ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

ವಿಶಾಲ ಪ್ರದೇಶದಿಂದ ಇಕ್ಕಟ್ಟಾದ ಮೈದಾನಕ್ಕೆ ಶಿಫ್ಟ್‌­ ! ಜನದಟ್ಟಣೆಯಿಂದಾಗಿ ಸಾಮಾಜಿಕ ಅಂತರವೇ ಮಾಯ

Team Udayavani, May 6, 2021, 11:00 PM IST

yryrtyt

ಬೆಳಗಾವಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆವರಣದಲ್ಲಿ ನಡೆಯುತ್ತಿದ್ದ ವ್ಯಾಪಾರ-ವಹಿವಾಟು ವೇಳೆ ಜನದಟ್ಟಣೆ ಆಗುತ್ತಿದೆ ಎಂಬ ನೆಪವೊಡ್ಡಿ ಇಡೀ ಮಾರುಕಟ್ಟೆಯನ್ನೇ ಇಕ್ಕಟ್ಟಾದ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದರಿಂದ ಇಲ್ಲಿಯೂ ಜನದಟ್ಟಣೆಗೆ ಮತ್ತಷ್ಟು ಆಸ್ಪದ ನೀಡಿದಂತಾಗಿದೆ. ಇತ್ತ ಹಗ್ಗ ಹರಿಯಲಿಲ್ಲ, ಹಾವು ಸಾಯಲಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಅತಿ ದೊಡ್ಡ ಆವರಣ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿಯ ಎಪಿಎಂಸಿ ಆವರಣದಲ್ಲಿ ನಿತ್ಯವೂ ಸಗಟು ತರಕಾರಿ ಮಾರುಕಟ್ಟೆ ನಡೆಯುತ್ತಿದೆ. ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಜನದಟ್ಟಣೆ ಆಗುತ್ತಿದೆ ಎಂಬ ಕಾರಣಕ್ಕೆ ಇಡೀ ಮಾರುಕಟ್ಟೆ ವ್ಯವಹಾರವನ್ನೇ ನಗರದ ಬೇರೆ ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ. ಆದರೆ ಇಲ್ಲಿಯೂ ಅತಿ ಹೆಚ್ಚು ಜನದಟ್ಟಣೆ ಆಗಿ ಸಾಮಾಜಿಕ ಅಂತರ ಕಾಪಾಡುವಲ್ಲಿ ಎಲ್ಲರೂ ವಿಫಲರಾಗಿದ್ದಾರೆ.

ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಸಗಟು ತರಕಾರಿ ಮಾರುಕಟ್ಟೆಯನ್ನು ಸದ್ಯ ಎಪಿಎಂಸಿ ಆವರಣದಿಂದ ಬೆಳಗಾವಿ ನಗರದ ಸಿಪಿಎಡ್‌ ಮೈದಾನ ಮತ್ತು ಆಟೋ ನಗರದ ಮೈದಾನಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಎರಡೂ ಮೈದಾನಗಳು ಇಕ್ಕಟ್ಟಾದ ಪ್ರದೇಶಗಳನ್ನೇ ಹೊಂದಿವೆ. ಆದರೆ ಇಲ್ಲಿಯೂ ದಿನನಿತ್ಯ ಜನದಟ್ಟಣೆ ಆಗುತ್ತಿದೆ. ನಿತ್ಯ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ವ್ಯಪಾರ-ವಹಿವಾಟು ನಡೆಯುತ್ತಿದ್ದು, ಇಲ್ಲಿ ಯಾರೂ ಹೇಳುವವರೂ ಇಲ್ಲ, ಕೇಳುವವರೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ವ್ಯಾಪಾರಸ್ಥರು ಹಾಗೂ ರೈತರು ಸಾಮಾಜಿಕ ಅಂತರ ಮರೆತು ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಎಪಿಎಂಸಿ ಆವರಣ ಸುಮಾರು 87 ಎಕರೆಯಷ್ಟು ವಿಶಾಲ ಪ್ರದೇಶ ಹೊಂದಿದೆ. ಸಗಟು ತರಕರಿ ಮಾರುಕಟ್ಟೆ ಆವರಣವಷ್ಟೇ 13 ಎಕರೆಯಷ್ಟು ಇದೆ. 100 ಅಡಿ ಅಗಲವಾದ ರಸ್ತೆಗಳು ಇಲ್ಲಿವೆ. ಇಂಥದರಲ್ಲಿ ಇದೆಲ್ಲವನ್ನು ಬಿಟ್ಟು ಕೇವಲ ಮೂರು ಎಕರೆಯ ಮೈದಾನಗಳಿಗೆ ಮಾರುಕಟ್ಟೆ ಸ್ಥಳಾಂತರಿಸಿದ್ದು ಏಕೆ. ಎಪಿಎಂಸಿ ಆವರಣಕ್ಕಿಂತಲೂ ಹೆಚ್ಚಿನ ಜನಜಂಗುಳಿ ಈ ಮೈದಾನಗಳಲ್ಲಿ ಆಗುತ್ತಿದೆ. ಇಲ್ಲಿ ಕೊರೊನಾ ಹರಡುವುದಿಲ್ಲವೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಸದ್ಯ ಸ್ಥಳಾಂತರಗೊಂಡಿರುವ ಮೈದಾನಗಳಲ್ಲಿ ಎಪಿಎಂಸಿ ಆಡಳಿತ ವತಿಯಿಂದ ತಾತ್ಕಾಲಿಕ ಶೆಡ್‌ ಗಳನ್ನು ನಿರ್ಮಿಸಲಾಗಿದೆ. ಕಳೆದ ವರ್ಷ ಇದೇ ತರಹ ಮಾಲಿನಿ ಮೈದಾನದಲ್ಲಿ ಶೆಡ್‌ ನಿರ್ಮಿಸಲಾಗಿತ್ತು. ಆದರೆ ಧಾರಾಕಾರ ಗಾಳಿ-ಮಳೆಯಿಂದ ಎಲ್ಲ ಶೆಡ್‌ ಪತ್ರೆಗಳು ಹಾರಿ ಹೋಗಿ ಅಪಾರ ಪ್ರಮಾಣದಲ್ಲಿ ಹಾನಿ ಆಗಿತ್ತು. ಈ ಸಲವೂ ಆಗಾಗ ಮಳೆ ಆಗುತ್ತಿದ್ದು, ಈ ಶೆಡ್‌ಗಳು ಹಾರಿ ಹೋಗದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯವೂ ಇದೆ ಎನ್ನುತ್ತಾರೆ ವ್ಯಾಪಾರಸ್ಥರು. ಎಪಿಎಂಸಿ ಆವರಣದಲ್ಲಿಯ ಮೇಲಿನ ಗೇಟ್‌ದಿಂದ ಕೆಳಗಿನ ಗೇಟ್‌ವರೆಗೆ ಒಂದು ಕಿ.ಮೀ. ಅಂತರವಿದೆ.

ಎರಡೂ ಕಡೆಯಿಂದಲೂ ಪ್ರವೇಶ ಮತ್ತು ನಿರ್ಗಮನಕ್ಕೆ ಅವಕಾಶ ಮಾಡಿ ಕೊಟ್ಟರೆ ಜನದಟ್ಟಣೆ ಸಂಪೂರ್ಣವಾಗಿ ಕಡಿಮೆ ಆಗುತ್ತದೆ. ಆದರೆ ಇದೆಲ್ಲವನ್ನೂ ಬಿಟ್ಟು ಬೇರೆ ಕಡೆಗೆ ಸ್ಥಳಾಂತರ ಮಾಡಿ ಜನದಟ್ಟಣೆಗೆ ಎಪಿಎಂಸಿಯೇ ನೇರ ಹೊಣೆ ಎಂದು ವ್ಯಾಪಾರಸ್ಥರು ಆರೋಪಿಸಿದ್ದಾರೆ.

 

ವರದಿ:ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.