಜೀವಂತ ಗುಂಡು, ದ್ವಿಚಕ್ರ ವಾಹನ ವಶಪಡಿಸಿಕೊಂಡು ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಜೂನ್ 27ರಂದು ಸಂಜೆ 6.30ಕ್ಕೆ ಬಂದ ವೈಭವ ಪಾಟಿಲ ಎಂಬ ವ್ಯಕ್ತಿ ಹಿಂಡಲಗಾ ರಸ್ತೆಯ ವಿಜಯ ನಗರದಲ್ಲಿರುವ ಸಮೃದ್ಧಿ ಜ್ಯುವೆರ್ಸ್ಗೆ ಚಿನ್ನ ಖರೀದಿಗೆ ಬಂದಿದ್ದಾನೆ. ಮಾಲೀಕ ಸಚಿನ್ ನಾರಾಯಣ ಬಾಂದಿವಾಡೆಕರ ಅವರಿಗೆ ಬಂಗಾರದ ನೆಕ್ಲೆಸ್ಗಳನ್ನು ತೋರಿಸುವಂತೆ ಹೇಳಿ ಅದನ್ನು ಪಡೆದು ಕೊಂಡವನೇ ತನ್ನ ಜೇಬಿನಲ್ಲಿ ಇಟ್ಟುಕೊಂಡಿದ್ದಾನೆ. ನಂತರ ಪಿಸ್ತೂಲು ತೋರಿಸಿ ಬೈಕ್ ಹತ್ತಿ ಓಡಿ ಹೋಗಿದ್ದನು. ಈ ಬಗ್ಗೆ ಸಚಿನ್ ಅವರು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಖಡೇಬಜಾರ್ ಎಸಿಪಿ ಎ. ಚಂದ್ರಪ್ಪ ಮಾರ್ಗದರ್ಶನದಲ್ಲಿ ಕ್ಯಾಂಪ್ ಇನ್ಸಪೆಕ್ಟರ್ ಡಿ. ಸಂತೋಷಕುಮಾರ ಹಾಗೂ ಎಎಸ್ಐಗಳಾದ ಬಿ.ಆರ್. ಡೂಗ್, ಎಸ್.ಎಂ. ಬಾಂಗಿ, ಎಂ.ವೈ. ಹುಕ್ಕೇರಿ, ಸಿಬ್ಬಂದಿಗಳಾದ ಬಿ.ಬಿ. ಗೌಡರ, ಎಂ.ಎ. ಪಾಟೀಲ, ಬಿ.ಎಂ. ನರಗುಂದ, ಬಿ.ಎಸ್. ರುದ್ರಾಪುರ, ಎ.ಬಿ. ಘಟ್ಟದ, ಯು.ಎಂ. ಥೈಕಾರ, ಎಸ್.ಎಚ್. ತಳವಾರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್