ಅಥಣಿ ಹೆಸ್ಕಾಂನಲ್ಲಿ ಭಾರಿ ಭ್ರಷ್ಟಾಚಾರ!

ಪ್ರಮುಖ 13 ಕೆಲಸಗಳ ಬಗ್ಗೆ ಮಾಹಿತಿ ಕೇಳಿ ನೋಟಿಸ್‌ ಜಾರಿ ಮಾಡಿದ ಹೆಸ್ಕಾಂ ಜಾಗೃತದಳ

Team Udayavani, Apr 27, 2021, 6:09 PM IST

fyhrtyr

ವರದಿ: ಸಂತೋಷ ರಾ ಬಡಕಂಬಿ

ಅಥಣಿ: ಪಟ್ಟಣ ಮತ್ತು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಹಾಗೂ ನಿರ್ಮಾಣಗೊಂಡ ನೂತನ ಬಡಾವಣೆಗಳಿಗೆ ವಿದ್ಯುತ್‌ ಸಂಪರ್ಕ ನೀಡುವಾಗ ಸಾಕಷ್ಟು ಅವ್ಯವಹಾರ ನಡೆದ ಬಗ್ಗೆ ಸಾರ್ವಜನಿಕರಿಂದ ಚಿಕ್ಕೋಡಿಯ ಹೆಸ್ಕಾಂ ಜಾಗೃತದಳ ಪೊಲೀಸ್‌ ಠಾಣೆಗೆ ದೂರು ಹೋಗಿದ್ದವು. ಆ ದೂರುಗಳನ್ನಾಧರಿಸಿ ಹೆಸ್ಕಾಂ ಜಾಗೃತದಳ ಪರಿಶೀಲನೆ ನಡೆಸಿ, ಮೇಲ್ನೋಟಕ್ಕೆ ಅವ್ಯವಹಾರ ಕಂಡು ಬಂದಿದ್ದರಿಂದ ಕೆಲವು ಅಂಶಗಳ ಮಾಹಿತಿ ಕೋರಿ ನೋಟಿಸ್‌ ನೀಡಿದೆ.

ಯಾವುದೇ ಪೂರ್ವಾನುಮತಿ ಇಲ್ಲದೆ ನೇರವಾಗಿ ಬಡಾವಣೆಗಳಿಗೆ ವಿದ್ಯುತ್‌ ಸಂಪರ್ಕ ನೀಡಿದ್ದರಿಂದ ಸಂಸ್ಥೆಗೆ ಕೋಟ್ಯಾಂತರ ರೂ. ಹಾನಿ ಆಗಿದೆ ಎಂಬ ಅಂಶ ಇಲಾಖೆಯ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಏನಿದು ಪ್ರಕರಣ?: ಹೆಸ್ಕಾಂ ಜಾಗೃತ ದಳ ಏ.3ರಂದು ಅಥಣಿಯ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರು(ವಿ)ಕಾ ಮತ್ತು ಪಾ ಉಪವಿಭಾಗ ಇವರಿಗೆ ಜಾರಿ ಮಾಡಿದ್ದು, ಹಲವು ವಿಷಯಗಳ ಮಾಹಿತಿ ಕೇಳಲಾಗಿದೆ.

ಅಥಣಿಯ ಹಲ್ಯಾಳ ರಸ್ತೆಯ ಹನುಮಾನ ನಗರದ ಡಾಂಗೆ ಲೇಔಟ್‌, 220 ಕೆ.ವಿ.ಎ. ಎದುರಿಗಿನ ಐಹೊಳೆ ಲೇಔಟ್‌, ಚಿಕ್ಕಮಕ್ಕಳ ಆಸ್ಪತ್ರೆ ಹತ್ತಿರದ ಜಾಧವ ಲೇಔಟ್‌, ಹಲ್ಯಾಳ ರಸ್ತೆಯ ಕರಾಳೆ ಲೇಔಟ್‌, ಐಹೊಳೆ ಲೇಔಟ್‌, ತಂಗಡಿ-ಶಿನ್ನಾಳ ರಸ್ತೆಯ ಡಾಲರ್ ಕಾಲೋನಿ ಲೇಔಟ್‌ಗಳು ಅಧಿಕೃತವೋ ಅಥವಾ ಅನಧಿಕೃತವಾಗಿಯೋ ಎಂದು ಹಾಗೂ ಇತರೆ ಮಾಹಿತಿ ಕೇಳಿದ್ದಾರೆ. ಇದಲ್ಲದೆ ಪಟ್ಟಣದ ಮಿರಜ್‌ ರಸ್ತೆಯ ಅಶೋಕ ಐಗಳಿ ಗ್ಯಾರೇಜ್‌ ಇಲ್ಲಿ ರ್ಯಾಬಿಟ್‌ ವೈರ್‌ ಅಳವಡಿಸುವ ಬದಲು ನಂ. 2 ಎ.ಸಿ.ಎಸ್‌.ಆರ್‌.(ವಿಸೇಲ್‌) ವೈರ್‌ ಉಪಯೋಗಿಸಲಾಗಿದ್ದು, ಸದರಿ ಕಾಮಗಾರಿಗಳ ಅಂದಾಜು ಪತ್ರಿಕೆ ಮತ್ತು ಶೇ. 10 ಸೂಪರ್‌ವೈಸರ್‌ ಶುಲ್ಕ ತುಂಬಿದ ಬಗ್ಗೆ ಮಾಹಿತಿ ನೀಡಬೇಕು.

ಡಾಂಗೆ ಲೇಔಟ್‌ ಜಾಧವ ಆಸ್ಪತ್ರೆ ಹತ್ತಿರದ 63 ಕೆ.ವಿ.ಎ. ಟಿಸಿಯನ್ನು ಇದ್ದ ಸ್ಥಳ ಬಿಟ್ಟು ಬೇರೆ ಕಡೆ ಸ್ಥಳಾಂತರ ಮಾಡಿದ್ದು. ಅದರ ಪರಿವರ್ತನೆ ಮಾನ್ಯತೆ ಪತ್ರ ಮತ್ತು ಅಂದಾಜು ಪತ್ರಿಕೆ, ಹೆಸ್ಕಾಂಗೆ ಕಟ್ಟಬೇಕಾದ ಶೇ.10 ಸೂಪರ್‌ವೈಸರ್‌ ಚಾರ್ಜ್‌ ತುಂಬಿದ ಬಗ್ಗೆ, ರಾಮು ಗಾಡಿವಡ್ಡರ ಇವರ ಹೆಸರಿನಲ್ಲಿರುವ ಎಲ್‌.ಟಿ ಸ್ಥಾವರ ಅಕೌಂಟ್‌ ಐಡಿ ನಂ. 6012381671 ವನ್ನು ಎಚ್‌.ಟಿಗೆ ಪರಿವರ್ತಿಸಲಾಗಿದ್ದು, ಮೊದಲಿನ ಪರಿವರ್ತಕಗಳನ್ನು ಹೆಸ್ಕಾಂ ಉಗ್ರಾಣಕ್ಕೆ ಜಮಾ ಮಾಡಿದ್ದ ಬಗ್ಗೆ ದಾಖಲೆ ಕೇಳಿದ್ದಾರೆ.

ಡಾಂಗೆ ಲೇಔಟ್‌ ಭಾಗಿರಥಿ ನಗರದಲ್ಲಿನ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿದ ಕುರಿತು ಮಾಹಿತಿ ಕೇಳಿದ್ದಾರೆ. ಬೃಂದಾವನ ಹೊಟೇಲ್‌ ಹಿಂದಿನ ಲೇಔಟ್‌ ಸರ್ವೇ ನಂ 1246/ಎಚ್‌ ಅಧಿಕೃತತೆ ಬಗ್ಗೆ ನೋಟಿಸ್‌ನಲ್ಲಿ ವಿಚಾರಿಸಲಾಗಿದೆ. ಬೃಂದಾವನ ಹೋಟೆಲ್‌ ಪಕ್ಕದಲ್ಲಿರುವ ಗ್ಯಾರೇಜ್‌ಗೆ ಅಳವಡಿಸಿದ 100 ಕೆ.ವಿ.ಎ ಟಿಸಿ ಅಂದಾಜು ಪತ್ರಿಕೆ ಹಾಗೂ ಸೂಪರವೈಸಿಂಗ್‌ ಚಾರ್ಜ್‌ ಭರಿಸಿದ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ಎಲ್ಲಾ ಮಾಹಿತಿ ಗಮನಿಸಿದಾಗ ಅಥಣಿ ವಿಭಾಗದಲ್ಲಿ ಭಾರಿ ಗೋಲ್‌ಮಾಲ್‌ ನಡೆದಿರುವಂತೆ ಭಾಸವಾಗುತ್ತದೆ ಎಂಬುದು ಸಾರ್ವಜನಿಕರ ಅನಿಸಿಕೆಯಾಗಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.