ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಯಡೂರಿನಿಂದ ಬೆಳಗಾವಿ ಸುವರ್ಣಸೌಧವರೆಗೆ ಬೃಹತ್ ಪಾದಯಾತ್ರೆ: ಎಸ್. ವೈ. ಹಂಜಿ
Team Udayavani, Dec 22, 2022, 12:42 PM IST
ಚಿಕ್ಕೋಡಿ: ಬೆಳಗಾವಿ ವಿಭಜಿಸಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಡಿಸೆಂಬರ್ 23 ರಿಂದ 26 ರವರೆಗೆ ಯಡೂರ ವೀರಭದ್ರೇಶ್ವರ ದೇವಸ್ಥಾನದಿಂದ ಬೆಳಗಾವಿ ಸುವರ್ಣಸೌಧದವರೆಗೆ ಪಾದಯಾತ್ರೆಯನ್ನು ಹಮ್ಮಿಕೊಂಡು ಸರ್ಕಾರಕ್ಕೆ ಹಕ್ಕೋತ್ತಾಯ ಮಾಡಲಾಗುತ್ತದೆ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ವೈ.ಹಂಜಿ ಹೇಳಿದರು.
ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡುವಂತೆ ಕಳೆದ ಹಲವಾರು ವರ್ಷಗಳಿಂದ ಹೋರಾಟವನ್ನು ಮಾಡಿಕೊಂಡು ಬರುತ್ತಿದೇವೆ. ಆದರೆ ಇದುವರೆಗೆ ಚಿಕ್ಕೋಡಿ ಜಿಲ್ಲೆ ಆಗದೇ ಇರುವುದು ವಿಪರ್ಯಾಸ ಸಂಗತಿ.
ಸದ್ಯ ಇಡೀ ಸರ್ಕಾರವೇ ಬೆಳಗಾವಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನು ಮಾಡುವಂತೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಡಿಸೆಂಬರ್ 23 ರಂದು ಮುಂಜಾನೆ 11 ಗಂಟೆಗೆ ಯಡೂರಿನ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪಾದಯಾತ್ರೆಗೆ ಚಾಲನೆಯನ್ನು ನೀಡಲಾಗುವುದು. ಈ ಪಾದಯಾತ್ರೆ 4 ದಿನಗಳ ಕಾಲ ನಡೆಯಲಿದೆ. ವಿವಿಧ ಸಂಘಟನೆಗಳ ಸದಸ್ಯರು ಸೇರಿ ಒಟ್ಟು 2-3 ಸಾವಿರ ಜನರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದಲ್ಲದೇ ಎಲ್ಲ ರಾಜಕೀಯ ಪಕ್ಷದ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅಂತಿಮವಾಗಿ ಪಾದಯಾತ್ರೆಯು ಬೆಳಗಾವಿ ಸುವರ್ಣಸೌಧಕ್ಕೆ ತೆರಳಿ ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನು ಮಾಡುವಂತೆ ಮನವಿಯನ್ನು ಮಾಡಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ತುಕಾರಾಮ ಕೋಳಿ, ರವಿ ಹಂಪನ್ನವರ. ರುದ್ರಪ್ಪಾ ಸಂಗಪ್ಪಗೋಳ, ಬಸವರಾಜ ಢಾಕೆ, ಸುರೇಶ ಬ್ಯಾಕೂಡೆ, ಎಂ.ಎ.ಪಾಟೀಲ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ