ಪೊಲೀಸ್‌ ಠಾಣೆಯಲ್ಲೇ  ಸಪ್ತಪದಿ ತುಳಿದ ಜೋಡಿಹಕ್ಕಿ 


Team Udayavani, Oct 1, 2018, 4:31 PM IST

1-october-17.gif

ಬೆಳಗಾವಿ: ತಮ್ಮ ಪ್ರೀತಿ ಹಾಗೂ ಮದುವೆಗೆ ಮನೆಯವರ ತೀವ್ರ ವಿರೋಧದಿಂದ ಬೇಸತ್ತಿದ್ದ ಯುವ ಪ್ರೇಮಿಗಳು ಕೊನೆಗೆ ಪೊಲೀಸ್‌ ಠಾಣೆಯ ಮೆಟ್ಟಿಲೇರಿ ಅಲ್ಲಿಯೇ ಪೋಷಕರ ಹಾಗೂ ಪೊಲೀಸರ ಸಮ್ಮುಖದಲ್ಲಿ ಹಸೆಮನೆ ಏರಿದ ಅಪರೂಪದ ಪ್ರಕರಣ ಬೆಳಗಾವಿ ನಗರದಲ್ಲಿ ಶನಿವಾರ ನಡೆದಿದೆ.

ಇಲ್ಲಿಯ ವೈಭವ ನಗರದ ಅನಿಲ ಚವ್ಹಾಣ(24) ಹಾಗೂ ರಾಮತೀರ್ಥ ನಗರದ ದೀಪಾ ಲಮಾಣಿ (21) ಮದುವೆಯಾದ ಜೋಡಿ. ಶನಿವಾರ ಸಂಜೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಶ್ರೀದೇವಿ ಪಾಟೀಲ ಹಾಗೂ ಪಾಲಕರ ಸಮ್ಮುಖದಲ್ಲಿ ಈ ಜೋಡಿಯು ಪರಸ್ಪರ ಹಾರ ಹಾಕಿಕೊಳ್ಳುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟಿತು. 

ಕುಟುಂಬದ ವಿರೋಧದಿಂದ ಬೇಸತ್ತು ಠಾಣೆಗೆ ಬಂದಿದ್ದ ಈ ಜೋಡಿಯ ಪ್ರೇಮದ ಕತೆ ಕೇಳಿದ ಪೊಲೀಸ್‌ ಅಧಿಕಾರಿ ಶ್ರೀದೇವಿ ಪಾಟೀಲ ಇಬ್ಬರೂ ಪಾಲಕರನ್ನು ಠಾಣೆಗೆ ಕರೆಸಿ ಮಾತನಾಡಿದ್ದಾರೆ. ಎರಡೂ ಕಡೆಯ ಕುಟುಂಬದ ಸದಸ್ಯರ ಅಭಿಪ್ರಾಯ ಆಲಿಸಿದ ಪೊಲೀಸ್‌ ಸಿಬ್ಬಂದಿ, ಕೊನೆಗೆ ಪಾಲಕರ ಮನವೊಲಿಸುವಲ್ಲಿ ಯಶಸ್ವಿಯಾಗಿ ಠಾಣೆಯಲ್ಲೇ ಈ ಜೋಡಿಯ ಮದುವೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಗೆ ಮದುವೆಯಾಗಲು ಮನೆಯವರ ಒಪ್ಪಿಗೆ ಇರಲಿಲ್ಲ. ಅನಿಲ ಚವ್ಹಾಣ ಕುಟುಂಬದಿಂದ ಒಪ್ಪಿಗೆ ಸಿಕ್ಕಿರಲಿಲ್ಲ. ಇದರಿಂದ ಬೇಸತ್ತ ದೀಪಾ ಹಾಗೂ ಅನಿಲ ಮನೆಯವರು ಇದಕ್ಕೆ ವಿರೋಧ ಮಾಡಿದ್ದರು. ಎರಡೂ ಮನೆಯವರನ್ನು ಅನುಮತಿ ಕೊಡುವಂತೆ ಸಾಕಷ್ಟು ಪ್ರಯತ್ನ ಮಾಡಿದ ದೀಪಾ ಹಾಗೂ ಅನಿಲ ಕೊನೆಗೆ ಅನಿವಾರ್ಯವಾಗಿ ಪೊಲೀಸ್‌ ಠಾಣೆಯ ಮೆಟ್ಟಿಲು ಹತ್ತಿದರು. ಯುವ ಜೊಡಿಯ ಬೆಂಬಲಕ್ಕೆ ನಿಂತು ಠಾಣೆಯಲ್ಲೇ ಅಪರೂಪದ ಮದುವೆ ಮಾಡಿ ಯುವ ಜೋಡಿಯ ಬಾಳಲ್ಲಿ ಸಂತಸ ಮೂಡುವಂತೆ ಮಾಡಿದರು. ಎರಡೂ ಮನೆಯ ಪಾಲಕರು ಈ ಸಂತಸದಲ್ಲಿ ಭಾಗಿಯಾಗಿದ್ದರು.

ಈ ಜೋಡಿಯು ಶನಿವಾರ ಇಲ್ಲಿಗೆ ಬರುವ ಮೊದಲು ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಆದರೆ ಅವರಿಗೆ ಧೈರ್ಯ ಇರಲಿಲ್ಲ. ನಮ್ಮನ್ನು ಸಂಪರ್ಕಿಸಿ ನಾವು ಠಾಣೆಯಲ್ಲೇ ಮತ್ತೆ ನಿಮ್ಮ ಎದುರಲ್ಲಿ ಮದುವೆಯಾಗುತ್ತೇವೆ ಎಂದು ಕೇಳಿದರು. ಇವರ ಮಾತು ಕೇಳಿ ನಾವೇ ಅವರ ಪಾಲಕರನ್ನು ಕರೆಸಿ ಅವರ ಮನವೊಲಿಸಿ ಮದುವೆ ಮಾಡಿಸಿದ್ದೇವೆ ಎಂದು ಪೊಲೀಸ್‌ ಅಧಿಕಾರಿ ಶ್ರೀದೇವಿ ಪಾಟೀಲ ‘ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.