ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಲು ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಠರಾವು
ಸಮ್ಮೇಳನದಲ್ಲಿ ಮತ್ತೊಂದು ಗಡಿ ಕ್ಯಾತೆ
Team Udayavani, Dec 11, 2022, 7:45 PM IST
ಬೆಳಗಾವಿ: ಜಿಲ್ಲೆಯಲ್ಲಿ ಒಂದಿಲ್ಲೊಂದು ಗಡಿ ವಿವಾದ ಭುಗಿಲೇಳುತ್ತಿರುವ ಬೆನ್ನಲ್ಲೇ ಈಗ ಗಡಿ ಜಿಲ್ಲೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು. ಇಲ್ಲದಿದ್ದರೆ ಜಿಲ್ಲೆಯಲ್ಲಿರುವ ಮರಾಠಿ ಭಾಷಿಕರಿಗೆ ಮರಾಠಿ ಭಾಷೆಯಲ್ಲಿಯೇ ಸರ್ಕಾರಿ ದಾಖಲೆಗಳನ್ನು ಒದಗಿಸಬೇಕು ಎಂದು ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಠರಾವು ಪಾಸ್ ಮಾಡಲಾಗಿದೆ.
ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಶ್ರೀ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ರವಿವಾರ ನಡೆದ 17ನೇ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೇಂದ್ರ ಸರ್ಕಾರ ಕೂಡಲೇ ಈ ಗಡಿ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಠರಾವು ಕೈಗೊಂಡರು.
ಗಡಿ ಭಾಗದಲ್ಲಿ ನಡೆಯುವ ಮರಾಠಿ ಸಾಹಿತ್ಯ ಸಮ್ಮೇಳನಗಳು ಸಾಹಿತ್ಯ ಹಾಗೂ ಸಂಸ್ಕೃತಿಯ ಅವಿಭಾಜ್ಯ ಅಂಗ. ಮರಾಠಿ ಭಾಷಿಕರು ಕಳೆದ ಆರು ದಶಕಗಳಿಂದ ಗಡಿ ಹೋರಾಟ ನಡೆಸುತ್ತ ಬಂದಿದ್ದಾರೆ. ಇದಕ್ಕೆ ಸಾಹಿತ್ಯ ಸಮ್ಮೇಳನಗಳ ಬೆಂಬಲವೂ ಇದೆ. ಹೀಗಾಗಿ ಮಹಾರಾಷ್ಟç ಸರ್ಕಾರ ಪ್ರತಿ ವರ್ಷ ಸಾಹಿತ್ಯ ಸಮ್ಮೇಳನಗಳಿಗೆ ಎರಡು ತಿಂಗಳ ಮುಂಚಿತವಾಗಿಯೇ ಕನಿಷ್ಠ 5 ಲಕ್ಷ ರೂ. ಅನುದಾನವನ್ನು ಆಯಾ ಸಂಸ್ಥೆಗಳ ಖಾತೆಗೆ ಜಮಾ ಮಾಡಬೇಕು. ಜತೆಗೆ ಗಡಿ ಭಾಗದವರಿಗೆ ಆರ್ಥಿಕ ಹಾಗೂ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.
ಸಮ್ಮೇಳನಾಧ್ಯಕ್ಷ ಪ್ರಾಚಾರ್ಯ ಯಶವಂತ ಪಾಠಣೆ ಮಾತನಾಡಿ, ಧರ್ಮ, ಭಾಷಾ ದ್ವೇಷದಿಂದಾಗಿ ಸಂಸ್ಕೃತಿ ಹಾನಿ ಆಗುತ್ತಿದೆ. ಮನುಷ್ಯನಿಗೆ ಮಾತೃಭಾಷೆ ಮತ್ತು ಸಂಸ್ಕೃತಿ ಮೂಲತಃ ಹಕ್ಕಿನಿಂದಲೇ ಸಿಗುತ್ತವೆ. ಮಾತೃಭಾಷೆ ಎನ್ನುವುದು ಶಿಕ್ಷಣ , ಜ್ಞಾನ ಹಾಗೂ ಸಂಸ್ಕೃತಿಯ ಪ್ರಗತಿಗಾಗಿ ಪ್ರೇರಣೆ ಆಗಿರುತ್ತದೆ. ಆ ಜ್ಞಾನ ಮಾತೃಭಾಷೆಯಲ್ಲಿ ಸಿಕ್ಕವರಿಗೆ ಸಂಸ್ಕೃತಿಯ ಸುಗಂಧ ಇರುತ್ತದೆ. ನಮ್ಮ ಸಂಸ್ಕೃತಿ ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯುವ ಸಂದೇಶ ನೀಡುತ್ತದೆ ಎಂದರು.
ಸಮ್ಮೇಳನ ಉದ್ಘಾಟನೆ ಮುನ್ನ ಗ್ರಂಥ ದಿಂಡಿ ಮೆರವಣಿಗೆ ನಡೆಯಿತು. ನಂತರ ವಿವಿಧ ವಿಷಯಗಳ ಮೇಲೆ ಗೋಷ್ಠಿಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ