ಮಾಸ್ಕ್-ಸ್ಯಾನಿಟೈಸರ್-ಗ್ಲೌಸ್ ವಿತರಣೆ
Team Udayavani, Apr 22, 2020, 4:31 PM IST
ಬೆಳಗಾವಿ: ಕೋವಿಡ್ 19 ವೈರಸ್ ಹರಡದಂತೆ ಶ್ರಮಿಸುತ್ತಿರುವವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವತಿಯಿಂದ ಮಾಸ್ಕ್ಗಳು, ಸ್ಯಾನಿಟೈಸರ್ ಮತ್ತು ಹ್ಯಾಂಡ್ ಗ್ಲೌಸ್ ವಿತರಿಸಲಾಯಿತು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಂ. ರಾಮಚಂದ್ರಗೌಡ ಕುಲಪತಿಗಳ ನೇತೃತ್ವದಲ್ಲಿ ಕೊರೊನಾ ವಾರಿಯರ್ಸ್ ಗಳಾದ ಪೌರ ಕಾರ್ಮಿಕರು, ಹೋಮ್ ಗಾಡ್ಸ್ ಹಾಗೂ ಪೊಲೀಸ್ ಸಿಬ್ಬಂದಿಗೆ1000 ಮಾಸ್ಕ್, 400 ಸ್ಯಾನಿಟೈಸರ್ ಹಾಗೂ 500 ಹ್ಯಾಂಡ್ ಗ್ಲೌಸ್ಗಳನ್ನು ನೀಡಲಾಯಿತು.
ಮಹಾನಗರ ಪಾಲಿಕೆ ಆಯುಕ್ತ ಜಗದೀಶ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ, ಬೆಳಗಾವಿಯ ಹೋಮ್ಗಾರ್ಡ್ಸ್ ಕಮಾಂಡೆಂಟ್ ಆಫೀಸರ್ ಡಾ| ಕಿರಣ ನಾಯಿಕ ಸಮ್ಮುಖದಲ್ಲಿ ಸಾಮಗ್ರಿ ವಿತರಿಸಲಾಯಿತು. ಕುಲಪತಿ ಪ್ರೊ| ಎಂ. ರಾಮಚಂದ್ರಗೌಡ ಮಾತನಾಡಿ, ಕೋವಿಡ್ 19 ವೈರಸ್ ದೇಶಕ್ಕೆ ತಗುಲಿದ ಪಿಡುಗು. ಇದನ್ನು ಪ್ರತಿಯೊಬ್ಬರೂ ಒಂದಾಗಿ ತೊಲಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ವೈದ್ಯರು, ಪೌರ ಕಾರ್ಮಿಕರು, ಪೊಲೀಸರು, ಹೋಮ್ಗಾಡ್ಸ್ ಮತ್ತು ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆ ಶ್ಲಾಘನೀಯ ಎಂದರು.
ಈ ವೇಳೆ ಕುಲಸಚಿವರಾದ ಪ್ರೊ| ಬಸವರಾಜ ಪದ್ಮಶಾಲಿ, ಹಣಕಾಸು ಅಧಿಕಾರಿ ಪ್ರೊ| ಡಿ.ಎನ್. ಪಾಟೀಲ, ಕುಲಪತಿಗಳ ವಿಶೇಷಾಧಿಕಾರಿ ಡಾ| ಎಂ. ಜಯಪ್ಪ, ಪ್ರೊ| ವಿಜಯಲಕ್ಷ್ಮೀಶೀಗೆಹಳ್ಳಿ, ಪ್ರೊ| ಚಂದ್ರಕಾಂತ ವಾಘಮೋರೆ, ಪ್ರೊ| ಚಂದ್ರಿಕಾ ಕೆ.ಬಿ, ವಿಶ್ವವಿದ್ಯಾಲಯದ ವೈದ್ಯಾಧಿಕಾರಿ ಡಾ| ಯೋಗಿತಾ ಪೋತದಾರ, ರಾಷ್ಟ್ರೀಯ ಸೇವಾ ಯೋಜನಾ ಸಂಯೋಜಕ ಪ್ರೊ| ಬಿ.ಎಸ್. ನಾವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ